nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಂಡಿಗೆ ಬಿದ್ದು ಬಾಲಕ ಸಾವು: ನಗರಸಭೆ ಎದುರು ನಗರ ಸಭಾ ಸದಸ್ಯರಿಂದ ಧರಣಿ
    ಜಿಲ್ಲಾ ಸುದ್ದಿ August 26, 2024

    ಗುಂಡಿಗೆ ಬಿದ್ದು ಬಾಲಕ ಸಾವು: ನಗರಸಭೆ ಎದುರು ನಗರ ಸಭಾ ಸದಸ್ಯರಿಂದ ಧರಣಿ

    By adminAugust 26, 2024No Comments1 Min Read

    ಹೊಸಪೇಟೆ (ವಿಜಯನಗರ): ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ಘಟನೆ ನಗರಸಭೆ 7ನೇ ವಾರ್ಡ್‌ನ ಅನಂತಶಯನಗುಡಿಯಲ್ಲಿ ನಡೆದಿದ್ದು, ಘಟನೆ ಹಿನ್ನೆಲೆ ಸೋಮವಾರ ನಗರಸಭೆ ಸದಸ್ಯರು ನಗರಸಭಾ ಕಚೇರಿ ಮುಂಭಾಗ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

    ಪಕ್ಷಾತೀತವಾಗಿ ಧರಣಿ ನಡೆಸಿದ ಸದಸ್ಯರು ಪೌರಾಯುಕ್ತ ಚಂದ್ರಪ್ಪ ಅವರ ಅಮಾನತಿಗೆ ಒಕ್ಕೊರಲ ಒತ್ತಾಯ ಮಾಡಿದರು.


    Provided by
    Provided by

    ಸದ್ಯ ನಗರಸಭೆಯಲ್ಲಿ ಅಧ್ಯಕ್ಷರಿಲ್ಲ, ಜಿಲ್ಲಾಧಿಕಾರಿ ಅವರೇ ಆಡಳಿತಾಧಿಕಾರಿ ಆಗಿದ್ದು, ಅವರ ಅಧಿಕಾರ ಅವಧಿಯಲ್ಲಿ ಮಗು ಸತ್ತಿದೆ, ಸ್ವತಃ ಡಿ.ಸಿ ಅವರೇ ಸ್ಥಳಕ್ಕೆ ಬರಬೇಕು, ಅಲ್ಲಿಯವರೆಗೆ ಸ್ಥಳದಿಂದ ಕದಲುವುದಿಲ್ಲ ಎಂದು ಸದಸ್ಯರು ಪಟ್ಟು ಹಿಡಿದರು.

    ಬೆಳಿಗ್ಗೆ 10 ಗಂಟೆಗೆ ಆರಂಭವಾದ ಧರಣಿ ಸ್ಥಳಕ್ಕೆ ಮಧ್ಯಾಹ್ನ 1 ಗಂಟೆಯಾದರೂ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ಬರಲಿಲ್ಲ, ಪೌರಾಯುಕ್ತರು, ಶಾಸಕರು ಸಹ ಬರಲಿಲ್ಲ. ಹೀಗಾಗಿ ಸಂಜೆಯವರೆಗೂ ಧರಣಿ ಮುಂದುವರಿಸಲು ಸದಸ್ಯರು ನಿರ್ಧರಿಸಿದರು.

    7ನೇ ವಾರ್ಡ್ ಸದಸ್ಯೆ ಕನಕಮ್ಮ ಅವರು 15 ದಿನದ ಹಿಂದೆಯೇ ಜನವಸತಿ ಪ್ರದೇಶದಲ್ಲಿ ಖಾಸಗಿ ಸ್ಥಳದಲ್ಲಿ ಇರುವ ಗುಂಡಿಯ ಬಗ್ಗೆ ಆಯುಕ್ತರಿಗೆ ದೂರು ಕೊಟ್ಟಿದ್ದರು ಹಾಗೂ ಗುಂಡಿ ಮುಚ್ಚಿಸಬೇಕು ಎಂದು ಒತ್ತಾಯಿಸಿದ್ದರು. ಆದರೆ ಮನವಿಯನ್ನು ಆಯುಕ್ತರು ಕಡೆಗಣಿಸಿದ್ದರು. ಖಾಸಗಿ ಸ್ಥಳದಲ್ಲಿ ಗುಂಡಿ ಮುಚ್ಚಿಸಲು ಅವರು ಖಾಸಗಿ ವ್ಯಕ್ತಿಗೆ ನೋಟಿಸ್ ಸಹ ನೀಡಿರಲಿಲ್ಲ ಎಂದು ಧರಣಿ ವೇಳೆ ಸ್ವತಃ ಕನಕಮ್ಮ ಹೇಳಿದರು.

    ಸದಸ್ಯರು ಆಯುಕ್ತ ಚಂದ್ರಪ್ಪ ಅವರ ಪ್ರತಿಕೃತಿಯನ್ನು ತಮ್ಮ ಮುಂದುಗಡೆಯೇ ಇಟ್ಟಿದ್ದರು. ಒಂದು ಹಂತದಲ್ಲಿ ಪ್ರತಿಕೃತಿ ದಹಿಸಲು ಸಹ ಯತ್ನಿಸಿದರು. ಆದರೆ, ಪೊಲೀಸರ ಸೂಚನೆಯಂತೆ ಅದನ್ನು ಆ ಹಂತದಲ್ಲಿ ಮುಂದೂಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.