nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆಗೆ ವೈದ್ಯಾಧಿಕಾರಿ ಉತ್ತರಿಸಬೇಕಾಗಿದೆ: ಕುಣಿಕೇನಹಳ್ಳಿ ಜಗದೀಶ್ ಆಗ್ರಹ
    ತುರುವೇಕೆರೆ June 16, 2023

    ತುರುವೇಕೆರೆ ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಅವ್ಯವಸ್ಥೆಗೆ ವೈದ್ಯಾಧಿಕಾರಿ ಉತ್ತರಿಸಬೇಕಾಗಿದೆ: ಕುಣಿಕೇನಹಳ್ಳಿ ಜಗದೀಶ್ ಆಗ್ರಹ

    By adminJune 16, 2023No Comments2 Mins Read
    chalavadi

    ತುರುವೇಕೆರೆ: ತಾಲೂಕು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕೆಲವು ಬೆಳವಣಿಗೆಗಳಿಂದ ಸಾರ್ವಜನಿಕರಿಗೆ ಹಾಗೂ ರೋಗಿಗಳಿಗೆ ತುಂಬಾ ತೊಂದರೆ ಆಗುತ್ತಿದ್ದು , ಇದಕ್ಕೆ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಉತ್ತರಿಸಬೇಕಾಗಿದೆ ಎಂದು ತಾಲ್ಲೂಕು ಛಲವಾದಿ ಮಹಾಸಭಾ ಮುಖಂಡ ಕುಣಿಕೇನಹಳ್ಳಿ ಜಗದೀಶ್ ಆಗ್ರಹಿಸಿದರು.

    ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,   ಸರ್ಕಾರಿ  ಸಾರ್ವಜನಿಕ  ಆಸ್ಪತ್ರೆಯಲ್ಲಿನ  ಅವ್ಯವಸ್ಥೆ ಮತ್ತು ನಿರ್ಲಕ್ಷ  ಹಾಗೂ ಅವ್ಯವಹಾರಗಳ ಬಗ್ಗೆ   ಬೆಳಕು ಚಲ್ಲುವ ಪ್ರಕರಣಗಳು ನಡೆಯುತ್ತಿದ್ದು, ಸರ್ಕಾರಿ ಆಸ್ಪತ್ರೆ ಇರುವುದು ಬಡವರಿಗೆ ಅನುಕೂಲವಾಗಲೆಂದು, ಆದರೆ ಇಲ್ಲಿ ನಿರ್ಲಕ್ಷ್ಯ ಮತ್ತು ಅವ್ಯವಹಾರ ಬಗ್ಗೆ  ದಲಿತರು ದ್ವನಿ ಎತ್ತಲೇ ಬೇಕಾಗಿದೆ ಎಂದು ಕರೆ ನೀಡಿದರು.


    Provided by
    Provided by

    ಕಾರಣ ಆಸ್ಪತ್ರೆಯಲ್ಲಿ ವೈದ್ಯರಾಗಿರುವ  ಡಾ.ಮುರುಳಿಯವರ ಮೇಲಿನ ಆರೋಪದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೇಲಿನದು ಆರೋಪವಾ ಅಥವಾ ಷಡ್ಯಂತ್ರವ ಎನ್ನುವ ಬಗ್ಗೆ ನಾವು ವಿಚಾರ ಮಾಡಬೇಕಾಗಿದೆ. ಕೇವಲ ಇವರನ್ನು ಈ ವಿಚಾರದಲ್ಲಿ ಸಿಕ್ಕಿಸಿ ಅವರನ್ನು ತೇಜೋವಧೆ ಮಾಡಬೇಕೆನ್ನುವುದು, ಷಡ್ಯಂತ್ರ ಎನ್ನುವುದು ನಮಗೆ ಅರ್ಥವಾಗುತ್ತಿಲ್ಲ , ಇಲ್ಲಿ ಧ್ವನಿ ಎತ್ತುತ್ತಿರುವುದು ಕೇವಲ ಛಲವಾದಿ ಮಹಾಸಭಾ ಮಾತ್ರ. ನಮ್ಮ ವಿನಂತಿ ಏನೆಂದರೆ ಈ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ವೈದ್ಯರುಗಳು ಖಾಸಗಿ ಆಸ್ಪತ್ರೆಯನ್ನು ನಡೆಸುತಿದ್ದು, ಎಲ್ಲ ವೈದ್ಯರುಗಳು ಅಕ್ರಮ ನಡೆಸುತ್ತಿದ್ದಾರೆ. ಇದಕ್ಕೆ ನಮ್ಮ ಬಳಿ ಆಧಾರಗಳಿವೆ ಎಂದು  ಆರೋಪಿಸಿದರು.

    ಇನ್ನು ಆಸ್ಪತ್ರೆಯಲ್ಲಿನ ಹಗರಣಗಳನ್ನು ಪ್ರಸ್ತಾಪಿಸಿ,  5 ರೂ. ನೋಂದಣಿ ಶುಲ್ಕವನ್ನು ತೆಗೆದುಕೊಳ್ಳುತ್ತಾರೆ. ಆದರೆ ಅದರ ಖರ್ಚು ವೆಚ್ಚವನ್ನು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ಬಹಿರಂಗಪಡಿಸುತ್ತಿಲ್ಲ. ಬಾಣಂತಿಯರಿಗೆ ಉಚಿತ  ಊಟವನ್ನು ಸರ್ಕಾರ ಕೊಡುತ್ತಿದೆ. ಆದರೆ, ಇಲ್ಲಿ ಕೊಡುತ್ತಿಲ್ಲ. ಇದರ  ಬಗ್ಗೆ ಸ್ಪಷ್ಟನೆಯನ್ನು ಅವರು ಕೊಡಬೇಕಾಗುತ್ತದೆ ಹಾಗೂ ಹೊಣೆಯನ್ನು ಹೊರಬೇಕಾಗುತ್ತದೆ. ಇದಕ್ಕೆ ಸರ್ಕಾರದಿಂದ ಅನುದಾನ ಬರುತ್ತಿದ್ದು, ಅದೂ ಕೂಡಾ ಹಗರಣವಾಗಿದೆ ಮತ್ತೆ ರಕ್ತ ಪರೀಕ್ಷೆಗಳನ್ನು  ಆಸ್ಪತ್ರೆಯಲ್ಲಿ ಸೌಲಭ್ಯವಿದ್ದರೂ ಸಹ ಸರ್ಕಾರ ಲಕ್ಷಾಂತರ ರೂ.ಗಳ ಯಂತ್ರೋಪಕರಣಗಳನ್ನು ಒದಗಿಸಿದ್ದರೂ ಸಹ  ಖಾಸಗಿಯವರ ಜೊತೆ ಕೈಜೋಡಿಸಿ  ಪರೀಕ್ಷೆಗಳನ್ನು ಹೊರಗೆ ಮಾಡಿಸಲು ಹೇಳುತ್ತಿರುವುದು ಇವರ ಅಕ್ರಮಗಳಿಗೆ ಸಾಕ್ಷಿಯಾಗಿದೆ ಎಂದು ಆರೋಪಿಸಿದರು.

    ಪರೀಕ್ಷೆ ಮಾಡಲು ಪ್ರಯೋಗ ಶಾಲೆಗೆ ಕಚ್ಚಾ ವಸ್ತುಗಳನ್ನು ಖರೀದಿ ಮಾಡದೆ ಅಕ್ರಮವೆಸಗಿದ್ದಾರೆ. ಇದರಲ್ಲಿ ಆಡಳಿತ ವೈದ್ಯಾಧಿಕಾರಿಗಳ ನೇರ ಕೈವಾಡವಿದೆ. ಅಲ್ಲದೇ ಆಕ್ಸಿಜನ್ ಪ್ಲಾಂಟ್ ಸೂಕ್ತ  ನಿರ್ವಹಣೆ ಇಲ್ಲದೆ ಹಾಳಾಗಿದ್ದು, ಇದರ ಹೊಣೆಯನ್ನು ಆಡಳಿತ ವೈದ್ಯಾಧಿಕಾರಿಗಳೆ ಹೊರಬೇಕಾಗಿದೆ ಎಂದು ಹೇಳಿ, ಇವೆಲ್ಲ ಅಕ್ರಮಗಳ ರೂವಾರಿ ಇವರೇ ಆಗಿರುವುದರಿಂದ ಇವರನ್ನು ಲೋಕಾಯುಕ್ತ ಅಥವಾ ಸಿಬಿಐನಿಂದ  ಸೂಕ್ತ ತನಿಖೆಮಾಡಬೇಕೆಂದು  ಛಲವಾದಿ ಮಹಾಸಭಾ ಆಗ್ರಹಪಡಿಸುತ್ತದೆ ಎಂದರು.

    ದಲಿತ ವೈದ್ಯರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ನಿಲ್ಲಿಸಬೇಕು, ಇಲ್ಲವಾದಲ್ಲಿ ಉಗ್ರ ಪ್ರತಿಭಟನೆಯನ್ನು ನಡೆಸಲಾಗುವುದು ಎಂದ ಅವರು, ಇಂತಹ ಘಟನೆಗಳನ್ನು ನೋಡಿದಾಗ ಆಡಳಿತ ವೈದ್ಯಾಧಿಕಾರಿಗೆ ಆಸ್ಪತ್ರೆಯ ಮೇಲೆ ಹಿಡಿತ ವಿಲ್ಲದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆಸ್ಪತ್ರೆಯಲ್ಲಿ ವೈದ್ಯರುಗಳ ಕೊರತೆ ಎದ್ದು ಕಾಣುತಿದ್ದು, ಮುಖ್ಯವಾಗಿ  ಕಣ್ಣಿನ ವೈದ್ಯರು ಲಭ್ಯವಿಲ್ಲ ಇವರು ಕೆಲಸಕ್ಕೆ ಹಾಜರಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಶಂಕಿಸಿದರು.

    ಡಾ.ಮುರುಳಿಯವರನ್ನು ಇಲಾಖಾ ತನಿಖೆಯನ್ನು ನಡೆಸಿ ಅವರನ್ನು ತಪ್ಪಿತಸ್ಥರನ್ನಾಗಿಸುವುದು ಇವರ ಹುನ್ನಾರವಾಗಿದೆ, ಇದನ್ನು ತಾಲ್ಲೂಕು ಛಲವಾದಿ ಮಹಾಸಭಾ ತೀವ್ರವಾಗಿ ಖಂಡಿಸುತ್ತದೆ ಹಾಗೂ ಅವರಿಗೆ ಅನ್ಯಾಯವಾದಲ್ಲಿ ತೀವ್ರವಾದ ಹೋರಾಟಕ್ಕೂ ಸಿದ್ಧವಿದೆ ಎಂದರು.

    ಈ ಸಂದರ್ಭದಲ್ಲಿ  ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ  ಡೊಂಕಿಹಳ್ಳಿ ರಾಮಣ್ಣ, ಪುರ ರಾಮಚಂದ್ರ , ಹೆಗ್ಗೆರೆ ನರಸಿಂಹಯ್ಯ,ಮಹದೇವಣ್ಣ. ಲೋಕೇಶ್ ಕುಣಿಕೇನಹಳ್ಳಿ. ಶ್ರೀನಿವಾಸ್ ,ಸುರೇಶ ಕುಣಿಕೇನಹಳ್ಳಿ . ಕೃಷ್ಣಮೂರ್ತಿ. ಪುಟ್ಟರಾಜು, ಪ್ರಸನ್ನ ಕಲ್ಲಬೊರನಹಳ್ಳಿ ತಿಮ್ಮಣ್ಣ ,ಬಾಳೆಕಾಯಿ ಶೇಕರ್, ಶ್ರೀನಿವಾಸ್ ಲೋಕೇಶ್, ಕುಣಕೇನಹಳ್ಳಿ ಲೋಕೇಶ್ ಮತ್ತಿತರರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h

    ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಏತ ನೀರಾವರಿ ಯೋಜನೆಗೆ ಹೆಚ್ಚುವರಿ ಅನುದಾನ ಮಂಜೂರು ಮಾಡಿ: ಶಾಸಕ ಎಂ.ಟಿ.ಕೃಷ್ಣಪ್ಪ ಒತ್ತಾಯ

    November 20, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.