nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026
    Facebook Twitter Instagram
    ಟ್ರೆಂಡಿಂಗ್
    • ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
    • ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
    • ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
    • ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
    • ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
    • ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
    • ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್ಐಎ ತನಿಖೆ ಮಾಡಬೇಕು: ಎಸ್. ಸುರೇಶ್ ಕುಮಾರ್
    Uncategorized October 26, 2023

    ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್ಐಎ ತನಿಖೆ ಮಾಡಬೇಕು: ಎಸ್. ಸುರೇಶ್ ಕುಮಾರ್

    By adminOctober 26, 2023No Comments2 Mins Read
    suresh kumar

    Provided by
    Provided by

    ಬೆಂಗಳೂರು: ಹೆಬ್ಬಾಳದ ಅಕ್ರಮ ಗುರುತು ಚೀಟಿ ಸೃಷ್ಟಿ ಪ್ರಕರಣದ ಸಿಬಿಐ ಅಥವಾ ಎನ್‍ಐಎ ತನಿಖೆ ಮಾಡಬೇಕು ಎಂದು ಎಂದು ರಾಜ್ಯದ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಆಗ್ರಹಿಸಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಸಿದ್ಧಪಡಿಸಿದ ನಕಲಿ ಆಧಾರ್ ಕಾರ್ಡ್‍ಗಳನ್ನು ರದ್ದುಪಡಿಸಬೇಕು. ಅಪರಾಧಿಗಳು ತಪ್ಪಿಸಿಕೊಳ್ಳಲು ಬಿಡಬಾರದು. ಇದು ಕೇವಲ ರಾಜಕೀಯದ ಪ್ರಶ್ನೆಯಲ್ಲ; ಸಮಾಜದ ಅಳಿವು ಉಳಿವಿನ ಪ್ರಶ್ನೆ ಎಂದು ತಿಳಿಸಿದರು.

    ಜನ್ಮ ದೃಢೀಕರಣ ಪತ್ರವನ್ನೂ ನೀಡದೆ ಆಧಾರ್ ಕಾರ್ಡ್ ಮಾಡಲಾಗಿದೆ ಎಂದರೆ, ಇವರ ಅಟ್ಟಹಾಸ, ಅಹಂಕಾರ ಎಷ್ಟಿರಬೇಕು ಎಂದು ಪ್ರಶ್ನಿಸಿದರು. ಇದನ್ನೂ ಗಂಭೀರವಾಗಿ ಪರಿಗಣಿಸಬೇಕು. ಇದನ್ನು ಚುನಾವಣಾ ಗೆಲುವಿಗಾಗಿ ಮಾಡಿಸಿದ್ದಾರೆ. ಇದರ ಕುರಿತು ಚುನಾವಣಾ ಆಯೋಗಕ್ಕೂ ದೂರು ಕೊಡಲಿದ್ದೇವೆ. ಆಧಾರ್ ಕಾರ್ಡ್, ನಕಲಿ ಮತದಾರರ ಚೀಟಿ ಜಾಲದ ವ್ಯಾಪ್ತಿಯ ವಿಚಾರಣೆ ಆಗಬೇಕಿದ್ದು, ಎನ್‍ಐಎ ಅಥವಾ ಸಿಬಿಐಗೆ ಇದನ್ನು ಒಪ್ಪಿಸಲು ಕೋರಲಿದ್ದೇವೆ ಎಂದು ತಿಳಿಸಿದರು.

    ರಾಜ್ಯದ ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ತಮ್ಮ ಗಾಂಭೀರ್ಯತೆ ತೋರಿಸಲಿ ಎಂದು ಒತ್ತಾಯಿಸಿದರು. ಬೈರತಿ ಸುರೇಶ್ ವಿಚಾರಣೆಯೂ ನಡೆಯಬೇಕು ಎಂದು ಆಗ್ರಹಿಸಿದರು.
    ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಪ್ರಕಾರ ಸಿಸಿಬಿಯ ಮಹಿಳಾ ಸಂರಕ್ಷಣಾ ದಳದ ಪೊಲೀಸ್ ಇನ್‍ಸ್ಪೆಕ್ಟರ್ ಅವರು ಇದೇ 19ರಂದು ಆರ್‍ಟಿ ನಗರದ ಸುಲ್ತಾನ ಪಾಳ್ಯ ಬನಶಂಕರಿ ಕಾಂಪ್ಲೆಕ್ಸ್‍ನ ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್‍ನಲ್ಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಲಾಗುತ್ತಿತ್ತು ಎಂದು ಉಲ್ಲೇಖಿಸಲಾಗಿದೆ. ಇವರು ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಾನ್ ಕಾರ್ಡ್ ಮತ್ತಿತರ ದಾಖಲಾತಿಗಳನ್ನು ತಮ್ಮ ಅಂಗಡಿಯ ಕಂಪ್ಯೂಟರ್‍ನಲ್ಲಿ ಸುಳ್ಳು ಸೃಷ್ಟಿ ಮಾಡಿ ತಮ್ಮ ಸ್ವಂತ ಲಾಭಕ್ಕಾಗಿ ಸಾರ್ವಜನಿಕರಿಗೆ, ಕಾನೂನುಬಾಹಿರ ಕೃತ್ಯಗಳಲ್ಲಿ ಭಾಗಿಯಾದವರಿಗೆ ಸಹಕರಿಸುತ್ತಿದ್ದರು. ನಿಜವಾದ ಗುರುತಿನ ಚೀಟಿಗಳೆಂದು ಹೆಚ್ಚಿನ ಹಣಕ್ಕೆ ನೀಡಿ ಸರಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದರು. ಎಂಎಸ್‍ಎಲ್ ಟೆಕ್ನೊ ಸೊಲ್ಯೂಶನ್ಸ್ ಮಾಲೀಕ ಮೌನೇಶ್ ಕುಮಾರ್ ಹಾಗೂ ಈತನ ಕೃತ್ಯಕ್ಕೆ ಸಹಕರಿಸಿದ ಭಗತ್, ರಾಘವೇಂದ್ರ ವಿರುದ್ಧ ಕಾನೂನು ಕ್ರಮ ಜರುಗಿಸಲು ಕೋರಲಾಗಿತ್ತು ಎಂದರು.

    ಸೆಕ್ಷನ್ 420 ಸೇರಿ ಹಲವು ಸೆಕ್ಷನ್‍ಗಳಡಿ ಎಫ್‍ಐಆರ್ ದಾಖಲಾಗಿದೆ. ಈ ಅಪರಾಧವು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದೆ. ಆಧಾರ್ ಕಾರ್ಡ್ ನಕಲಿ ಸೃಷ್ಟಿಯು ರಾಷ್ಟ್ರೀಯ ಭದ್ರತೆ ದೃಷ್ಟಿಯಿಂದ ಮಹಾನ್ ಅಪರಾಧ. ಆರೋಪಿಗಳು ಶಾಸಕ- ಸಚಿವ ಬೈರತಿ ಸುರೇಶ್ ಅವರು ನಿಕಟವರ್ತಿಗಳು ಎಂದು ಆರೋಪಿಸಿದರು. ಮೌನೇಶ್ ಸ್ಕೂಟರ್ ರೈಡ್ ಮಾಡುತ್ತಿದ್ದು, ಬೈರತಿ ಸುರೇಶ್ ಅವರು ಹಿಂದೆ ಕುಳಿತ ಫೋಟೋವನ್ನು ಇದೇವೇಳೆ ಪ್ರದರ್ಶಿಸಿದರು.

    ನಕಲಿ ಮತದಾರರ ಗುರುತು ಚೀಟಿ ಸಿದ್ಧಪಡಿಸುವುದು ಕೂಡ ರಾಷ್ಟ್ರೀಯ ಅಪರಾಧ. ರಾಷ್ಟ್ರೀಯ ಭದ್ರತೆಯ ವಿರುದ್ಧ ನಡೆದ ಕುಕೃತ್ಯದ ಬಗ್ಗೆ ಯಾವುದೇ ಕಾಂಗ್ರೆಸ್ ನಾಯಕರು ಮಾತನಾಡಿಲ್ಲ. ಬೈರತಿ ಸುರೇಶ್ ಅವರು ಸಿಎಂಗೆ ಹತ್ತಿರದವರೆಂದು ಎಲ್ಲರೂ ಮಾತನಾಡುತ್ತಾರೆ ಎಂದು ವಿವರಿಸಿದರು.

    ವಕೀಲರ ಸಂಘದ ಅಧ್ಯಕ್ಷ ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯ ವಿವೇಕ್ ರೆಡ್ಡಿ ಅವರು ಮಾತನಾಡಿ, ಭಾರತದಲ್ಲಿ ಪೌರತ್ವ ಗುರುತುಚೀಟಿ ಇಲ್ಲ; ಅದಕ್ಕೆ ಹತ್ತಿರದ ಹೋಲಿಕೆಯ ಕಾರ್ಡ್ ಆಧಾರ್ ಕಾರ್ಡ್. ಇದರ ಮೂಲಕ ಹಲವಾರು ಸೌಲಭ್ಯ ಪಡೆಯಬಹುದು ಎಂದರು. ಬಾಂಗ್ಲಾದೇಶದಿಂದ ಬಂದ ನಿವಾಸಿಗಳು ಅತ್ಯಂತ ಸುಲಭವಾಗಿ ಇಂಥ ನಕಲಿ ಗುರುತಿನ ಚೀ ಟಿ ಪಡೆಯುವಂತಾಗಿದೆ ಎಂದು ಆಕ್ಷೇಪಿಸಿದರು.

    ಭಾರತೀಯ ನಿವಾಸಿಗಳು ಕೆಲವು ಸಂದರ್ಭಗಳಲ್ಲಿ ಕೋರ್ಟಿಗೆ ಹೋಗಿ, ಪುರಾವೆ ನೀಡಿ ಅತ್ಯಂತ ಕಷ್ಟದಿಂದ ಆಧಾರ್ ಕಾರ್ಡ್ ಮಾಡಿಸುತ್ತಾರೆ. ಆದರೆ, ಇಲ್ಲಿ ಬೇರೆ ದೇಶದವರು ಸಲೀಸಾಗಿ ನಕಲಿ ಆಧಾರ್ ಕಾರ್ಡ್ ಮಾಡಿಸುತ್ತಿದ್ದಾರೆ. ಪೊಲೀಸರು ಇದನ್ನು ಗಂಭೀರವಾಗಿ ಪರಿಗಣಿಸಿಲ್ಲ; ಇದನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ ಎಂದು ಟೀಕಿಸಿದರು.

    ಸರಕಾರ ಇದರ ಹಿಂದಿನ ಜಾಲವನ್ನು ಭೇದಿಸಿ ಪೂರ್ಣ ಜಾಲವನ್ನು ಬಂಧಿಸಲು ಸೂಚಿಸಬೇಕು. ಚುನಾವಣಾ ಆಯೋಗವು ಇಂಥ ಮತದಾರರ ನಕಲಿ ಗುರುತುಚೀಟಿ ಕುರಿತಂತೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಬಿಜೆಪಿ ಮುಖಂಡ ಕಟ್ಟಾ ಜಗದೀಶ್ ನಾಯ್ಡು ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

    admin
    • Website

    Related Posts

    “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    June 11, 2026

    26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!

    June 11, 2026

    ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!

    June 11, 2026

    Comments are closed.

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ

    June 17, 2026

    ಕೊರಟಗೆರೆ: ತಾಲ್ಲೂಕಿನ ತುಂಬಾಡಿ ಗ್ರಾಮ ಹಾಗೂ ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಮ್ಮಿಕೊಂಡಿದ್ದ ಇ–ಪೌತಿ ಖಾತಾ ಆಂದೋಲನ–2…

    ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ

    June 17, 2026

    ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ

    June 17, 2026

    ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ

    June 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.