nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026
    Facebook Twitter Instagram
    ಟ್ರೆಂಡಿಂಗ್
    • ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ
    • ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು
    • ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ
    • ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ
    • ತಿಪಟೂರಿನ ಟೈಮ್ ಕಾಲೇಜಿಗೆ ನೂರಕ್ಕೆ ನೂರು ಫಲಿತಾಂಶ: ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿನಿ ರಶ್ಮಿಗೆ 1 ಲಕ್ಷ ರೂ. ಬಹುಮಾನ ಘೋಷಣೆ
    • ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಸಿಎಂ ಸಿದ್ದರಾಮಯ್ಯ
    • ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ
    • ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹುಟ್ಟುಹಬ್ಬಗಳನ್ನು ಸಾರ್ವಜನಿಕ ಸೇವೆಯನ್ನಾಗಿ ಆಚರಿಸಿದರೆ ಅರ್ಥ ಪೂರ್ಣ: ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ
    ಕೊರಟಗೆರೆ March 24, 2025

    ಹುಟ್ಟುಹಬ್ಬಗಳನ್ನು ಸಾರ್ವಜನಿಕ ಸೇವೆಯನ್ನಾಗಿ ಆಚರಿಸಿದರೆ ಅರ್ಥ ಪೂರ್ಣ: ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ

    By adminMarch 24, 2025No Comments2 Mins Read
    mahalingappa

    ಕೊರಟಗೆರೆ: ಹುಟ್ಟುಹಬ್ಬಗಳನ್ನು ಸಾರ್ವಜನಿಕ ಸೇವೆಯನ್ನಾಗಿ ಆಚರಿಸಿದರೆ ಅರ್ಥ ಪೂರ್ಣವಾಗಿರುತ್ತದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಹಾಲಿಂಗಪ್ಪ ತಿಳಿಸಿದರು.

    ಅವರು ತಮ್ಮ 56 ನೇ ಹುಟ್ಟು ಹಬ್ಬದ ಪ್ರಯುಕ್ತ ಕೊರಟಗೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಹಣ್ಣು, ಬ್ರೆಡ್, ಹಾಗೂ ಕೋಳಾಲ ಹೋಬಳಿಯ ಹೊಸಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ನೋಟ್ ಪುಸ್ತಕ ಹಾಗೂ ಪಠ್ಯದ ಸಲಕರಣೆಗಳನ್ನು ವಿತರಿಸಿ ಮಾತನಾಡಿ, ನನ್ನ ಹುಟ್ಟು ಹಬ್ಬವನ್ನು ನಮ್ಮ ಸ್ನೇಹಿತರ ಜೊತೆ ಗೂಡಿ ಸಾರ್ವಜನಿಕ ಸೇವೆಯನ್ನಾಗಿ ಮಾಡಿಕೊಂಡಿರುವುದು ಸಂತೋಷ ತಂದಿದೆ, ನಮ್ಮ ಕೊರಟಗೆರೆ ಪಟ್ಟಣದ ಬಸ್ಟಾಂಡ್ ಗೆಳೆಯರ ಬಳಗದ ಬೇಡಿಕೆಯಂತೆ ಸಾರ್ವಜನಿಕರಿಗೆ ಕುಡಿಯುವ ನೀರಿನ ಘಟಕವನ್ನು ನಮ್ಮ ನಾಯಕರಾದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರಿಂದ ಹಾಕಿಸಿ ಕೊಡಲಾಗುವುದು ಮುಂದಿನ ದಿನಗಳಲ್ಲೂ ಸಹ ಸಾರ್ವಜನಿಕ ಸೇವೆಗೆ ಬದ್ದನಾಗಿರುತ್ತೇನೆ ಎಂದರು.


    Provided by
    Provided by

    ಮಾಜಿ ಜಿಲ್ಲಾ ಪಂಚಾಯಿತಿ ಅದ್ಯಕ್ಷೆ ಪ್ರೇಮ ಮಹಾಲಿಂಗಪ್ಪ ಮಾತನಾಡಿ, ಹಲವು ವರ್ಷಗಳಿಂದ ನಮ್ಮ ಕುಟುಂಬದವರು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದೇವೆ. ಸರ್ಕಾರಿ ಶಾಲಾ ಮಕ್ಕಳಿಗೆ ಜನಪ್ರತಿನಿಧಿಗಳಾದ ನಾವುಗಳು ಈ ರೀತಿಯ ಕಾರಣಗಳನ್ನು ಇಟ್ಟುಕೊಂಡು ಸೇವೆ ಮಾಡಿದರೆ ಗ್ರಾಮೀಣ ಭಾಗದ ಮಕ್ಕಳಿಗೆ ನೆರವಾಗುತ್ತದೆ ಎಂದರು.

    ಕಾಂಗ್ರೆಸ್ ಪಕ್ಷದ ಮುಖಂಡ ಕಾರ್ ಮಹೇಶ್ ಮಾತನಾಡಿ, ಇಂದು ಮಹಾಲಿಂಗಪ್ಪ ಅಭಿಮಾನಿ ಬಳಗದಿಂದ ಅವರ ಹುಟ್ಟು ಹಬ್ಬದ ಪ್ರಯುಕ್ತ ಕೊರಟಗೆರೆ ಬಸ್ಟಾಂಡ್ ನಲ್ಲಿ ಬಡವರಿಗೆ ಸಹಿ ಹಂಚಿಸಲಾಗಿದ್ದು, ಬಿಸಿಲು ಹೆಚ್ಚಾದರಿಂದ ಮಜ್ಜಿಗೆಯನ್ನು ವಿತರಿಸಲಾಗಿದೆ, ಮಹಾಲಿಂಗಪ್ಪ ನವರು ಹಲವು ವರ್ಷಗಳಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಸೇವೆಯನ್ನು ಮಾಡಿಕೊಂಡು ಬರುತ್ತಿದ್ದಾರೆ ಅವರು ಮುಂದೆ ಡಾ.ಜಿ.ಪರಮೇಶ್ವರ ರವರ ಆಶೀರ್ವಾದದಿಂದ ಯಾವುದಾದರು ಕ್ಷೇತ್ರದಿಂದ ಶಾಸಕರಾಗಲಿ ಎನ್ನವುದು ನಮ್ಮಗಳ ಆಸೆ ಎಂದರು.

    ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಪುರುಷೋತ್ತಮ್ ನಾಯಕ್, ಕಸಬಾ ವಿ.ಎಸ್.ಎಸ್.ಎನ್ ಅಧ್ಯಕ್ಷ ಕೆ.ಎಸ್.ವಿನಯಕುಮಾರ್, ಟಿ.ಎ.ಪಿ.ಸಿ.ಎಂ.ಎಸ್ ಅದ್ಯಕ್ಷ ಜಿ.ಎಂ.ಶಿವಾನಂದ್, ಮುಖಂಡರಾದ ಯೋಗೀಶ್, ಕುದುರೆ ಸತ್ಯನಾರಾಯಣ್, ಸೈಯದ್ ಸೈಪುಲ್ಲಾ, ಸಿದ್ದಲಿಂಗಯ್ಯ, ನೇಗಲಾಲ ರಮೇಶ್, ಚಿಕ್ಕನಾರಾಯಣ್, ನಾಗೇಶ್, ಶಿವರಾಜ, ಅನಿಲ್, ಬಿದರೇಶ್ ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಮನೆ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಕಾರು, ಬೈಕ್ ಗಳು ಸುಟ್ಟು ಭಸ್ಮ

    April 12, 2026

    ಎನ್‌ ಎಸ್‌ ಎಸ್ ವಿದ್ಯಾರ್ಥಿಗಳು ನಾಯಕತ್ವ ಮನೋಭಾವ ಬೆಳೆಸಿಕೊಳ್ಳಿ: ಈರಪ್ಪ ನಾಯಕ

    April 12, 2026

    ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ

    April 6, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ನವದೆಹಲಿ: ಭಾರತದಲ್ಲಿ ಸಮಾನತೆಯನ್ನು ಹೋಗಲಾಡಿಸಿ, ಸಂವಿಧಾನವನ್ನು ನಾಶಪಡಿಸುವುದೇ ಆರ್‌ಎಸ್‌ಎಸ್ ಮತ್ತು ಬಿಜೆಪಿಯ ಮುಖ್ಯ ಉದ್ದೇಶವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್…

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ; ಸಿನಿಮೀಯ ಮಾದರಿಯಲ್ಲಿ ಕೊಲೆ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.