ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಡುವಿನ ಅಸಮಾಧಾನ ಇನ್ನೂ ಮುಂದುವರಿದಿದೆ. ಒಂದೆಡೆ ಟಿಕೆಟ್ ಗಾಗಿ ಸಿ.ಪಿ.ಯೋಗೇಶ್ವರ್ ಪಟ್ಟು ಹಿಡಿದಿದ್ದರೆ ಅತ್ತ ಜೆಡಿಎಸ್ ನಿಂದ ಹೆಚ್.ಡಿ.ಕುಮಾರಸ್ವಾಮಿ ನಿಖಿಲ್ ಅಥವಾ ಅನಿತಾ ಅವರನ್ನು ಕಣಕ್ಕಿಳಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.
ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಆದರೆ ಯಾರೇ ಅಭ್ಯರ್ಥಿಯಾದರೂ ಇಲ್ಲಿ ಗೆಲ್ಲಬೇಕಾದರೆ ಯೋಗೇಶ್ವರ್ ಮತ್ತು ಕುಮಾರಸ್ವಾಮಿ ಇಬ್ಬರ ಬೆಂಬಲವೂ ಬೇಕಾಗುತ್ತದೆ. ಇದರ ನಡುವೆ ನಿಖಿಲ್ ಕುಮಾರಸ್ವಾಮಿ ಅಥವಾ ಅನಿತಾ ಕುಮಾರಸ್ವಾಮಿ ಹೆಸರು ಬಲವಾಗಿ ಕೇಳಿಬರುತ್ತಿದೆ.
ಚನ್ನಪಟ್ಟಣಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರದಲ್ಲಿ ಸಂಪೂರ್ಣ ಅಧಿಕಾರವನ್ನು ನನಗೆ ನೀಡಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ತಮ್ಮ ಪುತ್ರನನ್ನು ಇಲ್ಲಿಂದ ಕಣಕ್ಕಿಳಿಸಬೇಕು ಎಂದು ಕುಮಾರಸ್ವಾಮಿಯವರಿಗೆ ಚಿಂತನೆಯಿದೆ. ಇನ್ನೊಂದೆಡೆ ನಿಖಿಲ್ ಇಲ್ಲದೇ ಇದ್ದರೆ ಪತ್ನಿ ಅನಿತಾರನ್ನಾದರೂ ಕಣಕ್ಕಿಳಿಸಬೇಕೆಂಬ ಬಯಕೆ ಅವರದ್ದು ಎಂದು ಹೇಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q