ತುಮಕೂರು: ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಮೃತಪಟ್ಟ ಶಾಲಾ ಬಾಲಕಿಯ ಅಂಗಾಂಗವನ್ನು ಪೋಷಕರು ದಾನ ಮಾಡಿರುವ ಮಾನವೀಯ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ಮಗಳ ಸಾವಿನ ನೋವಿನಲ್ಲೂ ಸಾರ್ಥಕತೆ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತುಮಕೂರು ಜಿಲ್ಲೆ ತಿಪಟೂರು ನಗರದ ಶ್ರೀ ವಿವೇಕಾನಂದ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಓದುತ್ತಿದ್ದ ಚಂದನ, ಜು.23ರಂದು ಶಾಲೆ ಮುಗಿಸಿ ವಾಪಸ್ ಮನೆಗೆ ಬರುವಾಗ ಅಪಘಾತ ಸಂಭವಿಸಿತ್ತು. ಲಾರಿ ಡಿಕ್ಕಿ ಹೊಡೆದ ನಂತರ ಚಂದನ ತೆಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು.
ಅಪಘಾತದ ಬಳಿಕ ಹಾಸನ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದಳು. ನಂತರ ಚಂದನಳ ಅಂಗಾಂಗ ದಾನ ಮಾಡಲು ಒಪ್ಪಿದ ಪೋಷಕರ ನಿರ್ಧಾರಕ್ಕೆ ಆಸ್ಪತ್ರೆ ಸಿಬ್ಬಂದಿ ಗೌರವ ಸಲ್ಲಿಸಿದರು.
ಚಂದನಳ ಅಂಗಾಂಗಗಳನ್ನು ಮೈಸೂರು ಹಾಗೂ ಬೆಂಗಳೂರಿನ 6 ಮಕ್ಕಳಿಗೆ ಜೋಡಣೆ ಮಾಡಲಾಗಿದ್ದು, 6 ಜೀವಗಳಿಗೆ ಚಂದನ ಬೆಳಕಾಗಿದ್ದಾಳೆ. ಇಂದು ಸಂಜೆ ಚಂದನಳ ಅಂತ್ಯಸಂಸ್ಕಾರ ನೆರವೇರಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA