ತುಮಕೂರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರೈತರಿಗೆ ಅಪಾರ ಆರ್ಥಿಕ ನಷ್ಟ ಉಂಟು ಮಾಡುತ್ತಿರುವ ಕಾಲು ಬಾಯಿ ರೋಗವನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಪ್ರತಿ 6 ತಿಂಗಳಿಗೊಮ್ಮೆ ದನ/ಎಮ್ಮೆ ಹಂದಿಗಳಿಗೆ ಕಾಲು ಬಾಯಿ ರೋಗದ ವಿರುದ್ದ ಲಸಿಕೆ ಹಾಕಲಾಗುತ್ತಿದೆ ಎಂದು ಪಶು ಆಸ್ಪತ್ರೆ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಡಾ.ವೈ.ಜಿ.ಕಾಂತರಾಜು ಎಂದು ಮಾಹಿತಿ ನೀಡಿದ್ದಾರೆ.
ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಅ.21ರಿಂದ ನವೆಂಬರ್ 20 ರವರೆಗೆ ಕಾಲು ಬಾಯಿ ರೋಗದ ವಿರುದ್ದ ಲಸಿಕಾ ಕಾರ್ಯಕ್ರಮವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಲಸಿಕೆ ನೀಡುವುದರಿಂದ ಜಾನುವಾರುಗಳಲ್ಲಿ ಕಂಡು ಬರುವ ಕಾಲುಬಾಯಿ ಜ್ವರವನ್ನು ನಿಯಂತ್ರಿಸಬಹುದು. ಈ ನಿಟ್ಟಿನಲ್ಲಿ ಲಸಿಕಾ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಎಲ್ಲಾ ರೈತರು, ಪಶುಪಾಲಕರು, ಜಾನುವಾರು ಸಾಕಾಣಿಕೆದಾರರಿಗೆ ಅರಿವು ಮೂಡಿಸಬೇಕು ಎಂದರು.
ತುಮಕೂರು ತಾಲ್ಲೂಕಿನ ಎಲ್ಲಾ ದನ/ಎಮ್ಮೆ ಹಂದಿಗಳಿಗೆ ಲಸಿಕೆ ಹಾಕಲು ತಾಲ್ಲೂಕು ಪಶುಪಾಲನಾ ಇಲಾಖೆಯು 20 ಪಶುವೈದ್ಯಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಲಸಿಕೆ ಹಾಕಲು 60 ಲಸಿಕಾದಾರರನ್ನು ನಿಯೋಜಿಸಲಾಗಿದ್ದು, ಲಸಿಕೆದಾರರು ಮನೆಮನೆಗೆ ತೆರಳಿ ಲಸಿಕೆ ಹಾಕಲಿದ್ದು ತಾಲ್ಲೂಕಿನ ಎಲ್ಲಾ ಪಶುಪಾಲಕರು ತಪ್ಪದೇ ತಮ್ಮ ರಾಸುಗಳಿಗೆ ಲಸಿಕೆ ಹಾಕಿಸಿ ರೋಗ ನಿರ್ಮೂಲನೆ ಮಾಡಲು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296