nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026
    Facebook Twitter Instagram
    ಟ್ರೆಂಡಿಂಗ್
    • ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು
    • ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ
    • ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇರೆ ಬೇರೆ ರಾಜ್ಯಗಳಿಗೆ ತೆರಳಿ ತನಿಖೆ ಮಾಡಲು ಸಿಬಿಐಗೆ ಅವಕಾಶವಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌
    ರಾಜ್ಯ ಸುದ್ದಿ September 28, 2024

    ಬೇರೆ ಬೇರೆ ರಾಜ್ಯಗಳಿಗೆ ತೆರಳಿ ತನಿಖೆ ಮಾಡಲು ಸಿಬಿಐಗೆ ಅವಕಾಶವಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್‌

    By adminSeptember 28, 2024No Comments2 Mins Read
    g parameshwar

    ತುಮಕೂರು:  ಡೆಲ್ಲಿ ಪೊಲೀಸ್‌ ಎಸ್ಟಾಬ್ಲಿಷ್‌ ಮೆಂಟ್‌ ಆಕ್ಟ್‌ ಅಡಿಯಲ್ಲಿ ಸಿಬಿಐಗೆ ಬೇರೆ ಬೇರೆ ರಾಜ್ಯಗಳಿಗೆ ತೆರಳಿ ತನಿಖೆ ಮಾಡಲು ಅವಕಾಶವಿದೆ. ಆದರೆ ಈಗ ರಾಜ್ಯ ಸರಕಾರದ ಅನುಮತಿ ಪಡೆದು ರಾಜ್ಯದಲ್ಲಿ ಸಿಬಿಐ ತನಿಖೆ ಮಾಡುವಂತೆ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

    ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿಬಿಐ ವಿವಿಧ ರಾಜ್ಯಗಳಲ್ಲಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ತನಿಖೆ ಮಾಡಬಹುದು. ಕೆಲವು ರಾಜ್ಯದಲ್ಲಿ ಸಿಬಿಐ ನೇರವಾಗಿ ಬಂದು ತನಿಖೆ ಮಾಡಬಹುದು. ನಮ್ಮ ರಾಜ್ಯದಲ್ಲಿಯೂ ಕೂಡ ಇಲ್ಲಿವರೆಗೂ ಅದೇ ರೀತಿ ಇತ್ತು. ಈ ಹಿಂದೆ ಬೇಡ ಎಂದು ಮಾಡಿದ್ದೇವೆ ಎಂದು ತಿಳಿಸಿದರು.

    ಈ ಹಿಂದೆ ರಾಜ್ಯ ಸರಕಾರ ಎರಡು ಮೂರು ಬಾರಿ ಆ ರೀತಿ ತೀರ್ಮಾನ ಮಾಡಿದೆ. ಇದು ಮೊದಲ ಬಾರಿ ಅಲ್ಲ. ಅನುಮತಿ ಕೊಡುವಂತಹ ಸಂದರ್ಭ ಬಂದ್ರೆ ರಾಜ್ಯ ಸರಕಾರ ಕೊಡಬೇಕಾಗುತ್ತದೆ. ಅನುಮತಿ ಕೊಡುವುದಿಲ್ಲ ಎಂದು ಹೇಳಿಲ್ಲ. ಸರಕಾರದ ಈ ಆದೇಶ ಸಿಬಿಐಗೆ ಮಾತ್ರ ಸೀಮಿತವಾಗಿರುತ್ತದೆ ಎಂದರು.

    ಲೋಕಾಯುಕ್ತ ಸಂಸ್ಥೆಗೆ ಮೊನ್ನೆ ಜನಪ್ರತಿನಿಧಿಗಳ ಟ್ರಯಲ್‌ ಕೋರ್ಟ್ ನಲ್ಲಿ ತನಿಖೆ ಮಾಡುವಂತೆ ಆದೇಶ ಮಾಡಲಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಎಫ್‌ ಐ ಆರ್‌ ದಾಖಲು ಮಾಡಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಪ್ರಾರಂಭ ಮಾಡಲು ಎಫ್‌ ಐಆರ್‌ ದಾಖಲು ಮಾಡಲಾಗಿದೆ. ಈಗಾಗಲೇ ಯಾವ್ದೆ ತನಿಖೆಗೂ ಸಿದ್ದ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಹೀಗಾಗಿ ತನಿಖೆಗೆ ಯಾವ್ದೆ ವಿರೋಧವಿಲ್ಲ ತನಿಖೆ ಮಾಡಲಿ. ತನಿಖೆಯ ವರದಿ ಆಧಾರದ ಮೇಲೆ ನಾವು ಮತ್ತು ಮುಖ್ಯಮಂತ್ರಿಗಳು ತೆಗೆದುಕೊಳ್ಳುತ್ತೇವೆ ಎಂದರು.

    ತನಿಖೆಯಲ್ಲಿ ಸರಕಾರದ ನೇರ ಹಸ್ತಕ್ಷೇಪ ಇರುವುದಿಲ್ಲ. ಲೋಕಾಯುಕ್ತ ಪೊಲೀಸ್‌ ಸರಕಾರದ ಅಧೀನದಲ್ಲಿ ಇಲ್ಲ. ಸರಕಾರ ಅವರಿಗೆ ಸವಲತ್ತು ಕೊಡಬಹುದು, ಆದರೆ ಸರಕಾರದ ಆಡಳಿತಾತ್ಮಕ ವ್ಯವಸ್ಥೆಯಲ್ಲಿ ಇರುವುದಿಲ್ಲ. ಅದು ಸ್ವತಂತ್ರ ತನಿಖಾ ಸಂಸ್ಥೆಯಾಗಿದೆ. ಅವರೇ ಪಾರದಶಕವಾಗಿ ತನಿಖೆ ಮಾಡಲು ಅವಕಾಶವಿದೆ ಎಂದರು.

    ಮೈಸೂರು ಲೋಕಾಯುಕ್ತ ಎಸ್ಪಿ ತನಿಖೆ ಮಾಡುವಂತೆ ನ್ಯಾಯಾಲಯ ಹೇಳಿದ್ದು, ಆದ್ರಿಂದ ತನಿಖೆಯನ್ನು ಮಾಡಲಿದ್ದಾರೆ. ರಾಜೀನಾಮೆ ಕೊಡುವ ಅಗತ್ಯವಿಲ್ಲ ಎಂದು ನಾವೆಲ್ಲರೂ ಹೇಳಿದ್ದೇವೆ, ಮುಖ್ಯಮಂತ್ರಿಗಳು ಕೂಡ ನಾನು ರಾಜೀನಾಮೆ ಕೊಡುವುದಿಲ್ಲ ಎಂದಿದ್ದಾರೆ. ಈ ಸಂದಭದಲ್ಲಿ ಒಬ್ಬೊಬ್ಬರು ಒಂದೊಂದು ರೀತಿ ವ್ಯಾಖ್ಯಾನ ಮಾಡುತ್ತಿದ್ದಾರೆ ನಾವು ಅದಕ್ಕೆಲ್ಲಾ ಉತ್ತರ ಕೊಡುವ ಅಗತ್ಯವಿಲ್ಲ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


    Provided by
    Provided by
    admin
    • Website

    Related Posts

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕ ಹೃದಯಾಘಾತದಿಂದ ಸಾವು

    July 18, 2026

    ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡಚಾದ್ರಿ ಸಮೀಪ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ…

    ಸಿರಾದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಂತೆ ಕೋರಿ ನಾಗರಿಕ ವಿಮಾನಯಾನ ಸಚಿವರಿಗೆ ವಿ.ಸೋಮಣ್ಣ ಪತ್ರ

    July 18, 2026

    ತುಮಕೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಒಲವು: ಸಚಿವ ಜಿ. ಪರಮೇಶ್ವರ್

    July 18, 2026

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.