nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026
    Facebook Twitter Instagram
    ಟ್ರೆಂಡಿಂಗ್
    • ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!
    • ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ
    • ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ
    • ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ
    • ಸರಗೂರು: ಕಾಡಾನೆಗಳ ಹಿಂಡಿನಿಂದ ದಾಳಿ: 1000 ಬಾಳೆ ಗಿಡಗಳು ನಾಶ
    • ಪ್ರಾಣಿ ಬಲಿ: ಪ್ರತಿ ಜಾತ್ರೆಯೂ ರಕ್ತ ಮುಕ್ತ ಸುಕ್ಷೇತ್ರವಾಗಬೇಕು: ದಯಾನಂದ ಸ್ವಾಮೀಜಿ
    • SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು
    • ಶಿರಾ ಎಪಿಎಂಸಿ: ಹುಣಸೆಹಣ್ಣು ಬೆಲೆ ದಿಢೀರ್ ಕುಸಿತ; ರೈತರ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಟ ಚೇತನ್ ಅವರನ್ನು ಬಿಡುಗಡೆಗೊಳಿಸಲು ಸಾಮಾಜಿಕ ಕಾರ್ಯಕರ್ತ ನಾಗಣ್ಣ ಜಿ.ಕೆ. ಒತ್ತಾಯ
    ತುಮಕೂರು February 23, 2022

    ನಟ ಚೇತನ್ ಅವರನ್ನು ಬಿಡುಗಡೆಗೊಳಿಸಲು ಸಾಮಾಜಿಕ ಕಾರ್ಯಕರ್ತ ನಾಗಣ್ಣ ಜಿ.ಕೆ. ಒತ್ತಾಯ

    By adminFebruary 23, 2022No Comments2 Mins Read
    press meet

    ತುಮಕೂರು: ಚಿತ್ರನಟ ಚೇತನ್ ಕುಮಾರ್ ನ್ಯಾಯಧೀಶರಿಗೆ ನಿಂದನೆ ಮಾಡಿದ್ದಾರೆಂಬ ಆಕ್ಷೇಪಾರ್ಹ ಟ್ವೀಟ್ ನ ಆರೋಪದಡಿಯಲ್ಲಿ ಏಕಾಏಕಿ ಪೊಲೀಸರು ಯಾವುದೇ ಪೂರ್ವ ಮಾಹಿತಿ ನೀಡದೆ ಬಂಧಿಸಿರುವುದು ಖಂಡನೀಯ ಎಂದು ಸಾಮಾಜಿಕ ಕಾರ್ಯಕರ್ತ ನಾಗಣ್ಣ ಜಿ.ಕೆ. ಟೀಕಿಸಿದರು.

    ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ಸಾಮಾಜಿಕ ಕಾರ್ಯಕರ್ತ, ನಟ ಚೇತನ್ ಅವರ ಬಂಧನ ಸಂಬಂಧ ಕರೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಟ ಚೇತನ್ ಒಬ್ಬ ಸಾಮಾಜಿಕ ಕಳಕಳಿ ಹೊಂದಿರುವ ಸಾಮಾಜಿಕ ಹೋರಾಟಗಾರ. ಅನ್ಯಾಯ ಪ್ರಶ್ನಿಸುವ ಮಾನವತಾದಿ, ಬುದ್ಧ ಬಸವ, ಪೆರಿಯಾರ್, ಡಾ.ಬಿ.ಆರ್.ಅಂಬೇಡ್ಕರ್ ಅಂತಹವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸದಾ ಧ್ವನಿಯಿಲ್ಲದವರಿಗೆ ದನಿಯಾಗುವ ನಿಟ್ಟಿನಲ್ಲಿ ಸಮಾನತೆ ಪಾಲಿಸುವ ಹಿತದೃಷ್ಟಿಯ ಚಿಂತಕ ಅಂದರೆ ಅತಿಶಯೋಕ್ತಿಯೆನಿಸದು.


    Provided by
    Provided by

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ಕದಡುವ ವ್ಯಕ್ತಿಗಳ ಮೇಲೆ ಕ್ರಮ ಕೈಗೊಳ್ಳದ ಸರ್ಕಾರ ಸದಾ ಶಾಂತಿ, ಸೌಹಾರ್ಧತೆ, ಸೋದರತ್ವ ಭಾವನೆ ಇರುವ ಭಾವುಕ ಜೀವಿ ಚೇತನ್ ಅವರ ಮೇಲೆ ಕೋಮು ಪ್ರಚೋದನೆ ಪ್ರಕರಣ ದಾಖಲಿಸಿರುವುದು ಖಂಡನೀಯ. ಜೊತೆಗೆ ರಾಜ್ಯದ ಮುಖ್ಯಮಂತ್ರಿಗಳ ಸರ್ಕಾರ ಕೂಲಂಕುಶವಾಗಿ ಸತ್ಯಾ ಸತ್ಯತೆಯನ್ನ ಅರಿಯದೆ ಬಂಧಿಸಿರುವುದು ಈ ಪ್ರಜಾಪ್ರಭುತ್ವದ ವಿರೋಧದ ನಡೆ ಸಮಂಜಸವಲ್ಲ ಎಂದರು.

    ಪ್ರಜಾಪ್ರಭುತ್ವದ ಅಂಕುಡೊಂಕು ಅಸಮಾನತೆಗಳನ್ನ ಭಿನ್ನ ಧ್ವನಿಯಲ್ಲಿ ಪ್ರಶ್ನಿಸುವ ನಟ ಚೇತನ್ ಅವರ ಮೇಲೆ ಯಾವುದೇ ಪೂರ್ವ ಮಾಹಿತಿ ನೀಡದೆ ಐಪಿಸಿ 504 ಮತ್ತು 505 ಸೆಕ್ಷನ್ ಅಡಿಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಬಂಧಿಸಿರುವುದು ಕಾನೂನು ಉಲ್ಲಂಘನೆ. ಜೊತೆಗೆ ಚೇತನ್ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಷಡ್ಯಂತ್ರ ಸರ್ಕಾರ ಮಾಡಿದೆ ಎಂದು ನೇರವಾಗಿಯೇ ಆರೋಪ ಮಾಡಿದರು.

    ಈ ಕೂಡಲೇ ನಟ, ರಾಜ್ಯದ ಬಹು ಸಂಖ್ಯಾತ ಜನರ ಹಕ್ಕುಗಳಿಗೆ ಹೋರಾಟ ನಡೆಸಿದ ಚೇತನರನ್ನು ಸರ್ಕಾರ ವಿಧಿಸಿರುವ ಪ್ರಕರಣ ವಾಪಸ್ಸು ಪಡೆದು ಬಿಡುಗಡೆಗೊಳಿಸಬೇಕು, ಇಲ್ಲವಾದಲ್ಲಿ ಮುಂದಿನ ಹಂತದಲ್ಲಿ ಸಂವಿಧಾನಾತ್ಮಕ ನಮ್ಮ ಹಕ್ಕು ಕೇಳುವ ಧ್ವನಿಗಳನ್ನು ಹೆಚ್ವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಈ ವೇಳೆ ಬಂಧಿತ ಚೇತನ್ ಅವರ ಕುಟುಂಬಸ್ಥರಿಗೆ ಇಡಿ ರಾಜ್ಯದ ಬಹುಸಂಖ್ಯಾತ ಜನರ ಬೆಂಬಲವಿದೆ ಎಂದು ಧೈರ್ಯ ತುಂಬುವ ವಿಶ್ವಾಸ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಕುಣಿಗಲ್ ಅಹಿಂದಾ ಜನಾಂಗದ ಕ್ಷೇಮಾಭಿವೃದ್ಧಿ ಪ್ರಧಾನ ಕಾರ್ಯದರ್ಶಿ ಧನುಂಜಯ್ ವಿ.ಎಸ್., ಡಾ.ಬಿ.ಆರ್.ಅಂಬೇಡ್ಕರ್ ಯುವಸೇನೆ ಬಳ್ಳಾರಿ ಜಿಲ್ಲಾಧ್ಯಕ್ಷ ಪಿ.ಸಂತೋಷ್ ಕುಮಾರ್,ಮುಖಂಡ ನರಸಿಂಹಮೂರ್ತಿ ಉಪಸ್ಥಿತರಿದ್ದರು.

    ವರದಿ: ಎ.ಎನ್. ಪೀರ್, ತುಮಕೂರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    SSLC: ತುಮಕೂರು ಜಿಲ್ಲೆಯಲ್ಲಿ 131 ಪರೀಕ್ಷಾ ಕೇಂದ್ರಗಳು: ಪರೀಕ್ಷೆ ಬರೆಯಲಿರುವ 37,130 ವಿದ್ಯಾರ್ಥಿಗಳು

    March 18, 2026

    ತುಮಕೂರು: ರಂಜಾನ್‌ ಸಂಭ್ರಮಕ್ಕೆ ಅಡ್ಡಿಯಾದ ಸಿಲಿಂಡರ್‌ ಕೊರತೆ; ದುಬಾರಿಯಾದ ಸಮೋಸ!

    March 17, 2026

    ಮಾ.25ಕ್ಕೆ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ: ಒಳಮೀಸಲಾತಿ ವರದಿ ವಿರೋಧಿಸಿ ಛಲವಾದಿ ಮಹಾಸಭಾ ಕರೆ

    March 16, 2026

    Leave A Reply Cancel Reply

    Our Picks

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸೆರಗಿನ ವಿಷ್ಯ: ಪ್ರೇಮ್ ಹಾಡನ್ನು ಅನುವಾದ ಮಾಡಿದ ಬಾಲಿವುಡ್ ಗೀತರಚನೆಕಾರನಿಗೆ ಸಂಕಷ್ಟ!

    March 18, 2026

    ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ‘ಕೆಡಿ-ದಿ ಡೆವಿಲ್’ ಚಿತ್ರದ “ಸರ್ಸೆ ನಿನ್ನ ಸೆರಗ…

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026

    ಅಂಗನವಾಡಿ ತಾಯಂದಿರಿಗೆ ‘ಪೋಷಕತ್ವ ಯೋಜನೆ’ ಕುರಿತು ಜಾಗೃತಿ: ಮಳಚಪುರದಲ್ಲಿ ವಿಶೇಷ ಕಾರ್ಯಕ್ರಮ

    March 18, 2026

    ಹೊಕ್ರಾಣದಲ್ಲಿ ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮ

    March 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.