ತುಮಕೂರು: ಸಿದ್ದರಾಮಯ್ಯ ಅವರು ಜಾತಿಗಣತಿಯ ಕಾಂತರಾಜ್ ವರದಿಯನ್ನು ಜಯಪ್ರಕಾಶ್ ಹೆಗ್ಡೆ ವರದಿ ಎಂದು ಹೆಸರು ಇರಿಸಿ ಜಾತಿ ಗಣತಿ ಜಾರಿಗೊಳಿಸಲು ಮುಂದಾದ್ರು, ಸಾಧ್ಯವಾಗಿರಲಿಲ್ಲ. ಇದೀಗ ರಾಜ್ಯದಲ್ಲಿ ಆರ್ ಸಿಬಿ ಅಭಿಮಾನಿಗಳ ಕಾಲ್ತುಳಿತ ಪ್ರಕರಣವನ್ನು ಮುಚ್ಚಿಹಾಕಲು ಜಾತಿಗಣತಿ ವಿಚಾರವನ್ನು ಸಿದ್ದರಾಮಯ್ಯ ಅಡ್ಡ ತಂದಿದ್ದಾರೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ರವಿಕುಮಾರ್ ಆರೋಪಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಜಾತಿ ಗಣತಿಗೆ ವಿರೋಧ ಮಾಡುತ್ತಿಲ್ಲ. ಜಾತಿ ಗಣತಿಯನ್ನು ಮಾಡಬೇಕು ಮತ್ತು ಅದನ್ನು ಜಾರಿಗೊಳಿಸಬೇಕು ಎಂದರು.
11 ಜನರ ಸಾವಿಗೆ ಕಾಂಗ್ರೆಸ್ ಕಾರಣ ಎಂಬ ಘಟನೆಯನ್ನು ಮುಚ್ಚಿಹಾಕಲು ಜಾತಿ ಗಣತಿ ಜಾರಿ ವಿಚಾರವನ್ನು ಮುನ್ನಲೆಗೆ ತರಲಾಗುತ್ತಿದೆ ಎಂದರು.
ಕೇಂದ್ರ ಸರಕಾರ ಕೂಡ ಜಾತಿ ಗಣತಿ ಮಾಡಲಿದೆ. ಆದ್ರೆ ರಾಜ್ಯ ಸರಕಾರ ಹೊಸದಾಗಿ ಜಾತಿಗಣತಿ ಮಾಡುವುದಾಗಿ ಹೇಳುತ್ತಿದೆ. ಅನಗತ್ಯವಾಗಿ ಹಣ ಬಳಸುತ್ತಿರೋದು ಸರಿಯಲ್ಲಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW