ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ಭೀಮಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಬಳಿ ನಡೆದಿದೆ.
ಆದರ್ಶ ವಿದ್ಯಾಲಯದಲ್ಲಿ ಓದುತ್ತಿದ್ದ ಪ್ರಜ್ವಲ್ ಹರವಾಳ (16) ಮೃತಪಟ್ಟ ಬಾಲಕನಾಗಿದ್ದಾನೆ. ಎರಡು ದಿನಗಳ ರಜೆಯ ಹಿನ್ನೆಲೆ ಪ್ರಜ್ವಲ್ ಸ್ವಗ್ರಾಮ ಹರವಾಳಕ್ಕೆ ಬಂದಿದ್ದ.
ಈ ವೇಳೆ ಸ್ನೇಹಿತರೊಂದಿಗೆ ಸೇರಿ ಭೀಮಾ ನದಿಗೆ ಈಜಲು ತೆರಳಿದ್ದ. ನೀರಿನ ಆಳ ತಿಳಿಯದೇ ಇಳಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4