ಹಾಸನ: ತಾಳಿ ಕಟ್ಟುವ ವೇಳೆ ಮದುವೆ ಮುರಿದುಕೊಂಡಿದ್ದ ವಧುವಿಗೆ ಆಕೆಯ ಪ್ರಿಯಕರನ ಜೊತೆಯೇ ಮಾಡುವೆ ಮಾಡಿಸಲಾಗಿದೆ.
ಮೂರು ತಿಂಗಳ ಹಿಂದೆ ನಿಶ್ಚಯವಾಗಿ ನಿನ್ನೆ ನಡೆಯಬೇಕಿದ್ದ ಮದುವೆಯನ್ನು ತಾಳಿ ಕಟ್ಟುವ ವೇಳೆ ವಧು ಮದುವೆ ಮುರಿದುಕೊಂಡಿದ್ದಳು. ಇದೀಗ ವಧುವಿಗೆ ಆಕೆಯ ಪ್ರಿಯಕರನ ಜೊತೆಯೇ ಮದುವೆ ಮಾಡಿಸಲಾಗಿದೆ.
ಹಾಸನದ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ ಶುಭ ಮುಹೂರ್ತದಲ್ಲಿ ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ವಧು ನನಗೆ ಈ ಮದುವೆ ಇಷ್ಟ ಇಲ್ಲ ಅಂತ ಹೇಳಿದ್ದರಿಂದ ಮದುವೆ ಮುರಿದುಬಿದ್ದಿತ್ತು.
ಆನಂತರ ವಧು ತಾನು ಪ್ರೀತಿಸುತ್ತಿದ್ದ ಯುವಕನಿಗಾಗಿ ಮದುವೆ ಆಗಲು ನಿರಾಕರಿಸಿದ್ದ ವಿಚಾರ ತಿಳಿದ ಪೋಷಕರು ಇದೀಗ ತಮ್ಮ ಮಗಳ ಇಷ್ಟದಂತೆ ಪ್ರಿಯಕರನ ಜೊತೆ ಮದುವೆ ಮಾಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW