nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026
    Facebook Twitter Instagram
    ಟ್ರೆಂಡಿಂಗ್
    • ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ
    • ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು
    • ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ
    • ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್
    • ಮತದಾರರ ಪರಿಷ್ಕರಣೆಯಿಂದ ಬಾಂಗ್ಲಾ ದೇಶದ ವಲಸೆಗಾರರನ್ನು ಹೊರಗಿಡಿ: ಜೆಡಿಎಸ್ ಒತ್ತಾಯ
    • ಮಕ್ಕಳು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಶಿಕ್ಷಣಾಧಿಕಾರಿ ಮಮತಾಮಣಿ ಕರೆ
    • ಸರ್ಕಾರಿ ಶಾಲೆಗಳ ಅಳಿವು — ಉಳಿವು ಸರ್ಕಾರದ ನಿರ್ಧಾರದಲ್ಲಿದೆ: ಪೋಷಕರು—ಶಿಕ್ಷಕರು ಎಚ್ಚರವಹಿಸಿ: ಶ್ರೀ ರುದ್ರಮುನಿ ಸ್ವಾಮೀಜಿ
    • ಮಿಡಿಗೇಶಿ: ಪಾದಚಾರಿಗೆ ಅಪರಿಚಿತ ವಾಹನ ಡಿಕ್ಕಿ: ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಾಸ್ಟೆಲ್ ಗೇಟ್ ಹತ್ತಿ ವಿದ್ಯಾರ್ಥಿನಿ ತೆರಳಿದ ಪ್ರಕರಣ: ಆಟೋ ಚಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ
    ಕೊರಟಗೆರೆ July 16, 2023

    ಹಾಸ್ಟೆಲ್ ಗೇಟ್ ಹತ್ತಿ ವಿದ್ಯಾರ್ಥಿನಿ ತೆರಳಿದ ಪ್ರಕರಣ: ಆಟೋ ಚಾಲಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ

    By adminJuly 16, 2023No Comments2 Mins Read
    koratagere
    • ಮಂಜುಸ್ವಾಮಿ ಎಂ.ಎನ್., ಕೊರಟಗೆರೆ.

    ಕೊರಟಗೆರೆ: ಕಲ್ಪತರು ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಗೆ ಸೇರಿದ 102ಹಾಸ್ಟೆಲ್‍ನಲ್ಲಿ 40ಕಡೆ ಮಾತ್ರ ಖಾಯಂ ವಾರ್ಡನ್‍ಗಳ ನೇಮಕ.. ಬರೋಬ್ಬರಿ 62 ವಸತಿ ನಿಲಯಗಳ ವಾರ್ಡನ್ ಹುದ್ದೆಯೇ ಖಾಲಿ.. 102 ವಸತಿ ಶಾಲೆಗಳಿಗೆ ಕಾವಲುಗಾರನ ನೇಮಕ ಇದ್ರು ಭದ್ರತೆಯೇ ಮರೀಚಿಕೆ.. ನಿಲಯದ ಕಟ್ಟಡಗಳಲ್ಲಿ ನೆಪಮಾತ್ರಕ್ಕೆ ಸಿಸಿಟಿವಿ ಲಭ್ಯವಿದ್ರು ನಿರ್ವಹಣೆಯೇ ಇಲ್ಲದಾಗಿ ಭಯವೇ ಇಲ್ಲದಾಗಿದೆ.

    ತುಮಕೂರು ಜಿಲ್ಲೆಯ ತುಮಕೂರು ನಗರ, ತುಮಕೂರು ಗ್ರಾಮಾಂತರ, ಕೊರಟಗೆರೆ, ಮಧುಗಿರಿ, ಪಾವಗಡ, ಶಿರಾ, ಗುಬ್ಬಿ, ತುರುವೇಕೆರೆ, ತಿಪಟೂರು, ಚಿಕ್ಕನಾಯಕನಹಳ್ಳಿ, ಕುಣಿಗಲ್ ತಾಲೂಕಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ 102 ವಸತಿ ನಿಲಯಗಳಿವೆ. ಸರಕಾರಿ ಮೆಟ್ರಿಕ್ ನಂತರದ ಮತ್ತು ಪೂರ್ವದ 102 ವಸತಿ ಶಾಲೆಗಳಲ್ಲಿ 62 ಕಡೆ ಖಾಲಿಯಿವೆ. ವಾರ್ಡನ್ ಮತ್ತು ಕಾವಲಗಾರನ ಕೊರತೆಯಿಂದ ನಿರ್ವಹಣೆಗೆ ಸಮಸ್ಯೆಯಾಗಿದೆ.

    ವಾರ್ಡನ್ ಇಲ್ಲದಿರುವ ವಸತಿ ಶಾಲೆಗಳ ನಿರ್ವಹಣೆಗೆ ಎರಡು ಕಡೆ ಒಬ್ಬರಿಗೆ ಜವಾಬ್ದಾರಿ ನೀಡಲಾಗಿದೆ. ಇನ್ನೂ ಕೇಲವು ಕಡೆ ಇಲಾಖೆಯ ಸಿಬ್ಬಂದಿಗಳಿಗೆ ಕರ್ತವ್ಯಕ್ಕೆ ನಿಯೋಜನೆ ಮಾಡಲಾಗಿದೆ. ವಾರ್ಡನ್ ನೇಮಕಾತಿ ಕೊರತೆಯಿಂದ ಸ್ಥಳೀಯವಾಗಿ ಪ್ರತಿನಿತ್ಯ ಸಮಸ್ಯೆಗಳ ಸರಮಾಲೆಯೇ ಉದ್ಬವಿಸುತ್ತಿವೆ. ಅಧಿಕಾರಿಗಳ ಭಯವೇ ವಿದ್ಯಾರ್ಥಿಗಳಿಗೆ ಇಲ್ಲದೇ ತಡರಾತ್ರಿ ಇಂತಹ ದುರ್ಘಟನೆ ನಡಿಯೋದು ಸರ್ವೇ ಸಾಮಾನ್ಯ ಎಂಬುದು ಸ್ಥಳೀಯರ ಮಾತಾಗಿದೆ.

    ಪೋಕ್ಸೋ ಖಾಯ್ದೆಯಡಿ ಪ್ರಕರಣ ದಾಖಲು..

    ಕೊರಟಗೆರೆ ಪಟ್ಪಣದ ಬಾಲಕಿಯರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯನ್ನ ತಡರಾತ್ರಿ ಆಟೋ ಹತ್ತಿಸಿಕೊಂಡು ಹೋಗಿದ್ದ ದುಗ್ಗೆನಹಳ್ಳಿಯ ಆಟೋ ಚಾಲಕ ಆರ್ಯಗೌಡ(24) ಬಂಧಿಸಲಾಗಿದೆ. ಆರೋಪಿಯ ಮೇಲೆ ಪೋಕ್ಸೋಕಾಯ್ದೆ ಮತ್ತು ಅಕ್ರಾಸಿಟಿ ಕಾಯ್ದೆಯಡಿ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಧುಗಿರಿ ಡಿವೈಎಸ್ಪಿ ವೆಂಕಟೇಶನಾಯ್ಡು, ಕೊರಟಗೆರೆ ಪಿಎಸೈ ಚೇತನಗೌಡ ಬೇಟಿನೀಡಿ ತನಿಖೆಯನ್ನು ಇನ್ನಷ್ಟು ಚುರುಕು ಗೊಳಿಸಿದ್ದಾರೆ.

    ಹಾಸ್ಟೇಲ್‍ ಗೆ ಜಂಟಿ ನಿರ್ದೇಶಕ ಭೇಟಿ..

    ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಹಾಸ್ಟೇಲ್‍ಗೆ ಬೇಟಿನೀಡಿ ಮೆಟ್ರಿಕ್ ಪೂರ್ವ ಮತ್ತು ನಂತರದ ನಿಲಯದ ವಾರ್ಡನ್, ಕಾವಲುಗಾರಿಗೆ ನೋಟಿಸ್ ಜಾರಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಹಾಸ್ಟೆಲ್‍ನ ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದ ನಂತರ ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಲೋಪಗಳ ಬಗ್ಗೆ ಮಾಹಿತಿ ಕಲೆಹಾಕಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

    358 ಜನ ವಿದ್ಯಾರ್ಥಿಗಳ ರಕ್ಷಣೆ ಯಾರದ್ದು..?

    ಸರಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ-50, ಬಾಲಕರ ವಿದ್ಯಾರ್ಥಿ ನಿಲಯ-70, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ-90, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-90 ಮತ್ತು ಅಕ್ಕಿರಾಂಪುರದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ-58ಜನ ಸೇರಿ ಒಟ್ಟು 358ಜನ ವಿದ್ಯಾರ್ಥಿಗಳ ಬಳಿಯು ಮೊಬೈಲ್ ಸೌಲಭ್ಯವಿದೆ. ತಡರಾತ್ರಿ 1ಗಂಟೆವರೇಗೆ ವಿದ್ಯಾರ್ಥಿಗಳು ಮೊಬೈಲ್ ಬಳಸುತ್ತಿರುವ ಪರಿಣಾಮ ಇಂತಹ ಸಮಸ್ಯೆ ಸೃಷ್ಟಿ ಆಗುತ್ತೀವೆ. ಸರಕಾರ ಮತ್ತು ಇಲಾಖೆ ಇದರ ಬಗ್ಗೆ ಗಂಭೀರ ಚಿಂತನೆ ನಡೆಸಬೇಕಿದೆ.

    ನಿಲಯದ ಭದ್ರತೆ ಮತ್ತು ಕರ್ತವ್ಯ ಲೋಪ ಎಸಗಿದ ವಾರ್ಡನ್-ಕಾವಲುಗಾರ ಮೇಲೆ ಕ್ರಮ ಆಗತ್ತೇ. ಆರೋಪಿಯ ಮೇಲೆ ಪೋಕ್ಸೋ ಮತ್ತು ಅಕ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಿಸಿಟಿವಿ ನಿರ್ವಹಣೆ ಮತ್ತು ರಾತ್ರಿ ಪಾಳೇಯದ ಭದ್ರತೆಯ ಬಗ್ಗೆ ತನಿಖೆ ನಡೆಯುತ್ತೆ. ತುಮಕೂರು ಜಿಲ್ಲೆಯ 102ಹಾಸ್ಟೆಲ್‍ನಲ್ಲಿ 62ಕಡೆ ವಾರ್ಡನ್ ಹುದ್ದೆಯೇ ಖಾಲಿಯಿದೆ. ಹುದ್ದೆಭರ್ತಿಗೆ ಈಗಾಗಲೇ ಸರಕಾರಕ್ಕೆ ಮನವಿ ಮಾಡಲಾಗಿದೆ.

    –ಕೃಷ್ಣಪ್ಪ.ಎಸ್. ಜಂಟಿ ನಿರ್ದೇಶಕ. ಸಮಾಜ ಕಲ್ಯಾಣ ಇಲಾಖೆ.ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IHoly2pCaZPEkuV6RjAGNC

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


    Provided by
    Provided by
    admin
    • Website

    Related Posts

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    ಕೊರಟಗೆರೆ: 8,589 ಪಿಂಚಣಿದಾರರಿಗೆ ಪಿಂಚಣಿ ತಾತ್ಕಾಲಿಕ ಸ್ಥಗಿತ: ದಾಖಲೆ ಸಲ್ಲಿಸಿ– ತಹಶೀಲ್ದಾರ್ ಮಂಜುನಾಥ್ ಕೆ.

    July 3, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ಪಾವಗಡ: ಶಾಲೆಗಳಲ್ಲಿ ಅಣುಕು ಮತದಾನ: ಪ್ರಜಾಪ್ರಭುತ್ವದ ಅರಿವು ಮೂಡಿಸುವ ಪರಿಣಾಮಕಾರಿ ಪ್ರಯೋಗ

    July 4, 2026

    ಪಾವಗಡ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಮಹತ್ವದ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸಲು ಶಾಲೆಗಳಲ್ಲಿ ಅಣುಕು ಮತದಾನ (Mock…

    ಎಲ್ಲ ದಾನಗಳಿಗಿಂತ ಅನ್ನ, ನೀರು ಹಾಗೂ ವಸ್ತ್ರ ದಾನ ಶ್ರೇಷ್ಠ: ಸೌಮ್ಯ ಅನಿಲ್ ಚಿಕ್ಕಮಾದು

    July 4, 2026

    ಮಾದರ ಮಹಾಸಭಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವಜಾ: ಅಧ್ಯಕ್ಷ ಗೋಪಾಲಯ್ಯ ವಿರುದ್ಧ ಬಾಣದ ರಂಗಯ್ಯ ಆಕ್ರೋಶ

    July 4, 2026

    ಮಧುಗಿರಿ ಬಿಜೆಪಿ ಜಿಲ್ಲಾ ಮೋರ್ಚಾ ಪದಾಧಿಕಾರಿಗಳ ಆಯ್ಕೆಗೆ ತಾತ್ಕಾಲಿಕ ತಡೆ: ಬಿ.ಎಚ್. ಅನಿಲ್ ಕುಮಾರ್

    July 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.