- ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.
ಕೊರಟಗೆರೆ: ಕಲ್ಪತರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ 102ಹಾಸ್ಟೆಲ್ನಲ್ಲಿ 40ಕಡೆ ಮಾತ್ರ ಖಾಯಂ ವಾರ್ಡನ್ಗಳ ನೇಮಕ.. ಬರೋಬ್ಬರಿ 62 ವಸತಿ ನಿಲಯಗಳ ವಾರ್ಡನ್ ಹುದ್ದೆಯೇ ಖಾಲಿ.. 102 ವಸತಿ ಶಾಲೆಗಳಿಗೆ ಕಾವಲುಗಾರನ ನೇಮಕ ಇದ್ರು ಭದ್ರತೆಯೇ ಮರೀಚಿಕೆ.. ನಿಲಯದ ಕಟ್ಟಡಗಳಲ್ಲಿ ನೆಪಮಾತ್ರಕ್ಕೆ ಸಿಸಿಟಿವಿ ಲಭ್ಯವಿದ್ರು ನಿರ್ವಹಣೆಯೇ ಇಲ್ಲದಾಗಿ ಭಯವೇ ಇಲ್ಲದಾಗಿದೆ.
ತುಮಕೂರು ಜಿಲ್ಲೆಯ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಕುಣಿಗಲ್ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ 102 ವಸತಿ ನಿಲಯಗಳಿವೆ. ಸರಕಾರಿ ಮೆಟ್ರಿಕ್ ನಂತರದ ಮತ್ತು ಪೂರ್ವದ 102 ವಸತಿ ಶಾಲೆಗಳಲ್ಲಿ 62 ಕಡೆ ಖಾಲಿಯಿವೆ. ವಾರ್ಡನ್ ಮತ್ತು ಕಾವಲಗಾರನ ಕೊರತೆಯಿಂದ ನಿರ್ವಹಣೆಗೆ ಸಮಸ್ಯೆಯಾಗಿದೆ.
ವಾರ್ಡನ್ ಇಲ್ಲದಿರುವ ವಸತಿ ಶಾಲೆಗಳ ನಿರ್ವಹಣೆಗೆ ಎರಡು ಕಡೆ ಒಬ್ಬರಿಗೆ ಜವಾಬ್ದಾರಿ ನೀಡಲಾಗಿದೆ. ಇನ್ನೂ ಕೇಲವು ಕಡೆ ಇಲಾಖೆಯ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಾರ್ಡನ್ ನೇಮಕಾತಿ ಕೊರತೆಯಿಂದ ಸ್ಥಳೀಯವಾಗಿ ಪ್ರತಿನಿತ್ಯ ಸಮಸ್ಯೆಗಳ ಸರಮಾಲೆಯೇ ಉದ್ಬವಿಸುತ್ತಿವೆ. ಅಧಿಕಾರಿಗಳ ಭಯವೇ ವಿದ್ಯಾರ್ಥಿಗಳಿಗೆ ಇಲ್ಲದೇ ತಡರಾತ್ರಿ ಇಂತಹ ದುರ್ಘಟನೆ ನಡಿಯೋದು ಸರ್ವೇ ಸಾಮಾನ್ಯ ಎಂಬುದು ಸ್ಥಳೀಯರ ಮಾತಾಗಿದೆ.
ಪೋಕ್ಸೋ ಖಾಯ್ದೆಯಡಿ ಪ್ರಕರಣ ದಾಖಲು..
ಕೊರಟಗೆರೆ ಪಟ್ಪಣದ ಬಾಲಕಿಯರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯನ್ನ ತಡರಾತ್ರಿ ಆಟೋ ಹತ್ತಿಸಿಕೊಂಡು ಹೋಗಿದ್ದ ದುಗ್ಗೆನಹಳ್ಳಿಯ ಆಟೋ ಚಾಲಕ ಆರ್ಯಗೌಡ(24) ಬಂಧಿಸಲಾಗಿದೆ. ಆರೋಪಿಯ ಮೇಲೆ ಪೋಕ್ಸೋಕಾಯ್ದೆ ಮತ್ತು ಅಕ್ರಾಸಿಟಿ ಕಾಯ್ದೆಯಡಿ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶನಾಯ್ಡು, ಕೊರಟಗೆರೆ ಪಿಎಸೈ ಚೇತನಗೌಡ ಬೇಟಿನೀಡಿ ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸಿದ್ದಾರೆ.
ಹಾಸ್ಟೇಲ್ ಗೆ ಜಂಟಿ ನಿರ್ದೇಶಕ ಭೇಟಿ..
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಸ್ಟೇಲ್ಗೆ ಬೇಟಿನೀಡಿ ಮೆಟ್ರಿಕ್ ಪೂರ್ವ ಮತ್ತು ನಂತರದ ನಿಲಯದ ವಾರ್ಡನ್, ಕಾವಲುಗಾರಿಗೆ ನೋಟಿಸ್ ಜಾರಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸ್ಟೆಲ್ನ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಲೋಪಗಳ ಬಗ್ಗೆ ಮಾಹಿತಿ ಕಲೆಹಾಕಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.
358 ಜನ ವಿದ್ಯಾರ್ಥಿಗಳ ರಕ್ಷಣೆ ಯಾರದ್ದು..?
ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-50, ಬಾಲಕರ ವಿದ್ಯಾರ್ಥಿ ನಿಲಯ-70, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ-90, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-90 ಮತ್ತು ಅಕ್ಕಿರಾಂಪುರದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-58ಜನ ಸೇರಿ ಒಟ್ಟು 358ಜನ ವಿದ್ಯಾರ್ಥಿಗಳ ಬಳಿಯು ಮೊಬೈಲ್ ಸೌಲಭ್ಯವಿದೆ. ತಡರಾತ್ರಿ 1ಗಂಟೆವರೇಗೆ ವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿರುವ ಪರಿಣಾಮ ಇಂತಹ ಸಮಸ್ಯೆ ಸೃಷ್ಟಿ ಆಗುತ್ತೀವೆ. ಸರಕಾರ ಮತ್ತು ಇಲಾಖೆ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ.
ನಿಲಯದ ಭದ್ರತೆ ಮತ್ತು ಕರ್ತವ್ಯ ಲೋಪ ಎಸಗಿದ ವಾರ್ಡನ್-ಕಾವಲುಗಾರ ಮೇಲೆ ಕ್ರಮ ಆಗತ್ತೇ. ಆರೋಪಿಯ ಮೇಲೆ ಪೋಕ್ಸೋ ಮತ್ತು ಅಕ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಭದ್ರತೆಯ ಬಗ್ಗೆ ತನಿಖೆ ನಡೆಯುತ್ತೆ. ತುಮಕೂರು ಜಿಲ್ಲೆಯ 102ಹಾಸ್ಟೆಲ್ನಲ್ಲಿ 62ಕಡೆ ವಾರ್ಡನ್ ಹುದ್ದೆಯೇ ಖಾಲಿಯಿದೆ. ಹುದ್ದೆಭರ್ತಿಗೆ ಈಗಾಗಲೇ ಸರಕಾರಕ್ಕೆ ಮನವಿ ಮಾಡಲಾಗಿದೆ.
–ಕೃಷ್ಣಪ್ಪ.ಎಸ್. ಜಂಟಿ ನಿರ್ದೇಶಕ. ಸಮಾಜ ಕಲ್ಯಾಣ ಇಲಾಖೆ.ತುಮಕೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA