ಹಾವೊಂದಕ್ಕೆ ಆಪರೇಷನ್ ಮಾಡಿ ಪ್ರಾಣ ಉಳಿಸಿರುವ ವಿಶೇಷ ಘಟನೆ ನಗರದ ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ನಡೆದಿದ್ದು, ಮೂರು ದಿನದ ಆರೈಕೆ ನಂತರ ನಾಗಪ್ಪನನ್ನು ಕಾಡಿಗೆ ಬಿಟ್ಟಿದ್ದಾರೆ.ಹೌದು., ಚಾಮರಾಜನಗರದ ಸೋಮವಾರಪೇಟೆಯಲ್ಲಿ 4 ದಿನಗಳ ಹಿಂದೆ ಜಮೀನೊಂದರಲ್ಲಿ ಉಳುಮೆ ಮಾಡುವಾಗ ಸಿಲುಕಿ ಗಾಯಗೊಂಡಿದ್ದ ನಾಗರಹಾವೊಂದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಪಶು ಆಸ್ಪತ್ರೆಯಲ್ಲಿ ಡಾ.ಮೂರ್ತಿ ಎಂಬವರಿಂದ ಚಿಕಿತ್ಸೆ ಕೊಡಿಸಲಾಗಿದೆ.
ಹಾವಿನ ದೇಹದ ಎರಡು ಕಡೆ ತುಂಡಾಗಿದ್ದನ್ನು ಹೊಲಿದು ಸೇರಿಸಲಾಗಿದ್ದು ಜೊತೆಗೆ ಮೂಳೆ ಮುರಿತವನ್ನು ಕಿರು ಶಸ್ತ್ರಚಿಕಿತ್ಸೆ ಮೂಲಕ ಸರಿಪಡಿಸಲಾಗಿದೆ. ಮೂರು ದಿನ ಸ್ನೇಕ್ ಅಶೋಕ್ ಆರೈಕೆಯಲ್ಲೇ ಇದ್ದ ನಾಗರಹಾವನ್ನು ಇಂದು ನಗರದ ಕರಿವರದರಾಜಸ್ವಾಮಿ ಬೆಟ್ಟಕ್ಕೆ ಬಿಟ್ಟು ಬರಲಾಗಿದೆ ಎಂದು ಸ್ನೇಕ್ ಅಶೋಕ್ ಮಾಹಿತಿ ಕೊಟ್ಟಿದ್ದಾರೆ. ಇನ್ನು, ಸ್ನೇಕ್ ಅಶೋಕ್ ಹಾವು ಸಂರಕ್ಷಣೆಯಲ್ಲಿ ತೊಡಗಿಸಿಕೊಂಡಿದ್ದು ಇಲ್ಲಿಯವರೆಗೆ 17-18 ಸಾವಿರದಷ್ಟು ಹಾವುಗಳನ್ನು ಹಿಡಿದು ಕಾಡಿಗೆ ಬಿಟ್ಟು ಬಂದಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy