ಬೀದರ್: ಬೀದರ್ ದಕ್ಷಿಣ ಹಾಗೂ ಚಿಟುಗುಪ್ಪ ತಾಲ್ಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ರೈತರ ಸಂಕಷ್ಟಕ್ಕೆ ಧಾವಿಸಿದ ಜನಪ್ರಿಯ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರ ಹೋರಾಟವನ್ನು ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಯುವ ನಾಯಕ ಚೇತನ್ ಸೊರಳ್ಳಿ ತೀವ್ರವಾಗಿ ಶ್ಲಾಘಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದು, ಸಮಸ್ತ ಎರಡು ತಾಲ್ಲೂಕುಗಳ ಜನತೆ ಮತ್ತು ರೈತರ ಪರವಾಗಿ ಶಾಸಕರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ತಾಲ್ಲೂಕಿನಲ್ಲಿ ತಲೆದೂರಿರುವ ತೀವ್ರ ಬರಗಾಲದ ಪರಿಸ್ಥಿತಿಯನ್ನು ಮನಗಂಡು, ರೈತರ ಕಷ್ಟಗಳಿಗೆ ಶಾಸಕರು ತಕ್ಷಣವೇ ಸ್ಪಂದಿಸಿರುವುದು ಶ್ಲಾಘನೀಯ, ಸರ್ಕಾರದ ಮಟ್ಟದಲ್ಲಿ ಪರಿಣಾಮಕಾರಿ ಪ್ರಯತ್ನ ನಡೆಸಿ, ತಾಲ್ಲೂಕನ್ನು ಅಧಿಕೃತವಾಗಿ ಬರಪೀಡಿತ ಪ್ರದೇಶವೆಂದು ಘೋಷಿಸುವಲ್ಲಿ ಶಾಸಕರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
“ರೈತರ ಕಷ್ಟ–ನಷ್ಟಗಳಿಗೆ ಸ್ಪಂದಿಸಿ, ನಮ್ಮ ತಾಲ್ಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡಿಸುವಲ್ಲಿ ಶಾಸಕರು ವಹಿಸಿದ ಶ್ರಮ ಅನನ್ಯ. ರೈತ ಕುಲದ ಪರವಾಗಿ ಅವರಿಗೆ ಅನಂತ ಧನ್ಯವಾದಗಳು.”
— ಚೇತನ್ ಸೊರಳ್ಳಿ, ಅಧ್ಯಕ್ಷರು, ಸ್ವಾಮಿ ವಿವೇಕಾನಂದ ಚಾರಿಟೇಬಲ್ ಟ್ರಸ್ಟ್.
ಅನ್ನದಾತರ ಹಿತರಕ್ಷಣೆಗಾಗಿ ಸದಾ ಶ್ರಮಿಸುತ್ತಿರುವ ಶಾಸಕರ ಈ ಜನಪರ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ವರದಿ: ಅರವಿಂದ ಮಲ್ಲೀಗೆ, ಬೀದರ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
