ತಿಪಟೂರು: ಹೆಣ್ಣುಮಕ್ಕಳು ಆರೋಗ್ಯದಿಂದ ಇದ್ದರೆ ಆ ಮನೆಯ ಆರೋಗ್ಯವಂತವಾಗಿರುತ್ತದೆ. ಅದೇ ರೀತಿ ಆ ಗ್ರಾಮ ಊರು ಆರೋಗ್ಯದಿಂದ ಕೂಡಿರುತ್ತದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಸಿ.ಬಿ.ಶಶಿಧರ್ ಹೇಳಿದರು.
ತಿಪಟೂರು ತಾಲೂಕು ಕಿಬ್ಬನಹಳ್ಳಿ ಕ್ರಾಸ್ ನಲ್ಲಿ ನಮ್ಮ ಆರೋಗ್ಯ ಕೇಂದ್ರ ಉದ್ಘಾಟನೆ ಹಾಗೂ ಬಹಿರಂಗ ಸಭೆಯನ್ನು ಉದ್ದೇಶಿಸಿ ಕೆ.ಬಿ.ಶಶಿಧರ್ ಮಾತನಾಡಿದರು.
ಗೋಡೆಕೆರೆ ಸುಕ್ಷೇತ್ರದ ಶ್ರೀ ಮೃತ್ಯುಂಜಯ ದೇಶಿಯ ಕೇಂದ್ರ ಸ್ವಾಮೀಜಿಯವರು ಮಾತನಾಡಿ, ಯಾವುದೇ ಪ್ರತಿಫಲ ಅಪೇಕ್ಷೆ ಇಲ್ಲದೆ ಜನಸೇವೆ ಮಾಡುತ್ತಿರುವ ಶಶಿಧರ ಸೇವೆ ಇದೇ ರೀತಿ ಮುಂದುವರೆದುಕೊಂಡು ಹೋದರೆ ಜನಪ್ರತಿನಿಧಿಯನ್ನಾಗಿ ಆಯ್ಕೆ ಮಾಡುವ ಅವಶ್ಯಕತೆ ಇದೆ. ಯಾವುದೇ ಕಾರ್ಯ ಮಾಡಬೇಕಾದರೆ ರಾಜಕೀಯ ಉದ್ದೇಶ ಇಟ್ಟುಕೊಂಡು ಮಾಡದೆ ತನ್ನ ಸ್ವಂತ ಹಣದಿಂದ ನಮ್ಮ ಆರೋಗ್ಯ ಎರಡನೇ ಕೇಂದ್ರವನ್ನು ಕೆ.ಬಿ.ಕ್ರಾಸ್ ನಲ್ಲಿ ಮಾಡಿರುವುದು ಸಂತೋಷದ ವಿಚಾರ ಎಂದು ಶ್ರೀಗಳು ತಿಳಿಸಿದರು.
ಇದೇ ಅಲ್ಲದೆ ತಿಪಟೂರಿನಲ್ಲಿ ಹೆಣ್ಣು ಮಕ್ಕಳಿಗೆ ಉದ್ಯೋಗ ನೀಡುವ ಹಾಗೂ ಕೌಶಲ್ಯ ತರಬೇತಿ ನೀಡಿ ಅವರಿಗೆ ಉದ್ಯೋಗ ಸಿಗಲು ಹಲವಾರು ತರಬೇತಿಗಳನ್ನು ಹಮ್ಮಿಕೊಳ್ಳುತ್ತೇನೆ ಹಾಗೂ ಮುಂದಿನ ಫೆಬ್ರವರಿಯಲ್ಲಿ 5ನೇ ತಾರೀಕಿನಂದು ಬಯಲು ರಂಗಮಂದಿರದಲ್ಲಿ ಯುವಜನ ಮೇಳ ಏರ್ಪಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆರ್ಟಿಸ್ಟ್ ಫಾರ್ ಹರ್ ಸಂಸ್ಥೆಯ ಅಧ್ಯಕ್ಷ ಡಾ.ಹೇಮಾ ದಿವಾಕರ್ ಸಿದ್ದಾರ್ಥ ವೈದ್ಯಕೀಯ ಕಾಲೇಜಿನ ಪ್ರೊಫೆಸರ್ ಡಾಕ್ಟರ್ ಎಂ.ಜೆ.ಶ್ರೀಕಾಂತ್ ದಲಿತ ಹೋರಾಟಗಾರ ಕುಂದೂರು ತಿಮ್ಮಯ್ಯ ಈ ಸಭೆಯಲ್ಲಿ ಭಾಗವಹಿಸಿದ್ದರು
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1