nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026
    Facebook Twitter Instagram
    ಟ್ರೆಂಡಿಂಗ್
    • ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ
    • LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!
    • ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ
    • ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ
    • ಹಂಪಲಾಪುರ: ಭೂಮಿ ಹಕ್ಕಿಗಾಗಿ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ
    • ಗುಬ್ಬಿ: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ಬೆಸ್ಕಾಂ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ  ಸಿ.ಕೆ.ಪುರ ಪಿ ಎಚ್ ಸಿ ಗೆ ಭೇಟಿ, ವೈದ್ಯಾಧಿಕಾರಿಗಳಿಗೆ ತರಾಟೆ
    ಪಾವಗಡ August 14, 2024

    ಪಾವಗಡ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ  ಸಿ.ಕೆ.ಪುರ ಪಿ ಎಚ್ ಸಿ ಗೆ ಭೇಟಿ, ವೈದ್ಯಾಧಿಕಾರಿಗಳಿಗೆ ತರಾಟೆ

    By adminAugust 14, 2024No Comments2 Mins Read
    nagalakshmi

    ಪಾವಗಡ: ಪಾವಗಡ ತಾಲೂಕಿನ ಸಿ.ಕೆ.ಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಆರೋಗ್ಯ ತಪಾಸಣಾ ಅಭಿಯಾನ ಯೋಜನೆ ಮತ್ತು ಗರ್ಭಿಣಿ ಮಹಿಳೆಯ ಸೀಮಂತ  ಕಾರ್ಯಕ್ರಮದಲ್ಲಿ ಭಾಗವಹಿಸುವ ಮುನ್ನ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದರು.

    ಇದೇ ವೇಲೆ ಆಸ್ಪತ್ರೆಯಲ್ಲಿ ಇರುವಂತಹ ವ್ಯವಸ್ಥೆಯನ್ನು ಕಂಡು ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್ ಗೆ ತರಾಟೆಗೆ ತೆಗೆದುಕೊಂಡರು. ಆಸ್ಪತ್ರೆಗಳಲ್ಲಿ ಇಷ್ಟು ಉತ್ತಮ ಸೌಲಭ್ಯಗಳಿದ್ದರೂ ಜನರಿಗೆ ಸೇವೆ ಮಾಡುವುದಕ್ಕೆ ಏನಾಗಿದೆ ಎಂದು ಪ್ರಶ್ನಿಸಿದರು. ಅದೇ ರೀತಿ ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೆ ಜನರು ಸಮಸ್ಯೆಯನ್ನು ಅನುಭವಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅವರು ಶೀಘ್ರವಾಗಿ ಸಮಸ್ಯೆಗಳನ್ನು ಬಗೆಹರಿಸಿ ಮಾಹಿತಿ ನೀಡುವಂತೆ ಸೂಚಿಸಿದರು


    Provided by
    Provided by

    ಬಳಕೆ ಇಲ್ಲದ ಆಸ್ಪತ್ರೆಯ ಶೌಚಾಲಯ:

    ಸಿ.ಕೆ.ಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಶೌಚಾಲಯವನ್ನು ಗಮನಿಸಿದ ನಾಗಲಕ್ಷ್ಮೀ ಅವರು, ದಂಗಾಗಿದ್ದಾರೆ.   ಆಸ್ಪತ್ರೆ ಪ್ರಾರಂಭವಾದಾಗಿಂದ ಇಲ್ಲಿಯವರೆಗೂ ಆಸ್ಪತ್ರೆಯ ಶೌಚಾಲಯ ಬಳಸಿಯೇ ಇಲ್ಲ. ಈ ಬಗ್ಗೆ ಎಚ್ಚರಿಕೆ ನೀಡಿದ ಅವರು,  ಇದೇ ಹಾದಿಯಲ್ಲಿ ಮುಂದುವರಿಸಿದರೆ ಎಲ್ಲಾ ಅಧಿಕಾರಿಗಳನ್ನು ಅಮಾನತುಗೊಳಿಸಲು ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರಲ್ಲದೇ, ಸ್ಥಳದಲ್ಲಿದ್ದ ತಹಶೀಲ್ದಾರ್ ವರದರಾಜು ಹಾಗೂ ಇ.ಓ. ಜಾನಕಿರಾಮ್ ಅವರನ್ನು ತಾವು ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವುದಿಲ್ಲವೇ ಎಂದು  ತರಾಟೆಗೆತ್ತಿಕೊಂಡರು.

    ಇತ್ತೀಚಿಗೆ ಇಲ್ಲಿನ ಸರ್ಕಾರಿ ಶಾಲೆಯ ಮಗು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರೆ, ಸರಿಯಾಗಿ ಚಿಕಿತ್ಸೆ ನೀಡದೆ ಇರುವುದರಿಂದ ಮಗುವಿಗೆ ಗಾಯ ತೀವ್ರವಾಗಿರುವುದನ್ನು ಕಂಡು, ಅಲ್ಲಿಯೇ ಇದ್ದ ಆಸ್ಪತ್ರೆಯ ಸಿಬ್ಬಂದಿ ನಾಗರಾಜುನ ಮೇಲೆ ಸಿಡಿಮಿಡಿಗೊಂಡು ಮಗುವಿಗೆ ಉತ್ತಮ ಚಿಕಿತ್ಸೆ ಕೊಟ್ಟು ವಾಸಿಯಾದ ಬಳಿಕ ಫೋಟೋ ಕಳಿಸಿ ಅಂದರು.

    ನಂತರ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿ ನಡೆದ ಮಹಿಳೆಯರನ್ನ ಉದ್ದೇಶಿಸಿ ನಾಗಲಕ್ಷ್ಮಿ ಚೌದರಿ ಅವರು ಮಾತನಾಡಿದರು

    ನಂತರ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಅವರು ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸೌಲಭ್ಯದ ಇಲ್ಲದೆ ಇರುವುದನ್ನು ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಆಸ್ಪತ್ರೆಗೆ ಕನಿಷ್ಠ ಕುಡಿಯುವ ನೀರಿನ ಸೌಲಭ್ಯವನ್ನು ಮಾಡದೇ ಇದ್ದರೆ ತಾವೆಲ್ಲ ಇರುವುದು ಏನಕ್ಕೆ ಎಂದು ಪ್ರಶ್ನಿಸಿದರು.

    ಜೊತೆಗೆ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದು ಸಾರ್ವಜನಿಕರಿಂದ ಮಾಹಿತಿ ಪಡೆದುಕೊಂಡ ಅವರು ಈ ಬಗ್ಗೆ ಸ್ಥಳದಲ್ಲಿಯೇ ಜಿಲ್ಲಾ ವೈದ್ಯಾಧಿಕಾರಿಗೆ ಕರೆ ಮಾಡಿ ಮಾಹಿತಿಯನ್ನು ಪಡೆದರು, ನಂತರ ಆಸ್ಪತ್ರೆಯ ಪ್ರಸವ ನಂತರದ ಕೊಠಡಿಗೆ ಭೇಟಿ ನೀಡಿದ ಅವರು ಬಾಣಂತಿಯರ ಆರೋಗ್ಯವನ್ನು ವಿಚಾರಿಸಿದರು.

    ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸದ್ಯ ಪಾವಗಡ ತಾಲೂಕಿನ ಅಧಿಕಾರಿಗಳು ಬೇಜವಾಬ್ದಾರಿತನದಿಂದ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ. ಬೃಹತಾದ ಆಸ್ಪತ್ರೆಯಲ್ಲಿ ಕನಿಷ್ಠ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎನ್ನುವುದಾದರೆ ಇವರು ಆಸ್ಪತ್ರೆನ ಎಷ್ಟರಮಟ್ಟಿಗೆ ನಿಭಾಯಿಸುತ್ತಿದ್ದಾರೆ ಎನ್ನುವುದು ಇಲ್ಲಿಯೇ ಕಂಡುಬರುತ್ತದೆ, ವೈದ್ಯರು ಕೊರತೆ ಇರುವುದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಿ ಸಮಸ್ಯೆಗಳನ್ನ ಬಗೆಹರಿಸಲು ಮುಂದಾಗುತ್ತೇನೆ ಎಂದರು.

    ನಂತರ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಭೇಟಿ ನೀಡಿದ ಅವರು, ವಿದ್ಯಾರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಹೆಣ್ಣು ಮಕ್ಕಳು ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು, ತಪ್ಪನ್ನು ಪ್ರಶ್ನಿಸುವಂತಹ ಧೈರ್ಯ ತಮ್ಮಲ್ಲಿ ಬರಬೇಕು ಮತ್ತು ಸಮಾಜದಲ್ಲಿ ಎದುರಾಗುವಂತಹ ದೌರ್ಜನ್ಯಗಳು ಮತ್ತು ಶೋಷಣೆಗಳಿಗೆ ತಾವು ತಲೆಬಾಗದೆ ಧೈರ್ಯದಿಂದ ಹೋರಾಟ ಮಾಡುವಂತಹ ಮನಸ್ಥಿತಿ ಬಳಸಿಕೊಳ್ಳಬೇಕು, ಇತ್ತೀಚಿನ ದಿನಗಳಲ್ಲಿ ಬೆಳೆಯುತ್ತಿರುವಂತಹ ಮಾದಕ ವ್ಯಾಸಂಗಗಳಾಗಿ ಯಾರು ದಾಸರಾಗದಂತೆ ತಮ್ಮ ಮುಂದಿನ ಭವಿಷ್ಯವನ್ನು ಉತ್ತಮಗೊಳಿಸಿಕೊಳ್ಳುವಂತೆ ಸಲಹೆ ಸೂಚನೆಗಳನ್ನು ನೀಡಿದರು

    ಈ ಸಂದರ್ಭದಲ್ಲಿ ಡಿಎನ್ ವರದರಾಜು, ಇ.ಓ.ಜಾನಕಿರಾಮ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರ, ಸಿಪಿಐ ಸುರೇಶ್ ಸಿಡಿಪಿಓ ಸುನಿತಾ, ತಾಲೂಕು ವೈದ್ಯಾಧಿಕಾರಿ ಡಾ.ಕಿರಣ್,  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಲ್ಲಿಕಾರ್ಜುನ್, ಪಶುಪಾಲನಾ ಇಲಾಖೆಯ ಹೊರಕೆರಪ್ಪ, ತೋಟಗಾರಿಕಾ ಇಲಾಖೆಯ ವಿಶ್ವನಾಥ್ ಗೌಡ, ಬೆಸ್ಕಾಂ ಎಇಇ ಕೃಷ್ಣಮೂರ್ತಿ, ಬಿಇಓ ಇಂದ್ರನಮ್ಮ, ಆರೋಗ್ಯ ಅಧಿಕಾರಿ ಶಂಸುದ್ದೀನ್, ಆಡಳಿತ ವೈದ್ಯಧಿಕಾರಿ ಎಎಸ್ ಎಲ್ ಬಾಬು, ಬಿಸಿಎಂ ಅಧಿಕಾರಿ ಗೋಪಾಲಪ್ಪ, ಯಮುನಾ, ಅಧಿಕಾರಿಗಳು ಇನೊಂದು ಪರಿವೀಕ್ಷಣೆಯಲ್ಲಿ ಭಾಗವಹಿಸಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ

    March 6, 2026

    ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು

    February 8, 2026

    ಶಿಕ್ಷಣ ವ್ಯವಸ್ಥೆಯ ನಿರ್ಲಕ್ಷ್ಯ  ದೇಶ—ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ: ಬರಗೂರು ರಾಮಚಂದ್ರಪ್ಪ

    February 5, 2026

    Comments are closed.

    Our Picks

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದಲ್ಲಿ ಎಲ್‌ ಪಿಜಿ ಸಿಲಿಂಡರ್ ಕೊರತೆ: ತುಟಿಬಿಚ್ಚದ ಬಿಜೆಪಿ ಸಂಸದರು: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 10, 2026

    ಬೆಂಗಳೂರು: ದೇಶದಲ್ಲಿ ಉಂಟಾಗಿರುವ ಅಡುಗೆ ಅನಿಲ (LPG) ಸಿಲಿಂಡರ್‌ಗಳ ತೀವ್ರ ಕೊರತೆ ಮತ್ತು ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರ…

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ರಾಜ್ಯದ 183 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ: ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ

    March 10, 2026

    ನೇಮಕಾತಿಯಲ್ಲಿ ಶೇ.7ರಷ್ಟು ಮೀಸಲಾತಿಗೆ ವಾಲ್ಮೀಕಿ ಸಮುದಾಯ ಒತ್ತಾಯ: ಮಾರ್ಚ್ 11ರಂದು ಪ್ರತಿಭಟನೆ

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.