nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ

    December 19, 2025

    ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ

    December 19, 2025
    Facebook Twitter Instagram
    ಟ್ರೆಂಡಿಂಗ್
    • ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ
    • ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ
    • ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ
    • ಡಿ.24ರಂದು ಮಧುಗಿರಿ ತಾಲ್ಲೂಕು ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಕೆ.ಪಿ. ನಟರಾಜು ಆಯ್ಕೆ
    • ಶಿರಾ | ಜಮೀನು ವಿಚಾರಕ್ಕೆ ಜಗಳ: ಒಬ್ಬನ ಕೊಲೆಯಲ್ಲಿ ಅಂತ್ಯ
    • ಉತ್ತರ ಕರ್ನಾಟಕಕ್ಕೆ ₹3,450 ಕೋಟಿ ಬಂಪರ್ ಅನುದಾನ: ಸಚಿವ ಸಂಪುಟ ಸಭೆಯ ಮಹತ್ವದ ತೀರ್ಮಾನಗಳು
    • ಮುಳ್ಳೂರು ಆಸ್ಪತ್ರೆಗೆ ಎರಡು ಬಾರಿ ಉತ್ತಮ ಆಸ್ಪತ್ರೆ  ಪ್ರಶಸ್ತಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಜನಿವಾರ ತೆಗೆಸಿದ ಪ್ರಕರಣ: ಜಿಲ್ಲಾ ಬ್ರಾಹ್ಮಣ ಸಭಾದಿಂದ ಖಂಡನಾ ನಿರ್ಣಯ
    ತುಮಕೂರು April 21, 2025

    ಜನಿವಾರ ತೆಗೆಸಿದ ಪ್ರಕರಣ: ಜಿಲ್ಲಾ ಬ್ರಾಹ್ಮಣ ಸಭಾದಿಂದ ಖಂಡನಾ ನಿರ್ಣಯ

    By adminApril 21, 2025No Comments2 Mins Read
    janivar

    ತುಮಕೂರು: ಸಿ.ಇ.ಟಿ. ಪರಿಕ್ಷಾ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಹೋದ ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆಯ ವಿರುದ್ಧ ಜಿಲ್ಲಾ ಬ್ರಾಹ್ಮಣ ಸಭಾ ಖಂಡನಾ ನಿರ್ಣಯ ಅಂಗೀಕರಿಸಿತು.

    ನಗರದ ಬಿ.ಹೆಚ್. ರಸ್ತೆಯ ಶಂಕರಮಠದಲ್ಲಿ ಜಿಲ್ಲಾ ಬಾಹ್ಮಣ ಸಭಾದ ನೇತೃತ್ವದಲ್ಲಿ ಸಮಾವೇಷಗೊಂಡ ಆರ್ಯವೈಶ್ಯ, ವಿಶ್ವಕರ್ಮ ಹಾಗೂ ಜೈನ ಸಮುದಾಯದ ಮುಖಂಡರು ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುವ ಕುರಿತು ನಿರ್ಣಯ ಮಾಡಿದರು.


    Provided by
    Provided by

    ಈ ವೇಳೆ ಮಾತನಾಡಿದ ಹಿಂದೂ ಜಾಗರಣಾ ವೇದಿಕೆ ಮುಖಂಡ ಜಿ.ಎಸ್. ಬಸವರಾಜು ಸ್ವಾತಂತ್ರ್ಯ ಭಾರತದಲ್ಲಿ ಈ ರೀತಿಯ ಘಟನೆ ಎಂದೂ ಸಹ ನಡೆದಿರಲಿಲ್ಲ. ಈ ಘಟನೆ ಒಂದು ಸಮುದಾಯದ ಮೇಲೆ ನಡೆದ ದೌರ್ಜನ್ಯವಲ್ಲ ಬದಲಾಗಿ ಸಂವಿಧಾನದ ಮೇಲೆ ನಡೆದ ದೌರ್ಜನ್ಯ. ಸಮಸ್ತ ಹಿಂದೂ ಸಮಾಜ ಇದನ್ನು ಖಂಡಿಸಬೇಕು ಎಂದರು.

    ಆರ್ಯವೈಶ್ಯ ಸಮಾಜದ ಮುಖಂಡರಾದ ಡಾ. ರಮೇಶ್ ಬಾಬು ಮಾತನಾಡಿ, ನಿರಂತರವಾಗಿ ಬಹುಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಸಂಘಟನೆಯ ಕೊರತೆ ಕಾರಣವಾಗಿದೆ. ಬೇರೆ ದೇಶದ ಜನರು ಇಂದು ಸನಾತನ ಧರ್ಮದ ಕಡೆಗೆ ಆಕರ್ಷಿತವಾಗುತ್ತಿರುವ ಸಂದರ್ಭದಲ್ಲಿ ನಮ್ಮಲ್ಲಿ ಧರ್ಮದ ಕುರಿತು ಆಸಕ್ತಿ ಕಡಿಮೆಯಾಗಿದೆ ಈ ನಿಟ್ಟಿನಲ್ಲಿ ಎಲ್ಲರೂ ಆಲೋಚಿಸಬೇಕಿದೆ  ಎಂದರು.

    ಜಿಲ್ಲಾಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಎಂ.ಜಿ. ಸಿದ್ದರಾಮಯ್ಯ ಮಾತನಾಡಿ, ಕಾಯಿಲೆ ಬಂದಾಗ ಕೂಡಲೇ ಅದಕ್ಕೆ ಮದ್ದು ತೆಗೆದುಕೊಳ್ಳಬೇಕು. ಅದನ್ನು ನಿರ್ಲಕ್ಷಿಸಿದರೆ ಅದರಿಂದ ವ್ಯಕ್ತಿಯ ಸಾವು ಸಂಭವಿಸುತ್ತದೆ. ಆದ್ದರಿಂದ ವಿದ್ಯಾರ್ಥಿಯ ಜನಿವಾರ ತೆಗೆದು ಕ್ರೌರ್ಯ ಮೆರೆದ ಘಟನೆಗೆ ತುರ್ತು ಪ್ರತಿಭಟನೆ ಅಗತ್ಯ ಎಂದು ತಿಳಿಸಿದರು.

    ವಿಶ್ವಕರ್ಮ ಸಮುದಾಯದ ಮುಖಂಡರಾದ ಚಂದ್ರಶೇಖರ ಆಚಾರ್ ಮಾತನಾಡಿ, ದೂರದ ಬೀದರ್ ಅಥವಾ ಶಿವಮೊಗ್ಗದಲ್ಲಿ ನಡೆದ ಘಟನೆ ತುಮಕೂರಿನಲ್ಲಿ ಕೂಡ ನಡೆಯಬಹುದು. ಹಾಗಾಗಿ ಘಟನೆಯನ್ನು ಬಹಳ ಸೂಕ್ಷ್ಮವಾಗಿ ಗಮನಿಸಬೇಕು ಕೇವಲ ಇದು ಒಂದು ಸಮುದಾಯದ ಮೇಲಾಗಿರುವ ದೌರ್ಜನ್ಯವಲ್ಲ ಸಮಸ್ತ ಹಿಂದೂ ಧರ್ಮದ ಮೇಲಿನ ದೌರ್ಜನ್ಯ ಎಂದರು.

    ದಿಗಂಬರ ಜೈನ ಸಮಾಜದ ಮುಖಂಡರಾದ ಶೀತಲ್ ಜೈನ್ ಮಾತನಾಡಿ, ಜೈನ ಧರ್ಮದಲ್ಲಿ ಜನಿವಾರ ಧಾರಣೆ ಮಾಡುವ ಸಂಸ್ಕೃತಿ  ಪ್ರಥಮ ತೀರ್ಥಂಕರರಾದ ಭರತ ಚಕ್ರವರ್ತಿಯಿಂದ ಪ್ರಾರಂಭಗೊಂಡು ಇದಕ್ಕೆ ಈಗ ಅಪಮಾನ ಮಾಡಿರುವುದು ಅಕ್ಷಮ್ಯ.  ಜನಿವಾರಕ್ಕೆ ಧಕ್ಕೆ ತರುವವರ ವಿರುದ್ಧ ಜೈನರೂ ಸಹ ಪ್ರತಿರೋಧ ವ್ಯಕ್ತಪಡಿಸಿದ್ದಾರೆ ಎಂದರು.

    ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷ ಹೆಚ್.ಎನ್. ಚಂದ್ರಶೇಖರ್ ಮಾತನಾಡಿ ಜನಿವಾರ ತೆಗೆಸಿದ ಘಟನೆ ಸಣ್ಣ ವಿಷಯವೆಂದು ಭಾವಿಸಬಾರದು. ಘಟನೆ ಚಿಕ್ಕದಾಗಿರುವಾಗಲೇ ಹೊಸಕಿ ಹಾಕುವ ಕೆಲಸ ಮಾಡಬೇಕಿದೆ. ಈ ನಿಟ್ಟಿನಲ್ಲಿ ವಿವಿಧ ಸಮುದಾಯಗಳ ಬೆಂಬಲದೊಂದಿಗೆ ತುಮಕೂರಿನಲ್ಲಿ ಏ.28 ರಂದು ಸೋಮವಾರ ಬೆಳಿಗ್ಗೆ 11 ಗಂಟೆಗೆ ನಗರದ ಬಿ.ಜಿ.ಎಸ್. ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೃಹತ್ ಪ್ರತಿಭಟನೆ ಮಾಡುವುದಾಗಿ ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW

    admin
    • Website

    Related Posts

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದು ಅಪರಾಧ: ಪೊಲೀಸ್ ಅಧಿಕಾರಿ ಎಸ್.ಜಿ.ಶ್ರೀನಿವಾಸ ಪ್ರಸಾದ್

    December 19, 2025

    ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

    December 18, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ನಕಾಶೆ ರಸ್ತೆ ತೆರವುಗೊಳಿಸಲು ವಿಳಂಬ: ಹಸಿರು ಸೇನೆಯಿಂದ ಪ್ರತಿಭಟನೆ

    December 19, 2025

    ಪಾವಗಡ: ತಾಲ್ಲೂಕಿನ ನಾಗಲಮಡಿಕೆ ಹೋಬಳಿಯ ತಿಮ್ಮಮ್ಮನಹಳ್ಳಿಯಲ್ಲಿ ರೈತರು ತಮ್ಮ ಜಮೀನುಗಳಿಗೆ ಹೋಗಲು ರಸ್ತೆಯ ಸಮಸ್ಯೆಯಿದ್ದು ಅಧಿಕಾರಿಗಳು ಶೀಘ್ರವೇ ಬಗೆಹರಿಸಬೇಕೆಂದು ಒತ್ತಾಯಿಸಿದರು.…

    ಡಿ.21ರಿಂದ ಪಲ್ಸ್ ಪೋಲಿಯೋ ಕಾರ್ಯಕ್ರಮ: ತಪ್ಪದೇ ಲಸಿಕೆ ಹಾಕಿಸಿ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    December 19, 2025

    ನಾಟಕ, ಬದುಕನ್ನು ಕಟ್ಟಿಕೊಡುವ ಜೊತೆಗೆ ಸಾಮರಸ್ಯ ಬೆಳೆಸುತ್ತದೆ: ವೈ.ಎಂ.ಪುಟ್ಟಣ್ಣಯ್ಯ

    December 19, 2025

    ಲೇಖಕಿಯರ ಸಂಘದ ದತ್ತಿ ಬಹುಮಾನಗಳಿಗೆ ಕಥೆ—ಕವನಗಳ ಆಹ್ವಾನ

    December 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.