nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025
    Facebook Twitter Instagram
    ಟ್ರೆಂಡಿಂಗ್
    • ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ
    • ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ
    • ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ
    • ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ
    • ಸಾಲ ಮರುಪಾವತಿ ಮಾಡದ ವ್ಯಕ್ತಿಯನ್ನು ಸರಪಳಿಯಲ್ಲಿ ಕಟ್ಟಿಹಾಕಿ ಟಾರ್ಚರ್!
    • ಕುಟುಂಬ ಗಲಾಟೆ ನಿಲ್ಲಿಸಲು ಬಂದ ಪೇದೆಯಿಂದ ಮಹಿಳೆ ಮೇಲೆ ಅತ್ಯಾಚಾರ!
    • ಗಾಂಜಾ ಬೆರೆಸಿ ಚಾಕೊಲೇಟ್ ಮಾರಾಟ: ಆರೋಪಿಯ ಬಂಧನ
    • ಜುಲೈ 30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಲಾಂತರಿ ಬೀಜ ತಳಿಯನ್ನು ಕಾಲಿನಲ್ಲಿಒದ್ದು ತಿರಸ್ಕಾರ ಮಾಡಬೇಕು: ರೈತ ಮುಖಂಡ ಗಂಗಾಧರ್ ಕರೆ
    ತುಮಕೂರು October 1, 2024

    ಕುಲಾಂತರಿ ಬೀಜ ತಳಿಯನ್ನು ಕಾಲಿನಲ್ಲಿಒದ್ದು ತಿರಸ್ಕಾರ ಮಾಡಬೇಕು: ರೈತ ಮುಖಂಡ ಗಂಗಾಧರ್ ಕರೆ

    By adminOctober 1, 2024No Comments3 Mins Read
    protest

    ತುಮಕೂರು: 116 ದೇಶಗಳಲ್ಲಿ ತಿರಸ್ಕಾರ ಮಾಡಿರುವ ಕುಲಾಂತರಿ ಬೀಜ ತಳಿಯನ್ನು ನಮ್ಮದೇಶದಲ್ಲಿ ತರಲು ಹೊರಟಿರುವುದು ವಿಪರ್ಯಾಸ. ಇದರಿಂದ ಪರಿಸರ, ಜೀವವೈಧ್ಯತೆ ಅಷ್ಟೇ ಅಲ್ಲದೆ, ಮಾನವನ ವಿಕಾಸದಲ್ಲೂಅನಾಹುತವೇ ಸಂಭವಿಸಲಿದೆ. ಆದ್ದರಿಂದ ರೈತರು ಮಾತ್ರವಲ್ಲದೆ, ಪಟ್ಟಣದಲ್ಲಿರುವ ಜನರೂ ಕುಲಾಂತರಿ ನೀತಿಯನ್ನು ಕಾಲಿನಲ್ಲಿಒದ್ದುತಿರಸ್ಕಾರ ಮಾಡಬೇಕು ಎಂದುರೈತ ಸಂಘ ಹಾಗೂ ಹಸಿರು ಸೇನೆಯ ಕೆ.ಟಿ. ಗಂಗಾಧರ್ ಕರೆ ನೀಡಿದರು.

    ಗಾಂಧೀ ಸಹಜ ಬೇಸಾಯ ಆಶ್ರಮದ ವತಿಯಿಂದ ‘ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿನ ನಿರ್ದೇಶನದಂತೆ ಬೇಯರ್ ಮತ್ತು ಮಾನ್ಸೆಂಟೋ ಕಂಪನಿಗಳ ಸಹಯೋಗದಲ್ಲಿ ತರಲು ಹೊರಟಿರುವ ಕುಲಾಂತರಿ ಬೀಜ ರಾಷ್ಟ್ರೀಯ ನೀತಿಯನ್ನು ವಿರೋಧಿಸಿ ಹಮ್ಮಿಕೊಂಡಿರುವ ಗ್ರಾಮಾಂತರದ ಹ್ಯಾಂಡ್ ಪೋಸ್ಟ್ ನ ದೊಡ್ಡ ಹೊಸೂರಿನ ಎರಡನೇ ದಿನದ ಸತ್ಯಾಗ್ರಹ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


    Provided by
    Provided by

    ತ್ರೇತಾಯುಗದಲ್ಲಿ ರಾಮ ಸೀತೆಯೂ ಕೃಷಿ ಮಾಡಿದ್ದರು. ಭರತ ಖಂಡದಲ್ಲಿ ಕೃಷಿಗೆ ಪೂರಕವಾದ ವಾತಾವರಣವಿದೆ. ಇಲ್ಲಿನ ಕೃಷಿಗೆ ಶೇ.75 ರಷ್ಟು ಪ್ರಾಕೃತಿಕ ಬೆಂಬಲವಿದ್ದು, ಶೇ.25 ರಷ್ಟು ಮಾತ್ರವೇ ಮಾನವನ ಶ್ರಮವಿರುತ್ತದೆ. ಆದ್ದರಿಂದಲೇ ನಮ್ಮದು ಬಹುಪಾಲು ಕೃಷಿ ಪ್ರಧಾನವಾದ ಸಂಪದ್ಭರಿತ ರಾಷ್ಟ್ರ ಈ ಸಾರ್ವಭೌಮತೆಯನ್ನು ವಶಕ್ಕೆ ಪಡೆಯಲು ಬಹುರಾಷ್ಟ್ರೀಯ ಕಂಪನಿಗಳು ಹುನ್ನಾರ ನಡೆಸಿವೆ. ದೇಶೀ ಬೆಳೆಗಳನ್ನು ನಾಶ ಮಾಡಿಕುಲಾಂತರಿ ವ್ಯವಸ್ಥೆಯನ್ನುತರುವ ಮೂಲಕ ನಮ್ಮ ಕೃಷಿ ವ್ಯವಸ್ಥೆಯನ್ನು ನಿಯಂತ್ರಣ ಮಾಡಲು ಯೋಜನೆಯೇ ರೂಪಿಸಿವೆ. ಅನ್ನ ಹಾಕುವ ರೈತರನ್ನುಗ್ರಾಹಕರನ್ನಾಗಿ ಮಾರ್ಪಾಡು ಮಾಡುವದೊಡ್ಡ ಸಂಚು ನಡೆದಿದೆ ಎಂದು ಅವರು ವಿವರಿಸಿದರು.

    ಹಸಿರು ಕ್ರಾಂತಿಯಿಂದಾದ ಹಾನಿಯಿಂದ ಇನ್ನೂ ಚೇತರಿಸಿಕೊಳ್ಳಲು ಆಗಿಲ್ಲ. ಈಗ 3ನೇ ಕೃಷಿ ಕ್ರಾಂತಿತರಲು ಹೊಂಚು ಹಾಕುತ್ತಿದ್ದಾರೆ. ಇದನ್ನು ನಾವು ವಿರೋಧಿಸಬೇಕು. ನಮ್ಮಧ್ವನಿ ಹಾಗೂ ಪ್ರತಿಭಟನೆಗಳ ಸಾಮರ್ಥ್ಯ ಹೆಚ್ಚಾದರೆ ಸಂವಿಧಾನಾತ್ಮಕವಾಗಿಯೂ ಮಹತ್ವ ದೊರೆಯಲಿದ್ದು, ಸರ್ಕಾರಗಳಿಗೆ ಚಳವಳಿಗಳ ಮೂಲಕವೇ ಅರ್ಥ ಮಾಡಿಸೋಣ ಎಂದು ನಿರ್ಧಾರಕೈಗೊಂಡರು.

    ರೈತ ಸಂಘದ ಬಡಗಲಪುರ ನಾಗೇಂದ್ರ ಮಾತನಾಡಿ, ಸರ್ಕಾರಿ ವಿಜ್ಞಾನಿಗಳು ಮಾರಾಟವಾಗಿದ್ದಾರೆ. ವೈದ್ಯರು ವ್ಯಾಪಾರಿಗಳಾಗಿದ್ದಾರೆ. ಆರೋಗ್ಯ ಮತ್ತು ವಿಜ್ಞಾನ ಕ್ಷೇತ್ರವೇ ಹಣಗಳಿಕೆಗೆ ಮೀಸಲಾಗಿದೆ. ಹಳಿತಪ್ಪಿರುವ ವ್ಯವಸ್ಥೆ ಸರಿ ಮಾಡುವವರು ಯಾರು ಎಂಬುದೇ ಪ್ರಶ್ನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ರಾಜಕೀಯ ಹಾಗೂ ವ್ಯಾಪರದಂತೆ ಕೃಷಿಯಲ್ಲಿಯೂ ಸಂಸ್ಕೃತಿ ಕಣ್ಮರೆಯಾಗಿದೆ. ಪುಟ್ಟ ಮಕ್ಕಳಿಗೆ ಡಯಾಬಿಟೀಸ್ ಅಂಟಿಕೊಂಡಿದೆ. ನಾಲ್ಕು ವರ್ಷದ ಹೆಣ್ಣುಮಕ್ಕಳು ಋತುಮತಿಯಾಗುತ್ತಿದ್ದಾರೆ. ಮತ್ತೊಂದು ಕಡೆ ಅಪೌಷ್ಠಿಕತೆ ಕಾಡುತ್ತಿದೆ. ಈಗ ಅನ್ನತಿನ್ನುವವರೆಲ್ಲರೂ ಎಚ್ಚೆತ್ತುಕೊಳ್ಳಬೇಕಾದ ಕಾಲ ಬಂದಿದೆ. ಇಲ್ಲವಾದರೆ ಆಹಾರ ಕ್ಷೇತ್ರ ಅಧೋಗತಿ ತಲುಪಲಿದೆ ಎಚ್ಚರಿಸಿದರು.

    ಭೂಮಿಗೂ ನಮಗೂ ಭಾವನಾತ್ಮಕ ಸಂಬಂಧವಿದ್ದು, ಕೃಷಿ ಸಂಸ್ಕೃತಿ ಆಧಾರಿತ ಉದ್ಯೋಗ ತಂದುಕೊಟ್ಟಿದೆ. ನಮ್ಮ ಸಂಸ್ಕೃತಿ ಉಳಿಯಬೇಕೆಂದರೆ ಭೂಮಿಯನ್ನು ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ದೊಡ್ಡ ಹೊಸೂರು ಸತ್ಯಾಗ್ರಹ ದಾಖಲೆಯಾಗಿ ಉಳಿಯಲಿದೆ. ಸತ್ಯಾಗ್ರಹಕ್ಕೆ ತನ್ನದೇಆದ ಶಕ್ತಿ ಇದ್ದು, ಅದಕ್ಕೆ ಸಾಕ್ಷಿಯಾಗಿ ಮಹಾತ್ಮಗಾಂಧಿ ನಮ್ಮೆದುರಿಗಿದ್ದಾರೆ ಎಂದು ರೈತರನ್ನು ಹುರಿದುಂಬಿಸಿದರಲ್ಲದೆ, ಎಲ್ಲಾ ರಾಜಕೀಯ ಪಕ್ಷಗಳು ಬಂಡವಾಳ ಶಾಹಿಗಳ ಪರವಿರುವುದರಿಂದ ನಾವು ಸ್ಥಳೀಯ ಮಟ್ಟದಿಂದಲೇ ಚಳಚಳಿಗಳನ್ನು ಕಟ್ಟಬೇಕು ಎಂದು ಸಲಹೆ ನೀಡಿದರು.
    ಜೆಡಿಯು ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಮಾತನಾಡಿ, ನಮ್ಮದೇಶದ ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಪರಿಸರದ ಮೇಲೆ ಅವ್ಯಾಹತವಾಗಿ ದಾಳಿ ನಡೆಯುತ್ತಿದೆ. ಕೃಷಿ, ಕಲೆ, ಸಾಹಿತ್ಯ, ಆಡಳಿತ, ಸಂಸ್ಕೃತಿ ಒಂದಕ್ಕೊಂದು ಅಂತರ ಸಂಬಂಧ ಹೊಂದಿದ್ದು, ಈ ವ್ಯವಸ್ಥೆಯನ್ನು ಸರಿ ಮಾಡಬೇಕಾದರೆ ಮಸನೋಬು ಫುಕುವೋಕ, ಜೆ.ಸಿ.ಕುಮಾರ್, ಮಹಾತ್ಮಗಾಂಧಿ ಅವರತತ್ವದಡಿಯಲ್ಲಿ ಹೋರಾಟಗಳು ಮುನ್ನಡೆಯಬೇಕು ಎಂದರು.

    ನಮ್ಮ ದೇಶದಲ್ಲಿಒಂದು ಲಕ್ಷಕ್ಕೂಅಧಿಕ ರೀತಿಯ ಭತ್ತದ ತಳಿಗಳಿದ್ದವು. ಅವೆಲ್ಲವೂ ಈಗ ನಾಶವಾಗಿ ಕುಲಾಂತರಿ ಭತ್ತರಾರಾಜಿಸುತ್ತಿದೆ. ಜಪಾನ್ ಹಾಗೂ ಚೀನಾದಲ್ಲಿ ಕುಲಾಂತರಿ ಮನುಷ್ಯರನ್ನು ಸೃಷ್ಟಿ ಮಾಡಲಾಗಿದೆ. ಇದು ಪ್ರಕೃತಿ ವಿರುದ್ಧವಾದುದು. ಹೀಗೇ ಮುಂದುವೆರೆದರೆ 2050ರ ಹೊತ್ತಿಗೆ ಭೂಮಂಡಲ ವಿನಾಶವಾಲಿದೆ ಎಂದು ನಾಸಾ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

    ಪರಿಸರಕ್ಕೆ ಪೂರಕವಾದ ನೈಸರ್ಗಿಕ ಕೃಷಿ ಮಾಡಬೇಕು. ನಾವು ತಿನ್ನುವ ಆಹಾರ ಉತ್ತಮವಾಗಿದ್ದರೆ ಮನಸ್ಥಿತಿ ಮತ್ತುಆರೋಗ್ಯ ಉತ್ತಮವಾಗಿರುತ್ತದೆ. ಸಮಾಜದ ಬಗ್ಗೆ ಕಾಳಜಿ ವಹಿಸಬೇಕಾದ ಸಾಹಿತಿಗಳು ಮರ್ಯಾದೆ ಇಲ್ಲದಂತೆ ವರ್ತಿಸುತ್ತಿದ್ದು, ಸಣ್ಣಪುಟ್ಟ ರಾಜಕಾರಣಿಗಳಿಗೆ ಆ ಸ್ಥಾನ ಬಿಟ್ಟುಕೊಟ್ಟಿದ್ದಾರೆ ಎಂದುಚಾಟಿ ಬೀಸಿದರು.

    ಈ ಸಂದರ್ಭದಲ್ಲಿ ಅಖಿಲ ಭಾರತ ಕೃಷಿ ಕಾರ್ಮಿಕ ಸಂಘದ ಎಸ್.ಎನ್ ಸ್ವಾಮಿ, ಕರ್ನಾಟಕ ರಾಜ್ಯರೈತ ಸಂಘದ ಜಿಲ್ಲಾಧ್ಯಕ್ಷಎ.ಗೋವಿಂದರಾಜು, ಹೋರಾಟಗಾರರಾದ ಶಾಂತಕೃಷ್ಣ, ತನುಜ, ನೇತ್ರಾವತಿ, ಶಾರದಾ, ಬಿ.ಮರುಳಯ್ಯ, ಕೃಷಿ ವಿಜ್ಞಾನಿ ಡಾ.ಮಂಜುನಾಥ್, ಪರಿಸರವಾದಿ ಸಿ.ಯತಿರಾಜು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ ‘ಜಸ್ಟಿಸ್ ಫಾರ್ ಸೌಮ್ಯ’ ಚಿತ್ರ

    July 17, 2025

    ತುಮಕೂರಿಗೆ ಹೆಮ್ಮೆ: ಗೊಲನ ಎಂಟರ್‌ ಪ್ರೈಸಸ್‌ ಗೆ ಕೇಂದ್ರ ಸರ್ಕಾರದ ಮಾನ್ಯತೆ

    July 12, 2025

    ಅಕ್ರಮ ಭೂಕಬಳಿಕೆ ಆರೋಪ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗೆ ಸನ್ಮಾನಿಸಲು ಯತ್ನಿಸಿದ KRS ಪಕ್ಷದ ಕಾರ್ಯಕರ್ತರು ಪೊಲೀಸ್ ವಶಕ್ಕೆ

    July 11, 2025
    Our Picks

    ವೇಶ್ಯಾವಾಟಿಕೆ ಮಾಡಲು ಒಪ್ಪದ ಸಂಗಾತಿಯ ಬರ್ಬರ ಹತ್ಯೆ!

    July 17, 2025

    ಯೆಮೆನ್ ನಲ್ಲಿ ನರ್ಸ್ ನಿಮಿಷಾ ಪ್ರಿಯಾ ಮರಣ ದಂಡನೆ ಮುಂದೂಡಿಕೆ

    July 16, 2025

    ಕರ್ನಾಟಕದ ಬೆಳವಣಿಗೆಗೆ ಹೊಸ ರಸ್ತೆಗಳ ಅಭಿವೃದ್ಧಿ: ನಿತಿನ್ ಗಡ್ಕರಿ

    July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    July 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಪ.ಜಾತಿ, ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಪದಾಧಿಕಾರಿಗಳ ಆಯ್ಕೆ

    July 19, 2025

    ಸರಗೂರು:  ತಾಲ್ಲೂಕಿನ ಪ. ಜಾತಿ ಮತ್ತು ಪ. ಪಂಗಡ ಅಧಿಕಾರಿಗಳು ಮತ್ತು ನೌಕರರ ಸಂಘದ ಅಧ್ಯಕ್ಷರಾಗಿ ಕ್ಲಾರ್ಕ್ ಕಂ ಡಿಇಒರಾದ…

    ತಾ.ಪಂ., ಜಿ.ಪಂ. ಚುನಾವಣೆ ನಡೆಸಲು ರಾಜ್ಯ ಸರ್ಕಾರ ನಿರ್ಲಕ್ಷ್ಯ: ಸರಗೂರು ಕೃಷ್ಣ ಆರೋಪ

    July 19, 2025

    ಶಾಸಕ ಪ್ರಭು ಚವ್ಹಾಣ್ ಪುತ್ರನ ವಿರುದ್ಧ ಮಹಿಳಾ ಆಯೋಗಕ್ಕೆ ಯುವತಿ ದೂರು ಸಲ್ಲಿಕೆ

    July 19, 2025

    ಖಾಸಗಿ ಬಸ್ ಪಲ್ಟಿ: 25ಕ್ಕೂ ಅಧಿಕ ಜನರಿಗೆ ಗಾಯ

    July 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.