nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026
    Facebook Twitter Instagram
    ಟ್ರೆಂಡಿಂಗ್
    • ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
    • ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
    • ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
    • “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
    • ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್‌ ಬಾಬು
    • ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
    • ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
    ಸಿರಾ May 12, 2026

    ಬೌದ್ಧ ಧರ್ಮವು ಸಮಾನತೆ,  ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್

    By adminMay 12, 2026No Comments2 Mins Read
    sira budha jayanti bhimothsava

    ಸಿರಾ: ಇತಿಹಾಸದಲ್ಲಿ ಬುದ್ಧನ ಸ್ಥಾನ ಅನನ್ಯವಾದುದು. ಮಾನವನ ದುಃಖಕ್ಕೆ ಮೂಲ ಕಾರಣ ಆಸೆ ಎನ್ನುವ ಸತ್ಯವನ್ನು ಬೋಧಿಸಿದ ಬುದ್ಧನ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿ ಹರಾ ಮಹೇಶ್ ಹೇಳಿದರು.

    ಅವರು ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಬುದ್ಧ ಜಯಂತಿ ಹಾಗೂ ಭೀಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೌದ್ಧ ಧರ್ಮವು ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.


    Provided by
    Provided by

    ಸಾವಿರಾರು ವರ್ಷಗಳ ಹಿಂದೆಯೇ ಬುದ್ಧ ಪಂಚಶೀಲ ತತ್ವಗಳ ಮೂಲಕ ಸುಖ ಜೀವನದ ಮಾರ್ಗ ತೋರಿಸಿದ್ದರು. ಪ್ರೀತಿ, ಕರುಣೆ ಹಾಗೂ ಮೈತ್ರಿಯ ಸಂದೇಶ ಸಾರಿದ ಮಹಾನ್ ವ್ಯಕ್ತಿ ಬುದ್ಧ. ಜಾತಿ ವ್ಯವಸ್ಥೆ ಹಾಗೂ ಗೌತಮ ಬುದ್ಧನ ಜೀವನ ವಿಧಾನದ ಉಪದೇಶಗಳನ್ನು ಪ್ರತಿಯೊಬ್ಬರಿಗೂ ತಿಳಿಸಬೇಕಾಗಿದೆ. ಅದರಲ್ಲೂ ಅಂಬೇಡ್ಕರ್ ಅವರು ಪ್ರಕಟಿಸಿರುವ ಬುದ್ಧ ಹಾಗೂ ಧಮ್ಮದ ಬಗೆಗಿನ ಪುಸ್ತಕವನ್ನು ಪ್ರತಿಯೊಬ್ಬರೂ ಓದಬೇಕೆಂದು ಹರಾ ಮಹೇಶ್ ತಿಳಿಸಿದರು.

    ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಟೈರ್ ರಂಗನಾಥ್ ಮಾತನಾಡಿ, ಸಿರಾದಲ್ಲಿ ಅದ್ಧೂರಿಯಾಗಿ ನಡೆದ ಈ ಭೀಮೋತ್ಸವ ಮತ್ತು ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಹಲವು ಪ್ರಮುಖರ ಶ್ರಮವಿದ್ದು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದವರಿಗೆ ಧನ್ಯವಾದ ಎಂದರು.

    ಸಮಿತಿಯ ತಾಲೂಕು ಅಧ್ಯಕ್ಷ ಶಿವಾಜಿ ನಗರ ತಿಪ್ಪೇಸ್ವಾಮಿ, ರಿಯಲ್ ಎಸ್ಟೇಟ್ ಉದ್ಯಮಿ ರಾಜು ಆರ್ ಆರ್, ನಿವೃತ್ತ ಪ್ರಾಚಾರ್ಯ ರಾಮಚಂದ್ರಪ್ಪ, ರಾಜ್ಯ ಸಂಚಾಲಕ ನರಸಿಂಹಮೂರ್ತಿ, ದಸಂಸ ಉಪಾಧ್ಯಕ್ಷ ಕೋದಂಡ ರಾಮ್, ಬೀರನಹಳ್ಳಿ ಹನುಮಂತರಾಯಪ್ಪ, ನರಸಪ್ಪ ಬರಗೂರು, ರಾಜು ಕೆ, ರಂಗನಾಥ್, ಕೃಷ್ಣಮೂರ್ತಿ, ಗಣೇಶ್, ಭೂತರಾಯ, ಮಂಜುನಾಥ್ ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.

    ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಭಂತೇಜಿ ಧಮ್ಮ ವೀರ ಮಾತನಾಡಿ, ಬುದ್ಧ ಮಾನವ ಸಮಾಜಕ್ಕೆ ದಾರಿ ತೋರಿಸಿದ ಮೊದಲ ಚಿಂತಕ. ಜಗತ್ತಿಗೆ ಮಾನವತಾವಾದಿ ಸಂದೇಶವನ್ನು ಸಾರಿದ ಭಗವಾನ್ ಬುದ್ಧರ ಶಾಂತಿ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶಗಳನ್ನು ನಮ್ಮ ಯುವ ಪೀಳಿಗೆಯು ಪಾಲಿಸುವಂತಾಗಬೇಕು ಎಂದರು.


    ವಿಶ್ವಮಾನ್ಯವಾಗಿದ್ದು, ಜಾಗತಿಕ ಶಾಂತಿ, ಸೌಹಾರ್ದತೆ ನೆಲೆಸಲು ಅವರ ತತ್ವಾದರ್ಶಗಳ ಅನುಷ್ಠಾನ ಅಗತ್ಯವಾಗಿದೆ. ಈ ಮೂವರು ಭಾರತೀಯ ಇತಿಹಾಸದ ದಾರ್ಶನಿಕರು. ಸಮಾನತೆ, ವೈಚಾರಿಕತೆ, ಸಾಮಾಜಿಕ ನ್ಯಾಯ, ಕಾಯಕ ಮತ್ತು ಮಾನವತಾವಾದವನ್ನು ಬೋಧಿಸಿದ ಈ ಮೂವರ ತತ್ವಗಳು ವಿಶ್ವಮಾನ್ಯವಾಗಿವೆ.

    — ಡಾ. ರವಿಕುಮಾರ್ ನೀಹ, ಚಿಂತಕರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ದೇವಸ್ಥಾನಗಳು ಜನರನ್ನು ಒಂದುಗೂಡಿಸುವ ಮಹತ್ವ ಪಡೆದಿವೆ: ಶಾಸಕ ಸಿ.ಬಿ.ಸುರೇಶ್‌ ಬಾಬು

    May 29, 2026

    ಸಿರಾದಲ್ಲಿ ಮೇ 26 ರಂದು ಜೆಡಿಎಸ್ ಪಕ್ಷದ ಪದಾಧಿಕಾರಿಗಳ ನೇಮಕಾತಿ ಕಾರ್ಯಕ್ರಮ

    May 24, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

    June 11, 2026

    ನವದೆಹಲಿ/ಬೆಂಗಳೂರು: ತಿಪಟೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ. ಷಡಕ್ಷರಿ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದ್ದು, ಅವರನ್ನು ದೆಹಲಿಯ…

    ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ

    June 11, 2026

    ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!

    June 11, 2026

    “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್‌ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

    June 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.