nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೋರಣ್ಣ ಸ್ವಪಕ್ಷದಲ್ಲೇ ಇದ್ದಾರೆ: ಜೆಡಿಎಸ್ ಮುಖಂಡರಿಂದ ಸ್ಪಷ್ಟನೆ
    ಕೊರಟಗೆರೆ July 23, 2022

    ಬೋರಣ್ಣ ಸ್ವಪಕ್ಷದಲ್ಲೇ ಇದ್ದಾರೆ: ಜೆಡಿಎಸ್ ಮುಖಂಡರಿಂದ ಸ್ಪಷ್ಟನೆ

    By adminJuly 23, 2022No Comments2 Mins Read
    borana

    ಕೊರಟಗೆರೆ: ಮಾಜಿ ತಾಲ್ಲೂಕು ಪಂಚಾಯತಿ ಸದಸ್ಯ ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾದ ಬೋರಣ್ಣ ಸ್ವಪಕ್ಷದಲ್ಲೇ ಇದ್ದಾರೆ ಎಂದು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಶಿವರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಇತ್ತೀಚೆಗೆ ಜೆಡಿಎಸ್ ಪಕ್ಷದ ಹಿರಿಯ ಮುಖಂಡ ಬೋರಣ್ಣ ಮತ್ತು ರಂಗನರಸಯ್ಯ ತಾಲ್ಲೂಕು ಒಕ್ಕಲಿಗ ಸಂಘದ ವಿಷಯವಾಗಿ ಕ್ಷೇತ್ರದ ಶಾಸಕರಾದ ಡಾ.ಜಿ. ಪರಮೇಶ್ವರ್ ರವರ ಬಳಿ ಹೋದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಕೆಲ ಮುಖಂಡರು ಅವರಿಗೆ ಹಾರ ಹಾಕಿ ಪೋಟೋ ತೆಗೆದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಬಿಟ್ಟಿದ್ದಾರೆ.


    Provided by
    Provided by

    ಇದನ್ನು ಅರಿತ ಬೋರಣ್ಣ ನೊಂದು ಈ ಪತ್ರಿಕಾ ಹೇಳಿಕೆ ನೀಡಿದ್ದಾರೆ ಇದು ಕಾಂಗ್ರೆಸ್ ಪಕ್ಷದವರಿಗೆ ಶೋಭೆ ತರುವುದಿಲ್ಲ, ಶಾಸಕರು ಕೂಡ ಇಂತಹ ಘಟನೆ ಬಗ್ಗೆ ಅವರ ಕಾರ್ಯಕರ್ತರಿಗೆ ಬುದ್ದಿ ಹೇಳಬೇಕು. 150 ವರ್ಷದ ಹಳೆಯ ಪಕ್ಷಕ್ಕೆ ಈ ರೀತಿಯ ಸ್ಥಿತಿ ಇದೆಯೇ..? ಬೋರಣ್ಣ ನಮ್ಮ ಹಿರಿಯ ಮುಖಂಡರಾಗಿದ್ದು ಪಕ್ಷದ ಕೆಲಸಗಳನ್ನು ಶ್ರದ್ಧೆಯಿಂದ ಮಾಡುತ್ತಿದ್ದಾರೆ ಎಂದು ಶಿವರಾಮಯ್ಯ ಹೇಳಿದರು.

    ತಾಲ್ಲೂಕು ಜೆಡಿಎಸ್ ಪಕ್ಷ ಕಾರ್ಯಾದ್ಯಕ್ಷ ನರಸಿಂಹರಾಜು ಮಾತನಾಡಿ, ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷ ಒಗಟ್ಟಾಗಿದೆ ಮಾಜಿ ತಾ.ಪಂ.ಸದಸ್ಯ ಬೋರಣ್ಣ ನವರ ಕಾಂಗ್ರೆಸ್ ಪಕ್ಷದ ಸೇರ್ಪಡೆ ವದಂತಿ ಸುಳ್ಳು ನಮ್ಮಲ್ಲಿ ಎಲ್ಲಾ ಪಕ್ಷದ ಮುಖಂಡರು ಕಾರ್ಯಕರ್ತರಿಗೆ ಗೌರವ ನೀಡುತ್ತೇವೆ. ಇಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷವರು ಮಾಡಬಾರದು ಎಂದರು.

    ಜೆಡಿಎಸ್ ಪಕ್ಷದ ಕಾರ್ಯಾಧ್ಯಕ್ಷ ಮಹಾಲಿಂಗಪ್ಪ ಮಾತನಾಡಿ, ಮುಂಬರುವ ದಿನಗಳಲ್ಲಿ ಇತರ ಪಕ್ಷಗಳಿಂದ ಜೆಡಿಎಸ್ ಪಕ್ಷಕ್ಕೆ ಸಾಕಷ್ಟು ಮುಖಂಡರು ಕಾರ್ಯಕರ್ತರು ಸೇರ್ಪಡೆಯಾಗಲಿದ್ದಾರೆ. ಆದರೆ ಅವರು ಸ್ವಇಚ್ಛೆಯಿಂದ ಪಕ್ಷಕ್ಕೆ ಬರುತ್ತಿದ್ದಾರೆ. ಬೋರಣ್ಣ ನವರ ವಿಷಯದಲ್ಲಿ ಕೊರಟಗರೆ ಕಾಂಗ್ರೆಸ್ ಪಕ್ಷದ ಮುಖಂಡರು ಈ ರೀತಿ ನಡೆದುಕೊಂಡಿದ್ದು ಸರಿಯಲ್ಲ ಎಂದರು.

    ಮಾಜಿ ತಾ.ಪಂ. ಸದಸ್ಯ ಬೋರಣ್ಣ ಮಾತನಾಡಿ, ನಾನು ನನ್ನ ಸಂಘದ ಕಟ್ಟಡದ ಅನುದಾನಕ್ಕಾಗಿ ನಮ್ಮ ಅಧ್ಯಕ್ಷರೊಂದಿಗೆ ಶಾಸಕ ಬಳಿ ಹೋದಾಗ ಅವರ ಪಕ್ಷದ ಮುಖಂಡರು ನನಗೆ ಶಾಲು ಹಾಕಿ ಹಾರ ಹಾಕಿದರು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ನಂತರ ನನಗೆ ಕರೆ ಬಂದಾಗಲೇ ನನಗೂ ಕೂಡ ತಿಳಿದ್ದಿದು. ಅದರೆ ಇದು ಶಾಸಕರ ಅರಿವಿಗೂ ಬರಲ್ಲಿಲ್ಲ ಅವರ ಪಾತ್ರವೂ ಇಲ್ಲ. ಇದು ಅವರ ಮುಖಂಡರು ಮಾಡಿದ ಕೆಲಸ. ನಾನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ ಎಂದು ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ವಕ್ತಾರ ಲಕ್ಷ್ಮೀಶ್, ಮುಖಂಡರಾದ ಕಾಮರಾಜು, ದೊಡ್ಡಯ್ಯ, ಎಲ್.ವಿ.ಪ್ರಕಾಶ್, ಮುರುಡಪ್ಪ, ವೆಂಕಟೇಶ್, ಸಂತೋಷ್ಗೌಡ, ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಾಧನಾ ಸಮಾವೇಶ: ಕೊರಟಗೆರೆಯ 13,353 ಫಲಾನುಭವಿಗಳಿಗೆ ಸೌಲಭ್ಯ

    May 19, 2026

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ

    May 21, 2026

    ತುಮಕೂರು: ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದೊಂದಿಗೆ ಹಾಗೂ ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯದಡಿಯಲ್ಲಿ ನಡೆಯುತ್ತಿರುವ ಎಸ್.ಬಿ.ಐ.…

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.