nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    • ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ
    • ‘ಸರ್ಕಾರದ ಖಜಾನೆ ಖಾಲಿ, ಸಿಬ್ಬಂದಿಗೆ ಸಂಬಳವಿಲ್ಲ’: ಕಾಂಗ್ರೆಸ್ ವಿರುದ್ಧ ವಿ.ಸೋಮಣ್ಣ ವಾಗ್ದಾಳಿ
    • ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಪರಮೇಶ್ವರ್ ಗೆ ನೇರ ಪ್ರಶ್ನೆ: ಕೆಆರ್‌ ಎಸ್ ಪಕ್ಷದ ವಿರುದ್ಧ ಕಾಂಗ್ರೆಸ್ ಮುಖಂಡರಿಂದ ಕಿಡಿ
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಐದು ಗ್ರಾಮಗಳಿಗೆ ಕಂಟಕವಾದ ಗರುಡಾಚಲ ನದಿಯ  ಸೇತುವೆಗಳು | ಪ್ರತಿ ನಿತ್ಯದ ಸಂಚಾರಕ್ಕೆ ಹೈರಾಣಾದ ಜನರು
    ಕೊರಟಗೆರೆ September 16, 2024

    ಐದು ಗ್ರಾಮಗಳಿಗೆ ಕಂಟಕವಾದ ಗರುಡಾಚಲ ನದಿಯ  ಸೇತುವೆಗಳು | ಪ್ರತಿ ನಿತ್ಯದ ಸಂಚಾರಕ್ಕೆ ಹೈರಾಣಾದ ಜನರು

    By adminSeptember 16, 2024No Comments2 Mins Read
    koratagere

    ವರದಿ: ಮಂಜುಸ್ವಾಮಿ ಎಂ.ಎನ್.

    ಕೊರಟಗೆರೆ: ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿ ಹೆಚ್ಚಾಗಿ ಎಲ್ಲೆಡೆ ಬೆಳೆ ಹಾನಿ, ಆಸ್ತಿಪಾಸ್ತಿ ಹಾನಿಯಾಗಿದ್ದು  ಮಳೆ ಬಂದಾಗ ಸಾಮಾನ್ಯವಾಗಿ  ರಸ್ತೆಗಳು ಸೇತುವೆಗಳು ಹಾಳಾಗುವುದು ಕಾಣುತ್ತಿದ್ದೇವೆ ಆದರೆ ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರೀ ಮಳೆಗೆ ತಾಲೂಕಿನ ಹಲವು ಕೆರೆಕಟ್ಟೆಗಳು ತುಂಬಿ ಗರುಡಾಚಲ,ಸುವರ್ಣಮುಖಿ, ಜಯಮಂಗಲಿ ನದಿಗಳು  ಮೈದುಂಬಿ ಹರಿದಿವೆ ಕೆಲವೆಡೆ ನದಿಗಳು ಹರಿದ ರಭಸಕ್ಕೆ ಸೇತುವೆಗಳು ಕೊಚ್ಚಿ ಹೋಗಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ  ರಸ್ತೆಗಳು ಕಾಣದಾಗಿ ಈ ಭಾಗದ ಜನರ ಓಡಾಟ ಹೇಳತೀರದಾಗಿದೆ..


    Provided by
    Provided by

    ಅದೇ ರೀತಿಯಾಗಿ ತಾಲೂಕಿನ ಹೊಳವನಹಳ್ಳಿ ಹೋಬಳಿ ವ್ಯಾಪ್ತಿಯ ಬೈಚಾಪುರ ಗ್ರಾಮ ಪಂಚಾಯಿತಿಗೆ ಸೇರಿದ  ತೊಗರಿಘಟ್ಟ,ಪಣ್ಣೇನಹಳ್ಳಿ ಹನುಮೇನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳನ್ನು ಸಂಪರ್ಕಿಸುವ ಎರಡು ಸೇತುವೆಗಳು ಕೊಚ್ಚಿ ಹೋಗಿ ಸುಮಾರು ಎರಡು ತಿಂಗಳುಗಳಿಂದ  ಈ ಗ್ರಾಮಗಳ ಜನರು ಓಡಾಡಲು ಕಷ್ಟಕರವಾಗಿದೆ ಗೃಹ ಸಚಿವರ ತವರಲ್ಲಿಯೇ ಇಂತಹ  ಸೇತುವೆಗಳಿಂದ ಜನರಿಗೆ ಕಂಟಕ ಎದುರಾಗಿದೆ..

    ಈ ಭಾಗದ ಜನರು ಸ್ಥಳೀಯ ಜನ ಪ್ರತಿನಿಧಿಗಳು ತಹಶೀಲ್ದಾರ್ ತಾಲೂಕು ಪಂಚಾಯಿತಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪ ಮಾಡುತ್ತಾರೆ.

    ಪ್ರತಿನಿತ್ಯ ಪಣೇನಹಳ್ಳಿ, ತೊಗರಿಘಟ್ಟ ಹನುಮೇನಹಳ್ಳಿ, ಚಿಕ್ಕನಹಳ್ಳಿ  ಸೇರಿದಂತೆ ದುಗ್ಗೇನಹಳ್ಳಿ, ಬೀಡಿಪುರ ಬೈಚಾಪುರಕ್ಕೆ ಸಂಪರ್ಕಿಸುವ ಈ ರಸ್ತೆಗಳು ಶಾಲಾ ಮಕ್ಕಳಿಗೆ ವೃದ್ಧರಿಗೆ ದ್ವಿಚಕ್ರ ವಾಹನ ಸವಾರರಿಗೆ ಕಂಟಕಪ್ರಾಯವಾಗಿವೆ.

    ನದಿಗಳು ಹರಿದ ರಭಸಕ್ಕೆ ಸೇತುವೆಗೆ ಅಳವಡಿಸಲಾಗಿದ್ದ ಸಿಮೆಂಟಿನ ರಿಂಗ್ ಗಳು ನೀರಿನ ಸೇಳತಕ್ಕೆ ಸೇತುವೆ ಕೊಚ್ಚಿ ಹೋಗಿವೆ. ಈ ಭಾಗದಲ್ಲಿ ಸುಮಾರು 12 ಅಡಿಗೂ ಹೆಚ್ಚು ಆಳ ಗುಂಡಿ ಬಿದ್ದು  ಗ್ರಾಮಗಳನ್ನು ಸಂಪರ್ಕಿಸುವ ಕೊಂಡಿ ತಪ್ಪಿದಂತಾಗಿದೆ.

    ಹನುಮೇನಹಳ್ಳಿ ಗ್ರಾಮದ ಮುಖಂಡ ಮಂಜುನಾಥ್ ಅವರು ಮಾತನಾಡುತ್ತಾ ಸುಮಾರು ಎರಡು ತಿಂಗಳುಗಳಿಂದ ಈ ಸೇತುವೆ ಕೊಚ್ಚಿ ಹೋಗಿ ಶಾಲಾ ಮಕ್ಕಳು ಸೇರಿದಂತೆ ಪಿಂಚಣಿ ಹಾಗೂ ಸರ್ಕಾರಿ ಕೆಲಸಕ್ಕೆ ತೆರಳುವ ಸಾರ್ವಜನಿಕರು ವೃದ್ಧರಿಗೆ ಬಹಳ ಸಂಕಷ್ಟ ಎದುರಾಗಿದೆ  ಈ ಬಗ್ಗೆ ಅನೇಕ ಬಾರಿ ಮನವಿ ನೀಡಿದರು ಯಾರು ಕೂಡಾ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಈಗಾಗಲೇ ತಹಶೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳಿಗೆ ಸಂಪರ್ಕ ಕೊಂಡಿಯಂತಿರುವ ರಸ್ತೆಯನ್ನು ಸರಿಪಡಿಸುವಂತೆ ಮನವಿ ನೀಡಿದ್ದೇವೆ ದಯಮಾಡಿ ನಮಗೆ ಸಂಪರ್ಕಿಸುವ ಎರಡು ರಸ್ತೆಗಳನ್ನ ಸರಿಪಡಿಸಬೇಕು ಇಲ್ಲವೇ ತಾತ್ಕಾಲಿಕವಾಗಿ ರಸ್ತೆ ಸಂಚರಿಸುವ ಮಾರ್ಗವನ್ನು ಗುರುತಿಸಿ ಕೊಡಬೇಕು ಎಂದು ಮನವಿ ಮಾಡಿದರು.

    ಪಣ್ಣೇನಹಳ್ಳಿಯ ಗ್ರಾಮಸ್ಥ ಶ್ರೀನಿವಾಸ್ ಅವರು ಮಾತನಾಡುತ್ತಾ ಚುನಾವಣಾ ಸಮಯದಲ್ಲಿ ಆಗಮಿಸುವ ಜನಪ್ರತಿನಿಧಿಗಳು ಒಂದು ಊರಿಗೆ ರಸ್ತೆ ಸೇರಿದಂತೆ ಇತರೆ ಸೌಕರ್ಯಗಳು ಕೆಟ್ಟು ಹೋದ ಸಂದರ್ಭದಲ್ಲಿ ಬರುವುದಿಲ್ಲ  ನಮ್ಮ ಗ್ರಾಮಗಳಿಗೆ ರಸ್ತೆ ಸಂಪರ್ಕ ಇಲ್ಲದೆ ಅನೇಕ ಪಿಂಚಣಿ ತೆಗೆದುಕೊಳ್ಳಲಾಗದೆ ವೃದ್ಧರು ಪರದಾಡುತ್ತಿದ್ದಾರೆ ಪ್ರತಿನಿತ್ಯ ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದು ಈ ಭಾಗವಾಗಿ ಸಂಚರಿಸುತ್ತಾರೆ. ಕೇವಲ ಒಂದು ದ್ವಿಚಕ್ರ ವಾಹನ ಹೋಗುವಂತಹ ಬಂಡೆ ಕಲ್ಲನ್ನ ಗ್ರಾಮಸ್ಥರೇ ಹಾಕಿಕೊಂಡು ತೆರಳುತ್ತಿದ್ದೇವೆ, ಜಿಲ್ಲಾಧಿಕಾರಿ, ಸಿಇಓ ಸೇರಿದಂತೆ ಇತರೆ ಅಧಿಕಾರಿಗಳು ಕಣ್ಣಿಗೆ ಕಾಣುವಂತಹ ಮಳೆ ಹಾನಿ ಪ್ರದೇಶಕ್ಕೆ ಮಾತ್ರ ತೆರಳುತ್ತಾರೆ ಇಂತಹ ಕುಗ್ರಾಮಗಳಿಗೆ ಸಂಪರ್ಕಿಸುವ ದುರ್ಗಮ ಪರಿಸ್ಥಿತಿಯ ರಸ್ತೆಗಳ ಮಾಹಿತಿ ಅವರುಗಳಿಗೆ ಇರುವುದೇ ಇಲ್ಲ ಹೀಗಾಗಿ ಕೂಡಲೇ ಈ ಸ್ಥಳಕ್ಕೆ ಭೇಟಿ ನೀಡಿ ಸೇತುವೆ ಸರಿಪಡಿಸಬೇಕು ಎಂದು ಆಗ್ರಹಿಸಿದರು.

    ಹೀಗೆ ಕೊರಟಗೆರೆ ತಾಲೂಕಿನ ಗಡಿ ಭಾಗ ಸೇರಿದಂತೆ ಅನೇಕ ಗ್ರಾಮಗಳು ಮೂಲ ಸೌಕರ್ಯಗಳಿಲ್ಲದೆ ಸಂಪರ್ಕಗಳನ್ನು ಕಳೆದುಕೊಂಡು ಪರದಾಡುತ್ತಿದ್ದರು ಯಾರೊಬ್ಬರೂ ಇತ್ತ ಕಡೆ ಗಮನ ಹರಿಸದೇ ಇರುವುದು ಅಭಿವೃದ್ಧಿ ಪಡಿಸದೇ ಇರುವುದು ಸೂಚನೆಯ ಸಂಗತಿ ಎಂದು ಈ ಗ್ರಾಮಗಳ ಗ್ರಾಮಸ್ಥರು ಗೊಣಗಿಕೊಳ್ಳುತ್ತಾರೆ.

    ಇನ್ನಾದರೂ ಸಂಬಂಧಪಟ್ಟ ಇಲಾಖೆಗಳು ಸ್ಥಳ ಪರಿಶೀಲನೆ ಮಾಡಿ ಸೂಕ್ತ ಕ್ರಮ ಕೈಗೊಂಡು ಶೀಘ್ರವೇ ಸೇತುವೆ ಕಾಮಗಾರಿ ಆರಂಭ ಮಾಡುತ್ತಾರಾ ಎಂದು ಕಾದು ನೋಡೋಣ..


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು

    April 13, 2026

    ಬೆಂಗಳೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನರ್‌ ರಚನೆಗೆ ಆಗ್ರಹಿಸಿ ಕಾಂಗ್ರೆಸ್‌ ನ ಸುಮಾರು 25ಕ್ಕೂ ಹೆಚ್ಚು ಹಿರಿಯ ಶಾಸಕರ ತಂಡ…

    ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು

    April 13, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ಕೊರಟಗೆರೆ: ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಸಚಿವ ವಿ.ಸೋಮಣ್ಣ ಶಂಕುಸ್ಥಾಪನೆ

    April 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.