ಸಿರಾ: ಇತಿಹಾಸದಲ್ಲಿ ಬುದ್ಧನ ಸ್ಥಾನ ಅನನ್ಯವಾದುದು. ಮಾನವನ ದುಃಖಕ್ಕೆ ಮೂಲ ಕಾರಣ ಆಸೆ ಎನ್ನುವ ಸತ್ಯವನ್ನು ಬೋಧಿಸಿದ ಬುದ್ಧನ ಆದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಬಿಎಸ್ಪಿ ಪಕ್ಷದ ರಾಜ್ಯ ಉಸ್ತುವಾರಿ ಹರಾ ಮಹೇಶ್ ಹೇಳಿದರು.
ಅವರು ನಗರದ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ನಡೆದ ಬುದ್ಧ ಜಯಂತಿ ಹಾಗೂ ಭೀಮೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಬೌದ್ಧ ಧರ್ಮವು ಸಮಾಜದಲ್ಲಿ ಸಮಾನತೆ ಹಾಗೂ ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದರು.
ಸಾವಿರಾರು ವರ್ಷಗಳ ಹಿಂದೆಯೇ ಬುದ್ಧ ಪಂಚಶೀಲ ತತ್ವಗಳ ಮೂಲಕ ಸುಖ ಜೀವನದ ಮಾರ್ಗ ತೋರಿಸಿದ್ದರು. ಪ್ರೀತಿ, ಕರುಣೆ ಹಾಗೂ ಮೈತ್ರಿಯ ಸಂದೇಶ ಸಾರಿದ ಮಹಾನ್ ವ್ಯಕ್ತಿ ಬುದ್ಧ. ಜಾತಿ ವ್ಯವಸ್ಥೆ ಹಾಗೂ ಗೌತಮ ಬುದ್ಧನ ಜೀವನ ವಿಧಾನದ ಉಪದೇಶಗಳನ್ನು ಪ್ರತಿಯೊಬ್ಬರಿಗೂ ತಿಳಿಸಬೇಕಾಗಿದೆ. ಅದರಲ್ಲೂ ಅಂಬೇಡ್ಕರ್ ಅವರು ಪ್ರಕಟಿಸಿರುವ ಬುದ್ಧ ಹಾಗೂ ಧಮ್ಮದ ಬಗೆಗಿನ ಪುಸ್ತಕವನ್ನು ಪ್ರತಿಯೊಬ್ಬರೂ ಓದಬೇಕೆಂದು ಹರಾ ಮಹೇಶ್ ತಿಳಿಸಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಟೈರ್ ರಂಗನಾಥ್ ಮಾತನಾಡಿ, ಸಿರಾದಲ್ಲಿ ಅದ್ಧೂರಿಯಾಗಿ ನಡೆದ ಈ ಭೀಮೋತ್ಸವ ಮತ್ತು ಬುದ್ಧ ಜಯಂತಿ ಕಾರ್ಯಕ್ರಮಕ್ಕೆ ಹಲವು ಪ್ರಮುಖರ ಶ್ರಮವಿದ್ದು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದವರಿಗೆ ಧನ್ಯವಾದ ಎಂದರು.
ಸಮಿತಿಯ ತಾಲೂಕು ಅಧ್ಯಕ್ಷ ಶಿವಾಜಿ ನಗರ ತಿಪ್ಪೇಸ್ವಾಮಿ, ರಿಯಲ್ ಎಸ್ಟೇಟ್ ಉದ್ಯಮಿ ರಾಜು ಆರ್ ಆರ್, ನಿವೃತ್ತ ಪ್ರಾಚಾರ್ಯ ರಾಮಚಂದ್ರಪ್ಪ, ರಾಜ್ಯ ಸಂಚಾಲಕ ನರಸಿಂಹಮೂರ್ತಿ, ದಸಂಸ ಉಪಾಧ್ಯಕ್ಷ ಕೋದಂಡ ರಾಮ್, ಬೀರನಹಳ್ಳಿ ಹನುಮಂತರಾಯಪ್ಪ, ನರಸಪ್ಪ ಬರಗೂರು, ರಾಜು ಕೆ, ರಂಗನಾಥ್, ಕೃಷ್ಣಮೂರ್ತಿ, ಗಣೇಶ್, ಭೂತರಾಯ, ಮಂಜುನಾಥ್ ಸೇರಿದಂತೆ ತಾಲೂಕು ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳು ಇದ್ದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಭಂತೇಜಿ ಧಮ್ಮ ವೀರ ಮಾತನಾಡಿ, ಬುದ್ಧ ಮಾನವ ಸಮಾಜಕ್ಕೆ ದಾರಿ ತೋರಿಸಿದ ಮೊದಲ ಚಿಂತಕ. ಜಗತ್ತಿಗೆ ಮಾನವತಾವಾದಿ ಸಂದೇಶವನ್ನು ಸಾರಿದ ಭಗವಾನ್ ಬುದ್ಧರ ಶಾಂತಿ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶಗಳನ್ನು ನಮ್ಮ ಯುವ ಪೀಳಿಗೆಯು ಪಾಲಿಸುವಂತಾಗಬೇಕು ಎಂದರು.
ವಿಶ್ವಮಾನ್ಯವಾಗಿದ್ದು, ಜಾಗತಿಕ ಶಾಂತಿ, ಸೌಹಾರ್ದತೆ ನೆಲೆಸಲು ಅವರ ತತ್ವಾದರ್ಶಗಳ ಅನುಷ್ಠಾನ ಅಗತ್ಯವಾಗಿದೆ. ಈ ಮೂವರು ಭಾರತೀಯ ಇತಿಹಾಸದ ದಾರ್ಶನಿಕರು. ಸಮಾನತೆ, ವೈಚಾರಿಕತೆ, ಸಾಮಾಜಿಕ ನ್ಯಾಯ, ಕಾಯಕ ಮತ್ತು ಮಾನವತಾವಾದವನ್ನು ಬೋಧಿಸಿದ ಈ ಮೂವರ ತತ್ವಗಳು ವಿಶ್ವಮಾನ್ಯವಾಗಿವೆ.
— ಡಾ. ರವಿಕುಮಾರ್ ನೀಹ, ಚಿಂತಕರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


