ತುಮಕೂರು: ದಸರಾ ಉತ್ಸವ ಪ್ರಯುಕ್ತ ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಚಾಮುಂಡೇಶ್ವರಿ ದೇವಿಗೆ ಇಂದು ಚಂದ್ರಘಂಟಾ(ಮೀನಾಕ್ಷಿ) ಅಲಂಕಾರ ಮಾಡಲಾಗುವುದು ಎಂದು ದಸರಾ ಉತ್ಸವ ಧಾರ್ಮಿಕ ಆಚರಣೆ ಸಮಿತಿ ಅಧ್ಯಕ್ಷ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ 5:30 ಗಂಟೆಯಿಂದ ಬ್ರಾಹ್ಮೀ ಮುಹೂರ್ತದಲ್ಲಿ ಪುಣ್ಯಾಹ, ಗಣಪತಿ ಪೂಜೆ, ಪ್ರಧಾನ ಕಳಶರಾಧನೆ, ದೇವಿಗೆ ಪಂಚಾಮೃತ ಅಭಿಷೇಕ, ಅಗ್ನಿ ಪ್ರತಿಷ್ಠಾಪನೆ, ಶ್ರೀ ವನದುರ್ಗಾ ಹೋಮ, ಲಘು ಪೂರ್ಣಾಹುತಿ, ಅಷ್ಟಾವದಾನ ಸೇವೆ, ಮಂತ್ರಪುಷ್ಪ ರಾಷ್ಟ್ರಾಶೀರ್ವಾದ, ಬೆಳಿಗ್ಗೆ 9:30 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 4:30 ಗಂಟೆಗೆ ವೇದಪಾರಾಯಣ, ದುರ್ಗಾಸಪ್ತಶಶಿ ಪಾರಾಯಣ, ಅಷ್ಟಾವದಾನ, ಕುಂಕುಮಾರ್ಚನೆ ರಾ.7:30 ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296