ತುಮಕೂರು: ಸಿರಾ ತಾಲ್ಲೂಕು ಸಿರಾ ನಗರದ ಸಂತೆ ಪೇಟೆಯಲ್ಲಿರುವ ಬ್ರಹ್ಮಕುಮಾರಿ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕುಮಾರಿ ಆಶಾ ಕೆಎಸ್ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಈಶ್ವರಿ ವಿಶ್ವವಿದ್ಯಾನಿಲಯದ ಆಧ್ಯಾತ್ಮಿಕ ಚಿಂತಕರಾದ ಪಿ.ಎಚ್.ಮಹೇಂದ್ರಪ್ಪ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತಹಶೀಲ್ದಾರ್ ಮಮತಾ ಎಂ., ರಾಮಕೃಷ್ಣ ಪಬ್ಲಿಕ್ ಸ್ಕೂಲ್ ಮತ್ತು ನರ್ಸಿಂಗ್ ಕಾಲೇಜಿನ ಡಾ.ರಾಮಕೃಷ್ಣ, ವಂಶವೃಕ್ಷ ಆಸ್ಪತ್ರೆಯ ಡಾ.ಮಾಲಿನಿ, ಪ್ರಸೂತಿ ತಜ್ಞರಾದ ಡಾ.ನಿರ್ಮಲ, ವಕೀಲರ ಸಂಘದ ಅಧ್ಯಕ್ಷ ಎಚ್.ಪಿ. ಧರಣೇಶ್ ಗೌಡ, ಉಪಾಧ್ಯಕ್ಷರಾದ ವೈ.ಟಿ.ರಾಮಚಂದ್ರಪ್ಪ, ಕಾರ್ಯದರ್ಶಿ ಕಂಬದೂರಪ್ಪ, ಖಜಾಂಚಿ ಗುರುಮೂರ್ತಿ, ತಾಲೂಕು ವೈದ್ಯಾಧಿಕಾರಿ ಡಾ.ಮೋಹನ್ ಸಿ.ಆರ್., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾಧಿಕಾರಿ ಸದಾಶಿವ, ಗೋಪಾಲಕೃಷ್ಣ, ರಾಜಯೋಗಿನಿ ಬಿ.ಕೆ. ಶಾಂತ, ಡಾ.ಕಲಾ, ಮಂಜುಳಾ ಅನ್ನಪೂರ್ಣ ಅಂಗನವಾಡಿ ಕಾರ್ಯಕರ್ತರು ರಾಮಕೃಷ್ಣ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಉಕ್ರೇನ್ ನಿಂದ ಸಿರಾಕ್ಕೆ ಆಗಮಿಸಿದ ವೈದ್ಯಕೀಯ ವ್ಯಾಸಂಗದ ವಿದ್ಯಾರ್ಥಿ ಪ್ರಿಯಾಂಕ ಅವರನ್ನು ಸನ್ಮಾನಿಸಲಾಯಿತು
ವರದಿ: ಎ.ಎನ್.ಪೀರ್, ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB