nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಾಜ್ಯದ 28 ಕ್ಷೇತ್ರದಲ್ಲೂ ಪ್ರಚಾರ ಮಾಡ್ತೀನಿ: ವಿ.ಸೋಮಣ್ಣ ಗೆದ್ದರೇ ದೇವೇಗೌಡರೇ ಗೆದ್ದಂತೆ: ಹೆಚ್.ಡಿ.ದೇವೇಗೌಡ
    ಕೊರಟಗೆರೆ April 15, 2024

    ರಾಜ್ಯದ 28 ಕ್ಷೇತ್ರದಲ್ಲೂ ಪ್ರಚಾರ ಮಾಡ್ತೀನಿ: ವಿ.ಸೋಮಣ್ಣ ಗೆದ್ದರೇ ದೇವೇಗೌಡರೇ ಗೆದ್ದಂತೆ: ಹೆಚ್.ಡಿ.ದೇವೇಗೌಡ

    By adminApril 15, 2024No Comments3 Mins Read
    v somanna

    ಕೊರಟಗೆರೆ : ಕರ್ನಾಟಕದ 28 ಲೋಕಸಭಾ ಕ್ಷೇತ್ರದಲ್ಲೂ ನಮ್ಮ ಮೈತ್ರಿ ಅಭ್ಯರ್ಥಿಗಳೇ ಗೆಲ್ತಾರೇ. ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳ ಗೆಲ್ಲಿಸಿ ಪಾರ್ಲಿಮೆಂಟ್ ಕಳಿಸಿಕೊಡುವ ಶಕ್ತಿ ಇನ್ನೂ ಇದೆ. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಿ ಆಗುವ ಅರ್ಹತೆ ಯಾರಿಗೇ ಇದೇ ಹೇಳಿ. ತುಮಕೂರು ಕ್ಷೇತ್ರದ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಗೆದ್ದರೇ ನಿಮ್ಮ ದೇವೇಗೌಡರೇ ಗೆದ್ದಂತೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ತಿಳಿಸಿದರು.

    ಕೊರಟಗೆರೆ ಪಟ್ಟಣದ ಊರ್ಡಿಗೆರೆ ಸಮೀಪದ ಖಾಸಗಿ ಕಲ್ಯಾಣ ಮಂಟಪದಲ್ಲಿ ಭಾರತೀಯ ಜನತಾಪಾರ್ಟಿ ಮತ್ತು ಜಾತ್ಯಾತೀತ ಜನತಾದಳ ಪಕ್ಷದಿಂದ ಸೋಮವಾರ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ನಾನು ಕಾವೇರಿ ವಿಚಾರದಲ್ಲಿ ಮೋದಿಯನ್ನು ನಂಬಿದ್ದೇನೆ. 1962ರಿಂದ ನಾನು ಕಾವೇರಿ ನೀರಿಗಾಗಿ ಹೋರಾಟ ಮಾಡಿದ್ದೇನೆ. ವಿ.ಸೋಮಣ್ಣ ಗೆದ್ರೇ ತಲೆ ಎತ್ತಿ ನಾನು ಮೋದಿಗೆ ಕಾವೇರಿ ನೀರು ಮತ್ತು ಮೇಕೆದಾಟಿನ ಬಗ್ಗೆ ಪ್ರಶ್ನೆ ಮಾಡ್ತಿನಿ. ತಮಿಳುನಾಡಿನ ಸ್ಟಾಲಿನ್ ನೀರಿನ ವೈರತ್ವದ ಬಗ್ಗೆ ಪ್ರಧಾನಿ ಮೋದಿಗೂ ಅರ್ಥ ಆಗಿದೆ. ನಾನು 2019ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ ಆದರೇ ಈಬಾರಿ ವಿ.ಸೋಮಣ್ಣ ಗೆದ್ದು ದೆಹಲಿಗೆ ಹೋಗಬೇಕಿದೆ ಎಂದು ಮನವಿ ಮಾಡಿದರು.

    ಸಿದ್ದರಾಮಯ್ಯನವರೇ ನೀವು ರಾಜ್ಯದ 7ಕೋಟಿ ಜನರ ಮುಖ್ಯಮಂತ್ರಿ. 150ಕೋಟಿ ಜನರ ಪ್ರಧಾನಮಂತ್ರಿ ನರೇಂದ್ರಮೋದಿ ಬಗ್ಗೆ ಮಾತನಾಡುವ ಮುನ್ನ ಎಚ್ಚರವಹಿಸಿ. ಸೋಮಣ್ಣ ಎಲ್ಲಿಯವನು ಅಂತಾ ನೀವು ಕೇಳ್ತಿರಾ. ನೀವು ಎಲ್ಲಿಯವರು ಬಾದಾಮಿಗೆ ಯಾಕೆ ಹೋದ್ರಿ ಹೇಳಿ. ಹೆಗಡೆ ಸಿಎಂ ಆಗಿದ್ದಾಗ ಬರಗಾಲ ಇತ್ತು ಆಗ ಅವರ ಕೇಂದ್ರ ಎಷ್ಟು ಹಣ ಕೊಡ್ತು ಅಂತಾ ಸಿದ್ದರಾಮಯ್ಯ ಹೇಳಲಿ. ನಾನು ತುಮಕೂರಿಗೆ ನೀರು ಕೋಡೋದಿಲ್ಲ ಅಂತೇಳಿ ನನ್ನ ಸೋಲಿಸಿದ್ರು. ಈಗ ಬೆಂಗಳೂರಿನಲ್ಲಿ ಕುಡಿಯೋ ನೀರಿನ ದಂದೇ ಎಷ್ಟು ನಡೆಯುತ್ತಿದೆ ಎಂಬುದು ಮೋದಿಯ ಗಮನಕ್ಕೆ ಹೋಗಿದೆ ಎಂದರು.

    ತುಮಕೂರು ಲೋಕಸಭಾ ಅಭ್ಯರ್ಥಿ ವಿ.ಸೋಮಣ್ಣ ಮಾತನಾಡಿ ಸಿದ್ದರಾಮಯ್ಯ ಸಿಎಂ ಮಾಡೊಕೆ 86ಶಾಸಕರ ಸಹಿ ಹಾಕಿಸಿ ದೇವೇಗೌಡರಿಗೆ ಕೊಟ್ಟಿದ್ದು ಇದೇ ಸೋಮಣ್ಣ. ಒಂದೇ ಬೂತ್ನಲ್ಲಿ 2ಸಾವಿರ ಮತಗಳ ಲೀಡ್ ಕೊಡಿಸಿದ್ದು ಇದೇ ಸೋಮಣ್ಣ. ನೀವು ಮಾತನಾಡುವಾಗ ಅವರ ಅರ್ಹತೆ ಬಗ್ಗೆ ತಿಳಿಯಬೇಕಿದೆ. ನಿಮಗೇ ಅವಕಾಶ ಸಿಗ್ತು ನೀವು ಮುಖ್ಯಮಂತ್ರಿ ಆಗಿದ್ದೀರಿ. ಅರ್ಹತೆ ಇದ್ದೋರಿಗೆ ಸರಿಯಾದ ಅವಕಾಶ ಸಿಗೋದಿಲ್ಲ. ನೀವು ಎಲ್ಲೋ ಕೊತಿದ್ದೀರಿ ಅಂತಾ ಇನ್ನೋಬ್ಬರನ್ನು ಟೀಕೆ ಮಾಡ್ಬೇಡಿ ಎಂದು ಕಿಡಿಕಾರಿದರು.

    ನಾವು ಬಡವರ ಮಕ್ಕಳು ನಿಮ್ಮ ಹಾಗೇ ಶ್ರೀಮಂತರ ಮಕ್ಕಳಲ್ಲ. ನಾವು ಇನ್ನೋಬ್ಬರ ಬಗ್ಗೆ ರಾಜಕೀಯ ಪ್ರೇರಿತವಾಗಿ ಮಾತನಾಡಲ್ಲ. ಸೋಮಣ್ಣ ಹಿಂದೆ ಇಡೀ ಭಾರತ ದೇಶ ಇದೆ. ನರೇಂದ್ರ ಮೋದಿ, ಅಮಿತ್ಶಾ ಅಂತಹ ನಾಯಕರು ಇದಾರೇ. ನನಗೇ ಸಂಸ್ಕಾರ ಹೇಳಿಕೊಟ್ಟ ದೇವೇಗೌಡರು ಜೊತೆಗಿದ್ದಾರೆ. ನಾನು ಯಾರ ಬಗ್ಗೆ ಟೀಕೆ ಮಾಡೋದಿಲ್ಲ ಎಂದು ಪರೋಕ್ಷವಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ಗೆ ಟಾಂಗ್ ನೀಡಿದರು.

    ಕಾರ್ಯಕ್ರಮದಲ್ಲಿ ಮಾಜಿ ಸಚಿವ ಗೋಪಾಲಯ್ಯ,ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್,ಬಿಜೆಪಿ ಮುಖಂಡ ಅನಿಲ್ಕುಮಾರ್, ಎಂಎಲ್ಸಿ ನಾರಾಯಣಸ್ವಾಮಿ, ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಅಂಜಿನಪ್ಪ, ಬಿಜೆಪಿ ಯುವಧ್ಯಕ್ಷ ಶಿವಕುಮಾರ್, ಮಾಜಿ ಅಧ್ಯಕ್ಷ ಪವನಕುಮಾರ್, ಗುರುಧತ್, ದಾಸಲುಕುಂಟೆ ರಘು ಸೇರಿದಂತೆ ಇತರರು ಇದ್ದರು.

    ಮೂರು ಗಂಟೆ ತಡವಾಗಿ ಸಮಾವೇಶ ಆರಂಭ:

    ಮೈತ್ರಿಪಕ್ಷದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೋಮವಾರ ಬೆಳಗ್ಗೆ10ಗಂಟೆಗೆ ಬರಬೇಕಿತ್ತು. ಆದರೇ ಕೆಲವು ಕಾರಣದಿಂದ 3ಗಂಟೆ ತಡವಾಗಿ ಮಧ್ಯಾಹ್ನ 1ಗಂಟೆಗೆ ಆಗಮಿಸಿದ ಪರಿಣಾಮ ಸಮಾವೇಶ ತಡವಾಗಿ ಆರಂಭವಾಯಿತು. ಹಳ್ಳಿಗಳಿಂದ ಆಗಮಿಸಿದ್ದ ನೂರಾರು ಜನ ಮುಖಂಡರು ಮತ್ತು ಕಾರ್ಯಕರ್ತರು ಬಿಸಿಲಿನ ತಾಪಕ್ಕೆ ಕಾದು ಕಾದು ಬೇಜಾರಿನಿಂದ ಹಿಂದಿರುಗಿದ ಘಟನೆ ನಡೆಯಿತು.

    ಹಾಲಿ ಸಂಸದ ಬಸವರಾಜು ಗೈರು:

    ಮೈತ್ರಿಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಮಾವೇಶದಲ್ಲೂ ಗೈರಾಗಿದ್ದ ತುಮಕೂರು ಹಾಲಿ ಸಂಸದ ಜಿ.ಎಸ್.ಬಸವರಾಜು ಕೊರಟಗೆರೆಯಲ್ಲಿ ಸೋಮವಾರ ನಡೆದ ಮಾಜಿ ಪ್ರಧಾನಿಗಳ ಸಮಾವೇಶದಲ್ಲೂ ಮತ್ತೆ ಗೈರಾಗಿದ್ದಾರೆ. ಕೊರಟಗೆರೆಯಲ್ಲಿ ನಡೆದ ವಿ.ಸೋಮಣ್ಣನವರ ಸುದ್ದಿಗೋಷ್ಟಿ ಸೇರಿದಂತೆ ಕೊರಟಗೆರೆ ಕ್ಷೇತ್ರದ ಬೂತ್ ಮಟ್ಟದ ಸಭೆ ಮತ್ತು ಗ್ರಾ.ಪಂ. ಮಟ್ಟದ ಯಾವುದೇ ಸಮಾರಂಭದಲ್ಲಿ ಭಾಗವಹಿಸದೇ ಇರುವುದು ಹಲವು ಅನುಮಾನಕ್ಕೆ ಕಾರಣವಾಗಿ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ.

    ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.