ಮುಂದಿನ ಜೂನ್ ವೇಳೆಗೆ 8 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವ ಉಮೇಶ್ ಕತ್ತಿ ತಿಳಿಸಿದರು.
ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯ ಯು.ಬಿ.ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬಿಪಿಎಲ್ ಕಾರ್ಡ್ಗಾಗಿ 15,53,745 ಅರ್ಜಿಗಳು ಸ್ವೀಕೃತವಾಗಿವೆ. ಈ ಪೈಕಿ 8,03,782 ಅರ್ಜಿದಾರರಿಗೆ ಪಡಿತರಚೀಟಿ ನೀಡಲಾಗಿದೆ.
3,24,601 ಅರ್ಜಿಗಳು ತಿರಸ್ಕøತವಾಗಿದೆ. ಒಟ್ಟು 11,28,383 ಅರ್ಜಿಗಳು ವಿಲೇವಾರಿಯಾಗಿವೆ. 4,25,362 ಅರ್ಜಿಗಳು ಬಾಕಿ ಇವೆ ಎಂದು ವಿವರಿಸಿದರು. ರಾಜ್ಯದಲ್ಲಿ ಅನರ್ಹರು ಪಡೆದಿದ್ದ 13 ಲಕ್ಷ ಕಾರ್ಡ್ಗಳನ್ನು ರದ್ದುಪಡಿಸಲಾಗಿದೆ.
ಅವುಗಳಲ್ಲಿ ಜಿಲ್ಲಾವಾರು ಹಂಚಿಕೆ ಮಾಡಿ ಅರ್ಹರಿಗೆ ಕಾರ್ಡ್ ವಿತರಿಸಲಾಗುತ್ತಿದ್ದು, ಒಟ್ಟು 8 ಲಕ್ಷ ಕಾರ್ಡ್ ನೀಡುವ ಗುರಿ ಹೊಂದಲಾಗಿದೆ. ಈ ತಿಂಗಳ ಅಂತ್ಯಕ್ಕೆ 4 ಲಕ್ಷ ಉಳಿದ ಮೂರು ತಿಂಗಳಲ್ಲಿ 4 ಲಕ್ಷ ಕಾರ್ಡ್ಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ವರದಿ: ಆಂಟೋನಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5