ಹುಬ್ಬಳ್ಳಿ: ಹುಬ್ಬಳ್ಳಿಯ KHB ಕಾಲೋನಿಯಲ್ಲಿ ಶ್ರೀಗಂಧದ ಮರ(Sandalwood Trees)ವನ್ನು ಕಡಿದು ಕದ್ದೊಯ್ಯಲಾಗಿದೆ. ರಾತ್ರಿ ವೇಳೆ ಯಾರೂ ಇಲ್ಲದ ಸಮಯವನ್ನು ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಬೆಳೆದು ನಿಂತಿದ್ದ ಗಂಧದ ಮರವನ್ನು ಮಂಗಮಾಯ ಮಾಡಿದ್ದಾರೆ.
ಶಿವಶಂಕರ್ ಐಹೊಳೆ ಎಂಬುವರ ಮನೆ ಆವರಣದಲ್ಲಿ ಬೆಳೆದು ನಿಂತಿದ್ದ ಲಕ್ಷಾಂತರ ರೂ. ಮೌಲ್ಯದ ಶ್ರೀಗಂಧದ ಮರ(Sandalwood Theft)ಕ್ಕೆ ಖತರ್ನಾಕ್ ಖದೀಮರು ಕೊಡಲಿಪೆಟ್ಟು ಹಾಕಿದ್ದಾರೆ. ಕಡಿದ ಶ್ರೀಗಂಧದ ಮರವನ್ನು ಕಡಿದು ಕಳ್ಳರು ಸಾಗಿಸುತ್ತಿರುವ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾ(CCTV Footage)ದಲ್ಲಿ ಸೆರೆಯಾಗಿದೆ.
ಬುಡಸಮೇತ ಗಂಧದ ಮರವನ್ನು ಕಡಿದಿರುವ ಕಳ್ಳರು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ಘಟನೆ ಕುರಿತು ಹುಬ್ಬಳ್ಳಿ ಕಸಬಾ ಠಾಣೆ (Hubli Kasaba Police Station)ಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಈ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸುತ್ತಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.ಶ್ರೀಗಂಧದ ಮರ ಕಳ್ಳತನ(Sandalwood Trees Stolen)ಮಾಡಿರುವ ಕಳ್ಳರನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ಕೊಡಿಸಬೇಕೆಂದು ಮನೆ ಮಾಲೀಕ ಶಿವಶಂಕರ್ ಐಹೊಳೆ ಪೊಲೀಸರಿಗೆ ಮನವಿ ಮಾಡಿಕೊಂಡಿದ್ದಾರೆ. ಅನೇಕ ವರ್ಷಗಳಿಂದ ಮನೆ ಆವರಣದಲ್ಲಿ ಬೆಳೆಸಿದ್ದ ಗಂಧದ ಮರ ಕಳುವು ಆಗಿದ್ದಕ್ಕೆ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB