nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೇಂದ್ರ ಪುರಸ್ಕೃತ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳಲಿ: ಸಚಿವ ಪ್ರಲ್ಹಾದ ಜೋಶಿ
    ಜಿಲ್ಲಾ ಸುದ್ದಿ September 14, 2024

    ಕೇಂದ್ರ ಪುರಸ್ಕೃತ ಯೋಜನೆಗಳು ಸರಿಯಾಗಿ ಅನುಷ್ಠಾನಗೊಳ್ಳಲಿ: ಸಚಿವ ಪ್ರಲ್ಹಾದ ಜೋಶಿ

    By adminSeptember 14, 2024No Comments3 Mins Read
    prahlad joshi

    ಧಾರವಾಡ: ಕೇಂದ್ರ ಪುರಸ್ಕೃತ ಜನಪರ ಕಲ್ಯಾಣ ಯೋಜನೆಗಳು ರೈತರಿಗೆ ಜನ ಸಾಮಾನ್ಯರಿಗೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ತಲುಪಿಸಲಿ ಎಂದು ಕೇಂದ್ರ ಗ್ರಾಹಕರ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರು ಹಾಗೂ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಚಿವರಾದ ಪ್ರಲ್ಹಾದ ಜೋಶಿ ತಿಳಿಸಿದರು.

    ಧಾರವಾಡ ಜಿಲ್ಲಾ ಪಂಚಾಯತನಲ್ಲಿ ಇಂದು ಜರುಗಿದ ದಿಶಾ ಸಮಿತಿಯ ಮೊದಲನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಬೆಳೆ ಪರಿಹಾರ ನರೇಗಾ ವಸತಿ, ಸ್ವಚ್ಛ ಭಾರತ, ಶಿಕ್ಷಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಭೆಯಲ್ಲಿ ವಿವರವಾಗಿ ಚರ್ಚಿಸಿದರು. ಕೇಂದ್ರ ಪುರಸ್ಕೃತ ಯೋಜನೆಗಳು ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಬೇಕೆಂದರು.


    Provided by
    Provided by

    2023-24 ನೇ ಸಾಲಿನ ಹಿಂಗಾರು ಬೆಳೆ ಪರಿಹಾರ ದೊರೆಯದ ಕಾರಣ ಅನೇಕ ರೈತರು ಅಹವಾಲುಗಳನ್ನು ಸಲ್ಲಿಸುತ್ತಿದ್ದು ಈ ಬಗ್ಗೆ ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುವಂತೆ ಅವರು ತಿಳಿಸಿದರು.

    ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಈ ಕುರಿತು ಮಾತನಾಡಿ 2023-24 ರಲ್ಲಿ ಬರಗಾಲ ಘೋಷಿಸಲಾಗಿದ್ದು ಜಿಲ್ಲೆಯಲ್ಲಿ 2.11 ಲಕ್ಷ ಹೆಕ್ಟರ್ ಹಾನಿ ಅಂದಾಜಿಸಲಾಗಿದೆ. ಅಧಿಕಾರಿಗಳು ವೈಯಕ್ತಿಕವಾಗಿಯೂ ಸಮೀಕ್ಷೆ ಮಾಡಿದ್ದಾರೆ. ಈ ವರ್ಷ ಕೇಂದ್ರಿಕೃತ ಫ್ರುಟ್ಸ್ ತಂತ್ರಾಂಶದಲ್ಲಿ ರೈತರು ಕಡ್ಡಾಯವಾಗಿ ಐಡಿ ಹೊಂದಿರಬೇಕೆಂದರು. ಒಟ್ಟು 2.45 ಲಕ್ಷ ರೈತರು ಫ್ರುಟ್ಸ್ ಹೊಂದಿದ್ದಾರೆ. ಈ ತಂತ್ರಾಂಶದಲ್ಲಿ ಬೆಳೆ ಸಮೀಕ್ಷೆ ವಿವರ, ಭೂಮಿ ವಿವರ ದಾಖಲಾಗುತ್ತದೆ. 1.27 ಲಕ್ಷ ಹೆಕ್ಟೇರ್‍ಗೆ 1.11 ಲಕ್ಷ ರೈತರಿಗೆ 117 ಕೋಟಿ ರೂ.ಗಳನ್ನು ಹಂತದ ಪರಿಹಾರ ನೀಡಲಾಗಿದ್ದು ಈಗ 12 ನೇ ಹಂತದ ಬರಬೇಕಿದೆ ಎಂದರು. ಕೃಷಿ ಇಲಾಖೆ ಜಂಟಿ ನಿರ್ದೇಶಕರು ಹಾಗೂ ಉಪವಿಭಾಗಾಧಿಕಾರಿಗಳು, ಕಾಲ ಕಾಲಕ್ಕೆ ಉಸ್ತುವಾರಿ ಮಾಡುತ್ತಿದ್ದಾರೆ ಬೆಳೆ ಪರಿಹಾರ ಗೊಂದಲ ಪರಿಹರಿಸಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು ಈವೆರೆಗೆ 2 ಸಾವಿರಕ್ಕೂ ಹೆಚ್ಚು ಕರೆಗಳನ್ನು ಆಲಿಸಲಾಗಿದೆಯೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    ಮಹಾತ್ಮಾಗಾಂಧಿ ಉದ್ಯೋಗ ಖಾತರಿ ಯೋಜನೆಯು ಬಹು ಬೇಡಿಕೆಯಲ್ಲಿದ್ದು ಕ್ರಿಯಾ ಯೋಜನೆಗಳು ಪೂರ್ಣಗೊಳಿಸಿ ಮತ್ತೆ ಉದ್ಯೋಗದ ಹಾಗೂ ಕಾಮಗಾರಿ ಬೇಡಿಕೆ ಇದ್ದಲ್ಲಿ ಪೂರೈಸುವಂತೆ ಜಿಲ್ಲಾ ಪಂಚಾಯತ ಅಧಿಕಾರಿಗಳಿಗೆ ಸಚಿವರು ತಿಳಿಸಿದರು. ಉದ್ಯೋಗ ಖಾತರಿಗೆ ಅನುದಾನದ ಕೊರತೆಯಿಲ್ಲ. 60/40 ಕಾಮಗಾರಿ/ವಸ್ತು ಅನುಪಾತಕ್ಕನುಗುಣವಾಗಿ ಹೆಚ್ಚುವರಿ ಕ್ರಿಯಾಯೋಜನೆಗಳಿಗೆ ಮಂಜುರಾತಿ ನೀಡುವಂತೆ ಅವರು ತಿಳಿಸಿದರು. ಈವರೆಗೆ ಜಿಲ್ಲೆಯಲ್ಲಿ 1.70 ಲಕ್ಷ ಜಾಬ್‍ಕಾರ್ಡಗಳಿದ್ದು 3.76 ಲಕ್ಷ ಜನರಿಗೆ ಉದ್ಯೋಗ ನೀಡಲಾಗಿದೆ 25 ಲಕ್ಷ ಮಾನವ ದಿನಗಳ ಗುರಿ ಹಾಕಲಾಗಿದ್ದು ಈವರೆಗೆ 11.69 ಲಕ್ಷ ಮಾನವ ದಿನಗಳನ್ನು ಸೃಜಿಸಲಾಗಿದೆಯೆಂದರು ಉಪಕಾರ್ಯದರ್ಶಿ ಮೂಗನೂರಮಠ ತಿಳಿಸಿದರು.

    ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಜಿಲ್ಲೆಗೆ 6446 ಗುರಿ ಹೊಂದಲಾಗಿದೆ. ನರೇಗಾ ಅಡಿ ಹೆಚ್ಚು ಉದ್ಯೋಗಕ್ಕೆ ಹಾಜರಾದ ಫಲಾನುಭವಿಗಳಿಗೆ ತಂತ್ರಾಂಶದಲ್ಲಿ ಆದ್ಯತೆ ನೀಡಿದೆ ಎಂದು ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸಭೆಗೆ ತಿಳಿಸಿದರು. ವಸತಿ ಯೋಜನೆಯಡಿ ಕೇಂದ್ರ ಸರಕಾರವು ಪ್ರತಿ ಮನೆಗೆ 1.30 ಲಕ್ಷ ರೂ ನೀಡುತ್ತಿದ್ದು ಅನುದಾನವನ್ನು ಹೆಚ್ಚಿಸುವಂತೆ ಶಾಸಕ ಎನ್.ಎಚ್.ಕೋನರೆಡ್ಡಿ ಸಚಿವರಲ್ಲಿ ಮನವಿ ಮಾಡಿದರು. ಕುಂದಗೋಳದ ಮುಳ್ಳೊಳ್ಳಿ ಗ್ರಾಮ ಸ್ಥಳಾಂತರ ಮೂಲಭೂತ ಸೌಕರ್ಯ ಹಕ್ಕು ಪತ್ರ ವಿತರಣೆ ಕುರಿತು ಗಮನ ಹರಿಸುವಂತೆ ಸಚಿವರು ತಹಶೀಲ್ದಾರರಿಗೆ ಸೂಚಿಸಿದರು.

    ಸ್ವಚ್ಛ ಭಾರತ ಯೋಜನೆಯಡಿ ಅನುದಾನದ ಕೊರತೆ ಇಲ್ಲ. ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಅಧಿಕಾರಿಗಳು ಒತ್ತು ನೀಡಲಿ ಎಂದು ಸಚಿವರು ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ 3003 ವೈಯಕ್ತಿ ಶೌಚಾಲಯಗಳನ್ನು ಕಟ್ಟಲಾಗಿದೆ. ಬೂದು ನೀರು ಕಾರ್ಯಕ್ರಮದಡಿ 268 ಕಾಮಗಾರಿ ಪೂರ್ಣಗೊಳಿಸಿದೆ. 115 ಘನ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸ್ಥಾಪಿಸಲಾಗಿದೆಯೆಂದು ಅಧಿಕಾರಿಗಳು ಸಭೆಗೆ ತಿಳಿಸಿದರು. ಘನತ್ಯಾಜ್ಯ ನಿರ್ವಹಣಾ ಘಟಕಗಳನ್ನು ಸರಿಯಾಗಿ ನಿರ್ವಹಣೆ ಮಾಡದ ಕುರಿತು ಪತ್ರಿಕೆಯೊಂದರ ವರದಿಯನ್ನು ಅಧಿಕಾರಿಗಳ ಗಮನಕ್ಕೆ ಓದಿದ ಸಚಿವರು ಈ ಘಟಕಗಳನ್ನು ಸರಿಯಾಗಿ ನಿರ್ವಹಿಸುವಂತೆ ಸೂಚಿಸಿದರು.

    ಕೇಂದ್ರವು ಮೂಲಭೂತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಶಾಲಾ ಕಟ್ಟಡ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡುತ್ತಿದೆ. ಕಂಪನಿ ಸಾಮಾಜಿಕ ಜವಾಬ್ದಾರಿ ಸಿಎಸ್‍ಆರ್ ಅನುದಾನದಡಿ ಜಿಲ್ಲೆಗೆ 2022-23 ಸಾಲಿನಲ್ಲಿ 515 ಕೊಠಡಿಗಳನ್ನು ಮಂಜೂರು ಮಾಡಿದ್ದು ಸಂಬಂಧಿಸಿದ ಏಜೆನ್ಸಿಗಳು ವೇಗವಾಗಿ ಪಾರದರ್ಶಕವಾಗಿ ಪೂರ್ಣಗೊಳಿಸುವಂತೆ ಸಚಿವರು ಸೂಚಿಸಿದರು. ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿ ಶಾಲೆ ಸಮಗ್ರ ಅಭಿವೃದ್ಧಿ 5 ಕಟ್ಟಡಗಳನ್ನು ಮಂಜೂರು ಮಾಡಿದ್ದು, ಡಿಡಿಪಿಐ ಹಾಗೂ ಗ್ರಾಮೀಣ ಅಭಿವೃದ್ಧಿ ಇಂಜಿನೀಯರ್ ಶೀಘ್ರವೇ ಪೂರ್ಣಗೊಳಿಸಲು ಸೂಚಿಸಿದರು.

    ಸಭೆಯಲ್ಲಿ ಶಾಸಕರಾದ ಎಂ.ಆರ್.ಪಾಟೀಲ, ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ, ಮಹಾಪೌರರಾದ ರಾಮಪ್ಪ ಬಡಿಗೇರ, ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ಕಬ್ಬಿಗೆ ಬೆಲೆ ನಿಗದಿ ವಿಚಾರ: ಹುಮನಾಬಾದ್‌ ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

    November 13, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.