ಪಾವಗಡ: ಭಾರತೀಯ ಪರಿವರ್ತನ ಸಂಘ–BPS, ಪಾವಗಡ ತಾಲ್ಲೂಕು ವತಿಯಿಂದ ಹೈಕೋರ್ಟ್ ವಕೀಲರು ಹಾಗೂ ರಾಜ್ಯಧ್ಯಕ್ಷ ಪ್ರೊ.ಹರಿರಾಮ್ ಅವರ ನೇತೃತ್ವದಲ್ಲಿ ಹರಿಹರಪುರ ಗ್ರಾಮಕ್ಕೆ ಭೇಟಿ ನೀಡಿ ಬೆಂಕಿ ಅವಘಡದಿಂದ ಗುಡಿಸಲು ಕಳೆದುಕೊಂಡು ಸಂಕಷ್ಟದಲ್ಲಿರುವ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಲಾಯಿತು.
ನಿಡಗಲ್ಲು ಹೋಬಳಿ ಹರಿಹರಪುರ ಗ್ರಾಮದಲ್ಲಿ ಭೂತಮ್ಮ ಕೋಂ ದೊಡ್ಡಣ್ಣ ಎಂಬ 2 ಕುಟುಂಬಗಳ ಗುಡಿಸಲು ಮನೆ ಸುಟ್ಟು ಹೋಗಿತ್ತು. ಈ ಹಿನ್ನೆಲೆಯಲ್ಲಿ ಪ್ರೊ.ಹರಿರಾಮ್ ನೇತೃತ್ವದಲ್ಲಿ BPS ಮುಖಂಡರು ಸಂತ್ರಸ್ತರನ್ನು ಭೇಟಿಯಾಗಿ ಸಾಂತ್ವನ ಹೇಳಿ, ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಿ ಸರ್ಕಾರಿ ದಾಖಲೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಮಾಡಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.
ವಿಶೇಷವಾಗಿ ಪದವಿ ಓದುತ್ತಿರುವ ವಿದ್ಯಾರ್ಥಿನಿಯನ್ನು ನೀನು ಚೆನ್ನಾಗಿ ಓದು KAS ತರಬೇತಿ ಕೊಡಿಸುತ್ತೇನೆ ಎಂದು ಹರಿರಾಮ್ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಪಿಎಸ್ ತುಮಕೂರು ಜಿಲ್ಲಾಧ್ಯಕ್ಷ, ಚಿಕ್ಕತಿಮ್ಮನಹಟ್ಟಿ ಗ್ರಾಮದ ಎಚ್.ಕೆಂಚರಾಯ, ಪಾವಗಡ ತಾಲೂಕು ಸಂಯೋಜಿಕರಾದ ಹರಿಹರಪುರ ಗ್ರಾಮದ ಎಚ್.ಡಿ.ಈರಣ್ಣ, ಮುಖಂಡರಾದ ಹನುಮಂತರಾಯಪ್ಪ, ಕಲಾವಿದರಾದ ನಾಗರಾಜು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ನಂದೀಶ್ ನಾಯ್ಕ, ಪಿ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx