nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ
    • ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ
    • ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ
    • ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಮುಖ್ಯ ಆರೋಪಿ ಸೇರಿ ಎಂಟು ಮಂದಿ ಅರೆಸ್ಟ್; ಫೆ.24ರವರೆಗೆ ನಿಷೇಧಾಜ್ಞೆ ಜಾರಿ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಎಂಬ್ರಾಯಿಡರಿ, ಫ್ಯಾಬ್ರಿಕ್ ಪೇಂಟಿಂಗ್ ತರಬೇತಿಗೆ ಅರ್ಜಿ ಸಲ್ಲಿಸಿ
    • ಕಾರವಾರ: ಛತ್ರಪತಿ ಶಿವಾಜಿ ಜಯಂತಿ ಆಚರಣೆ
    • ಕಾರವಾರ: ಜನನ, ಮರಣವನ್ನು 21 ದಿನಗಳ ಒಳಗೆ ನೋಂದಣಿ ಮಾಡಿ: ಅಪರ ಜಿಲ್ಲಾಧಿಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ 28 ಕ್ಷೇತ್ರದಲ್ಲೂ ಪ್ರಚಾರ ಮಾಡ್ತೀನಿ: ವಿ.ಸೋಮಣ್ಣ ಗೆದ್ದರೇ ದೇವೇಗೌಡರೇ ಗೆದ್ದಂತೆ: ಹೆಚ್.ಡಿ.ದೇವೇಗೌಡ
    ಕೊರಟಗೆರೆ April 15, 2024

    ರಾಜ್ಯದ 28 ಕ್ಷೇತ್ರದಲ್ಲೂ ಪ್ರಚಾರ ಮಾಡ್ತೀನಿ: ವಿ.ಸೋಮಣ್ಣ ಗೆದ್ದರೇ ದೇವೇಗೌಡರೇ ಗೆದ್ದಂತೆ: ಹೆಚ್.ಡಿ.ದೇವೇಗೌಡ

    By adminApril 15, 2024No Comments3 Mins Read
    v somanna

    ಕೊರಟಗೆರೆ : ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳೇ ಗೆಲ್ತಾರೇ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಗೆಲ್ಲಿಸಿ ಪಾರ್ಲಿಮೆಂಟ್ ಕಳಿಸಿಕೊಡುವ ಶಕ್ತಿ ಇನ್ನೂ ಇದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಆಗುವ ಅರ್ಹತೆ ಯಾರಿಗೇ ಇದೇ ಹೇಳಿ. ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಗೆದ್ದರೇ ನಿಮ್ಮ ದೇವೇಗೌಡರೇ ಗೆದ್ದಂತೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.

    ಕೊರಟಗೆರೆ ಪಟ್ಟಣದ ಊರ್ಡಿಗೆರೆ ಸಮೀಪದ ಖಾಸಗಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾಪಾರ್ಟಿ ಮತ್ತು ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ನಾನು ಕಾವೇರಿ ವಿಚಾರದಲ್ಲಿ ಮೋದಿಯನ್ನು ನಂಬಿದ್ದೇನೆ. 1962ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ರೇ ತಲೆ ಎತ್ತಿ ನಾನು ಮೋದಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡ್ತಿನಿ. ತಮಿಳುನಾಡಿನ ಸ್ಟಾಲಿನ್ ನೀರಿನ ವೈರತ್ವದ ಬಗ್ಗೆ ಪ್ರಧಾನಿ ಮೋದಿಗೂ ಅರ್ಥ ಆಗಿದೆ. ನಾನು 2019ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ ಆದರೇ ಈಬಾರಿ ವಿ.ಸೋಮಣ್ಣ ಗೆದ್ದು ದೆಹಲಿಗೆ ಹೋಗಬೇಕಿದೆ ಎಂದು ಮನವಿ ಮಾಡಿದರು.

    ಸಿದ್ದರಾಮಯ್ಯನವರೇ ನೀವು ರಾಜ್ಯದ 7ಕೋಟಿ ಜನರ ಮುಖ್ಯಮಂತ್ರಿ. 150ಕೋಟಿ ಜನರ ಪ್ರಧಾನಮಂತ್ರಿ ನರೇಂದ್ರಮೋದಿ ಬಗ್ಗೆ ಮಾತನಾಡುವ ಮುನ್ನ ಎಚ್ಚರವಹಿಸಿ. ಸೋಮಣ್ಣ ಎಲ್ಲಿಯವನು ಅಂತಾ ನೀವು ಕೇಳ್ತಿರಾ. ನೀವು ಎಲ್ಲಿಯವರು ಬಾದಾಮಿಗೆ ಯಾಕೆ ಹೋದ್ರಿ ಹೇಳಿ. ಹೆಗಡೆ ಸಿಎಂ ಆಗಿದ್ದಾಗ ಬರಗಾಲ ಇತ್ತು ಆಗ ಅವರ ಕೇಂದ್ರ ಎಷ್ಟು ಹಣ ಕೊಡ್ತು ಅಂತಾ ಸಿದ್ದರಾಮಯ್ಯ ಹೇಳಲಿ. ನಾನು ತುಮಕೂರಿಗೆ ನೀರು ಕೋಡೋದಿಲ್ಲ ಅಂತೇಳಿ ನನ್ನ ಸೋಲಿಸಿದ್ರು. ಈಗ ಬೆಂಗಳೂರಿನಲ್ಲಿ ಕುಡಿಯೋ ನೀರಿನ ದಂದೇ ಎಷ್ಟು ನಡೆಯುತ್ತಿದೆ ಎಂಬುದು ಮೋದಿಯ ಗಮನಕ್ಕೆ ಹೋಗಿದೆ ಎಂದರು.

    ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ ಸಿದ್ದರಾಮಯ್ಯ ಸಿಎಂ ಮಾಡೊಕೆ 86ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ. ಒಂದೇ ಬೂತ್ನಲ್ಲಿ 2ಸಾವಿರ ಮತಗಳ ಲೀಡ್ ಕೊಡಿಸಿದ್ದು ಇದೇ ಸೋಮಣ್ಣ. ನೀವು ಮಾತನಾಡುವಾಗ ಅವರ ಅರ್ಹತೆ ಬಗ್ಗೆ ತಿಳಿಯಬೇಕಿದೆ. ನಿಮಗೇ ಅವಕಾಶ ಸಿಗ್ತು ನೀವು ಮುಖ್ಯಮಂತ್ರಿ ಆಗಿದ್ದೀರಿ. ಅರ್ಹತೆ ಇದ್ದೋರಿಗೆ ಸರಿಯಾದ ಅವಕಾಶ ಸಿಗೋದಿಲ್ಲ. ನೀವು ಎಲ್ಲೋ ಕೊತಿದ್ದೀರಿ ಅಂತಾ ಇನ್ನೋಬ್ಬರನ್ನು ಟೀಕೆ ಮಾಡ್ಬೇಡಿ ಎಂದು ಕಿಡಿಕಾರಿದರು.

    ನಾವು ಬಡವರ ಮಕ್ಕಳು ನಿಮ್ಮ ಹಾಗೇ ಶ್ರೀಮಂತರ ಮಕ್ಕಳಲ್ಲ. ನಾವು ಇನ್ನೋಬ್ಬರ ಬಗ್ಗೆ ರಾಜಕೀಯ ಪ್ರೇರಿತವಾಗಿ ಮಾತನಾಡಲ್ಲ. ಸೋಮಣ್ಣ ಹಿಂದೆ ಇಡೀ ಭಾರತ ದೇಶ ಇದೆ. ನರೇಂದ್ರ ಮೋದಿ, ಅಮಿತ್ಶಾ ಅಂತಹ ನಾಯಕರು ಇದಾರೇ. ನನಗೇ ಸಂಸ್ಕಾರ ಹೇಳಿಕೊಟ್ಟ ದೇವೇಗೌಡರು ಜೊತೆಗಿದ್ದಾರೆ. ನಾನು ಯಾರ ಬಗ್ಗೆ ಟೀಕೆ ಮಾಡೋದಿಲ್ಲ ಎಂದು ಪರೋಕ್ಷವಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ಗೆ ಟಾಂಗ್ ನೀಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಸಚಿವ ಗೋಪಾಲಯ್ಯ,ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್,ಬಿಜೆಪಿ ಮುಖಂಡ ಅನಿಲ್ಕುಮಾರ್, ಎಂಎಲ್ಸಿ ನಾರಾಯಣಸ್ವಾಮಿ, ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜಿನಪ್ಪ, ಬಿಜೆಪಿ ಯುವಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ಪವನಕುಮಾರ್, ಗುರುಧತ್, ದಾಸಲುಕುಂಟೆ ರಘು ಸೇರಿದಂತೆ ಇತರರು ಇದ್ದರು.

    ಮೂರು ಗಂಟೆ ತಡವಾಗಿ ಸಮಾವೇಶ ಆರಂಭ:

    ಮೈತ್ರಿಪಕ್ಷದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೋಮವಾರ ಬೆಳಗ್ಗೆ10ಗಂಟೆಗೆ ಬರಬೇಕಿತ್ತು. ಆದರೇ ಕೆಲವು ಕಾರಣದಿಂದ 3ಗಂಟೆ ತಡವಾಗಿ ಮಧ್ಯಾಹ್ನ 1ಗಂಟೆಗೆ ಆಗಮಿಸಿದ ಪರಿಣಾಮ ಸಮಾವೇಶ ತಡವಾಗಿ ಆರಂಭವಾಯಿತು. ಹಳ್ಳಿಗಳಿಂದ ಆಗಮಿಸಿದ್ದ ನೂರಾರು ಜನ ಮುಖಂಡರು ಮತ್ತು ಕಾರ್ಯಕರ್ತರು ಬಿಸಿಲಿನ ತಾಪಕ್ಕೆ ಕಾದು ಕಾದು ಬೇಜಾರಿನಿಂದ ಹಿಂದಿರುಗಿದ ಘಟನೆ ನಡೆಯಿತು.

    ಹಾಲಿ ಸಂಸದ ಬಸವರಾಜು ಗೈರು:

    ಮೈತ್ರಿಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಾವೇಶದಲ್ಲೂ ಗೈರಾಗಿದ್ದ ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜು ಕೊರಟಗೆರೆಯಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿಗಳ ಸಮಾವೇಶದಲ್ಲೂ ಮತ್ತೆ ಗೈರಾಗಿದ್ದಾರೆ. ಕೊರಟಗೆರೆಯಲ್ಲಿ ನಡೆದ ವಿ.ಸೋಮಣ್ಣನವರ ಸುದ್ದಿಗೋಷ್ಟಿ ಸೇರಿದಂತೆ ಕೊರಟಗೆರೆ ಕ್ಷೇತ್ರದ ಬೂತ್ ಮಟ್ಟದ ಸಭೆ ಮತ್ತು ಗ್ರಾ.ಪಂ. ಮಟ್ಟದ ಯಾವುದೇ ಸಮಾರಂಭದಲ್ಲಿ ಭಾಗವಹಿಸದೇ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ.

    ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 20, 2026

    ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪುರ ಅನುಭವ ಮಂಟಪ ಗುರುಕುಲ್ ಪಬ್ಲಿಕ್ ಸ್ಕೂಲ್‌ನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಬಳ್ಳಾರಿ: ದ್ವಿತೀಯ PUC–15,652 ವಿದ್ಯಾರ್ಥಿಗಳು, SSLC–23,271 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

    February 20, 2026

    ಬಾಗಲಕೋಟೆ ಕಲ್ಲು ತೂರಾಟ ಘಟನೆ: ತಪ್ಪಿತಸ್ಥರು ಯಾರೇ ಆಗಿದ್ದರೂ  ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

    February 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.