ಮೈಸೂರು: ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಚಲಿಸುತ್ತಿದ್ದ ಬಸ್ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಹಾಗೂ ಮಹಿಳೆ ಇಬ್ಬರೂ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ನಡೆದಿದೆ.
ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮೃತಪಟ್ಟವರಾಗಿದ್ದಾರೆ. ಇವರು ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತಪಟ್ಟ ಮಹಿಳೆಯನ್ನು ಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಇವರು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ನಿವಾಸಿಯಾಗಿದ್ದಾರೆ.
ಕೆಎಸ್ ಆರ್ ಟಿಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹೃದಯಾಘಾತವಾಗಿದ್ದು ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಞೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ.
ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಆದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4