ಪಾವಗಡ: ತಾಲ್ಲೂಕಿನ ಚೆನ್ನಕೇಶವಪುರದ ಚೆನ್ನಕೇಶವ ಸ್ವಾಮಿ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ಹಾಗೂ ಕುಕ್ಕೆ ಸುಬ್ರಮಣ್ಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರು ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಚೆನ್ನಕೇಶವ ಸ್ವಾಮಿಯ ಹಾಗೂ ಆಂಜನೇಯ ಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಿದಂತಹ ವ್ಯಾಸರಾಜ ಗುರುಗಳ ಬಗ್ಗೆ ಸ್ವಾಮೀಜಿಗಳು ಮಾತನಾಡಿದರು. ಇದೇ ವೇಳೆ ಶ್ರೀಪ್ರಾಣ ದೇವರಾದ ಆಂಜನೇಯ ಸ್ವಾಮಿಯ ದರ್ಶನ ಪಡೆದು, ದೇವರ ಪವಾಡಗಳನ್ನು ಹಾಗೂ ಮಹಿಮೆಗಳನ್ನು ತಿಳಿದುಕೊಂಡು ಸಂತೋಷ ಪಟರು.
ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯಸ್ತರಾದ ಗೋಪಾಲ್ ರಾವ್ ಹಾಗೂ ಸಿ.ಎನ್ ಆನಂದ್ ರಾವ್, ನಾಗರಾಜು ಸ್ವಾಮಿ, ಅಜಯ್ ನಾಗೇಶ್, ಬಿಂದು ಮಾಧವ್ ರಾವ್, ಉಭಯ ಶ್ರೀ ಗಳನ್ನು ಭಕ್ತಿಯಿಂದ ದೇವಸ್ಥಾನದ ಸಂಪ್ರದಾಯದಂತೆ ಸ್ವಾಗತಿಸಿ ದೇವರ ದರುಶನವನ್ನು ಮಾಡಿಸಿ ಗೌರವಿಸಿದರು.
ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB