ತುಮಕೂರು: ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯಬ್ಬ ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದಲ್ಲಿ ನಡೆದಿದೆ.
ಸೈಯದ್ ಎಂಬ ಆರೋಪಿಯೆ ಗುಬ್ಬಿ ಪೊಲೀಸ್ ಠಾಣೆಯಿಂದ ಎಸ್ಕೆಪ್ ಆದವನಗಿದ್ದಾನೆ. ಸಿಆರ್ ನಂ. 13/2024 ರ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದರು.
ಕಳ್ಳತನ ಪ್ರಕರಣದಲ್ಲಿ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಗುಬ್ಬಿ ಠಾಣೆಗೆ ಕರೆತರಲಾಗಿತ್ತು. ಇಂದು ಬೆಳಗ್ಗೆ 4:30 ಕ್ಕೆ ಠಾಣೆಯಿಂದ ಪರಾರಿಯಾಗಿದ್ದಾನೆ.
ಆರೋಪಿ ಎಡಗೈ ಮೇಲೆ ಸಿರಿಗನ್ನಡಂ ಬಲಗೈ ಮೇಲೆ ಎಲ್ಲಾ ಧರ್ಮದ ಅಚ್ಚೆ ಇರೋದಾಗಿ ಮಾಹಿತಿ ಇದೆ. ಗದಗ ಜಿಲ್ಲೆಯ ಹುಲ್ಲೂರು ಗ್ರಾಮದ ವಾಸಿ ಆಗಿರೋ ಸೈಯದ್ , ಡ್ಯಾನ್ಸ್ ಕೋರಿಯಾಗ್ರಾಪರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದನು.
ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆ ಸಿಬ್ಬಂದಿ ಆರೋಪಿಯನ್ನು ಪುನಃ ವಶಕ್ಕೆ ತೆಗೆದುಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.