ಪಾವಗಡ: ತಾಲ್ಲೂಕಿನ ಕೋಟಾಗುಡ್ಡ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ತೀವ್ರಗೊಂಡಿದ್ದ ಕುಡಿಯುವ ನೀರಿನ ಸಮಸ್ಯೆಗೆ ಪಾವಗಡ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಂ.ಚೇತನ್ ಬಾಬು ಅವರು ತ್ವರಿತವಾಗಿ ಸ್ಪಂದಿಸಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಕಲ್ಪಿಸಿದ್ದಾರೆ.
ಗ್ರಾಮಸ್ಥರು ಸೋಮವಾರ ರಾತ್ರಿ ದೂರವಾಣಿ ಮೂಲಕ ಸಂಪರ್ಕಿಸಿ, ಮನೆಗಳಲ್ಲಿ ಕುಡಿಯುವ ನೀರಿನ ಅಭಾವದಿಂದ ಎದುರಾಗಿರುವ ಸಂಕಷ್ಟವನ್ನು ವಿವರಿಸಿದ್ದರು. ವಿಷಯ ತಿಳಿದ ಕೂಡಲೇ ಚೇತನ್ ಬಾಬು ಅವರು ತಮ್ಮ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ, ತಕ್ಷಣವೇ ನೀರು ಪೂರೈಕೆಗೆ ಕ್ರಮ ಕೈಗೊಂಡರು.
ಮಂಗಳವಾರ ಬೆಳಗ್ಗಿನಿಂದಲೇ ಚೇತನ್ ಬಾಬು ಅವರ ಕಾರ್ಯಕರ್ತರು ಗ್ರಾಮದಲ್ಲಿದ್ದು, ನೀರಿನ ಕೊರತೆ ಇರುವ ಪ್ರದೇಶಗಳನ್ನು ಗುರುತಿಸಿ ಮನೆ–ಮನೆಗೆ ಟ್ಯಾಂಕರ್ ಮೂಲಕ ನೀರು ತಲುಪಿಸುತ್ತಿದ್ದಾರೆ. ಇದುವರೆಗೆ ಸುಮಾರು 10 ಟ್ಯಾಂಕರ್ ನೀರನ್ನು ಅಗತ್ಯವಿರುವ ಕುಟುಂಬಗಳಿಗೆ ಪೂರೈಸಲಾಗಿದೆ. ಇಂದು ರಾತ್ರಿ 10 ಗಂಟೆಯವರೆಗೆ ಈ ಸೇವಾ ಕಾರ್ಯ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಕೆ.ಎಂ. ಚೇತನ್ ಬಾಬು ಅವರು, “ಗ್ರಾಮಸ್ಥರ ಸಂಕಷ್ಟಕ್ಕೆ ತಕ್ಷಣ ಸ್ಪಂದಿಸಿ ಸ್ಥಳದಲ್ಲೇ ಸೇವಾ ಕಾರ್ಯದಲ್ಲಿ ತೊಡಗಿರುವ ನನ್ನ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು. ಜನರ ಕಷ್ಟಕ್ಕೆ ಸ್ಪಂದಿಸಲು ಅಧಿಕಾರಕ್ಕಿಂತ ಸೇವಾ ಮನಸ್ಸು ಮುಖ್ಯ. ಜನರ ಸಮಸ್ಯೆಯೇ ನಮ್ಮ ಸಮಸ್ಯೆ. ಪಾವಗಡ ಕ್ಷೇತ್ರದ ಪ್ರತಿಯೊಬ್ಬರ ಕಷ್ಟ-ಸುಖಗಳಲ್ಲಿ ಜೊತೆಯಾಗಿ ನಿಂತು ಜನಸೇವೆ ಮಾಡುವುದು ನಮ್ಮ ನಿರಂತರ ಸಂಕಲ್ಪ” ಎಂದು ಹೇಳಿದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


