nammatumakuru

    Subscribe to Updates

    Get the latest creative news from FooBar about art, design and business.

    What's Hot

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026
    Facebook Twitter Instagram
    ಟ್ರೆಂಡಿಂಗ್
    • ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!
    • ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ
    • ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ
    • ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ
    • ತುರುವೇಕೆರೆ ರಾಗಿ ಖರೀದಿ ಕೇಂದ್ರ: ಎಪಿಎಂಸಿ ರಸ್ತೆಯುದ್ದಕ್ಕೂ ರಾಗಿ ತುಂಬಿದ ಟ್ರ್ಯಾಕ್ಟರ್‌ ಗಳ ಕ್ಯೂ!
    • ತಿಪಟೂರು: ಅಕ್ರಮವಾಗಿ ಸಾಗಿಸುತ್ತಿದ್ದ 119 ಚೀಲ ರಾಗಿ ಜಪ್ತಿ: ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ
    • ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ
    • ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
    ರಾಜ್ಯ ಸುದ್ದಿ November 28, 2023

    ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

    By adminNovember 28, 2023No Comments2 Mins Read
    siddaramaiha

    ಬೆಂಗಳೂರು: ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ  ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿರುತ್ತಾರೆ. ಬೆಳಿಗ್ಗೆ 10.00 ಗಂಟೆಗೆ ಆರಂಭಗೊಂಡು, ಜನಸ್ಪಂದನ‌ ಕಾರ್ಯಕ್ರಮವು ಜನರ ಸಮಸ್ಯೆಯ ಪರಿಹಾರಕ್ಕೆ ಉತ್ತಮ ವೇದಿಕೆ ಆಯಿತು.

    ಮಧ್ಯಾಹ್ನದ ಊಟದ ಬಿಡುವಿನಲ್ಲಿ ಊಟಕ್ಕೆಂದು ಮನೆಗೆ ತೆರಳಲು ಎದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬಳಿಕ ಅಹವಾಲು ಬಂದಿರುವವರ ಸಂಖ್ಯೆ ಇನ್ನೂ ಬಹಳಷ್ಟಿದೆ ಎಂದು ಮಾಹಿತಿ ಲಭ್ಯವಾದ ಕೂಡಲೇ ಅಹವಾಲು ಸ್ವೀಕರಿಸುವ ಟೇಬಲ್ಲಿಗೇ ಊಟ ತರಿಸಿಕೊಂಡು ಅಲ್ಲೇ ಕುಳಿತು ಊಟ ಸೇವಿಸಿದರು.


    Provided by
    Provided by

    ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅಧಿಕಾರಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಸ್ಪಂದನ ಕಾರ್ಯಕ್ರಮವು ಎರಡು ತಿಂಗಳ ಹಿಂದಯೇ ನಡೆಯಬೇಕಿತ್ತು. ಜಿಲ್ಲಾ ಉಸ್ತುವಾರಿ ಸಚಿವರಿಗೂ ಸಹ ತಮ್ಮ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮ ನಡೆಸಲು ಪತ್ರವನ್ನು ಬರೆದು ಜಿಲ್ಲೆಗಳಲ್ಲಿ ಕಾರ್ಯಕ್ರಮ ಆಯೋಜಿಸಲು ತಿಳಿಸಲಾಗಿತ್ತು. ಅದರಂತೆ ಜಿಲ್ಲಾ ಉಸ್ತುವಾರಿ ಸಚಿವರು ಜನತಾ ದರ್ಶನ ಕಾರ್ಯಕ್ರಮವನ್ನು ನಡೆಸಿ, ಬಹುತೇಕ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ನೀಡಿರುತ್ತಾರೆ ಎಂದು ಹೇಳಿದರು.

    ಜನಸ್ಪಂದನ ಕಾರ್ಯಕ್ರಮದಲ್ಲಿ ಹಲವು ವೈದ್ಯಕೀಯ ವೆಚ್ಚ,  ಕಂದಾಯ ಹಾಗೂ ಪೊಲೀಸ್ ಇಲಾಖೆಗಳಿಗೆ ಸಂಬಂಧಪಟ್ಟ ಸಮಸ್ಯೆಗಳೇ ಹೆಚ್ಚಾಗಿ ಬಂದಿವೆ. ಇವತ್ತು ನಡೆದ ಜನ ಸ್ಪಂದನ ಕಾರ್ಯಕ್ರಮದಲ್ಲಿ ಜನರಿಂದ 3500 ಅರ್ಜಿಗಳು ಬಂದಿದ್ದು, ಕಾನೂನಿನಲ್ಲಿ ಅವಕಾಶವಿದ್ದರೆ, ಪರಿಹಾರ ನೀಡಲು ಕ್ರಮವಹಿಸಬೇಕು. ಇಲ್ಲದಿದ್ದಲ್ಲಿ, ಯಾವ ಕಾರಣಕ್ಕೆ ಕ್ರಮವಹಿಸಲು ಸಾಧ್ಯವಿಲ್ಲ ಎಂಬುವುದನ್ನು ಮುಖ್ಯಮಂತ್ರಿಯವರ ಕಚೇರಿಗೆ ತಿಳಿಸಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

    ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು ಸ್ಥಳೀಯ ಹಂತದಲ್ಲಿ ಸಮಸ್ಯೆಗಳಿಗೆ ಪರಿಹಾರಕ್ಕೆ ಕ್ರಮವಹಿಸಬೇಕು. ಪೊಲೀಸ್ ಇಲಾಖೆಯ ಸಮಸ್ಯೆಯೂ ಸಹ ಸ್ಥಳೀಯ ಹಂತದಲ್ಲಿ ಬಗೆಹರಿಸುವ ಸಮಸ್ಯೆಗಳೆ ಆಗಿದ್ದು, ಇಂದು ನಡೆದ ಜನಸ್ಪಂದನ ಕಾರ್ಯಕ್ರಮದ ಅರ್ಜಿಗಳಿಗೆ ಒಂದು ವಾರ ಅಥವಾ ಹದಿನೈದು ದಿನದಲ್ಲಿ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ, ಪರಿಹಾರಕ್ಕೆ ನೀಡಲು ಯಾಕೆ ಸಾಧ್ಯವಿಲ್ಲ ಎಂದು ಲಿಖಿತ ರೂಪದಲ್ಲಿ ಪತ್ರವನ್ನು ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ  ಜನಸ್ಪಂದನ ಕಾರ್ಯಕ್ರಮವನ್ನು ನಡೆಸಲಾಗುವುದು. ನಾನೂ ಸಹ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಹಾರಕ್ಕೆ ಸಂಬಂಧಿಸಿದಂತೆ ಯಾವ ಕ್ರಮವನ್ನು ಅಧಿಕಾರಿಗಳು ಮಾಡಿರುವ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದರು.

    ಮುಂದಿನ ಬಾರಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಸಂಖ್ಯೆ ಇಳಿಮುಖವಾಗಬೇಕು. ಇಲ್ಲಿಗೆ ಬಂದಿರುವ ಬಹುತೇಕ ಅರ್ಜಿಗಳು ಜಿಲ್ಲಾ ಹಂತದಲ್ಲಿ ಪರಿಹಾರ ನೀಡುವಂತಹ ಅರ್ಜಿಗಳು ಆಗಿದ್ದು, ಸ್ಥಳೀಯ ಹಂತದಲ್ಲಿ ಪರಿಹಾರಕ್ಕೆ ಅಧಿಕಾರಿಗಳು ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    ಜನರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರಕ್ಕೆ ಎಲ್ಲಾ ಹಂತದಲ್ಲಿ ಅಧಿಕಾರಿಗಳು ಕ್ರಮವಹಿಸಬೇಕು. ಜನರ ತೆರಿಗೆ ಹಣದಿಂದ ನಮಗೆ ಸಂಬಳ ಬರುತ್ತಿದೆ.   ಜನಪ್ರತಿನಿಧಿಗಳು ಹಾಗೂ ಸರ್ಕಾರಿ ನೌಕರರು ತಮ್ಮ ಜವಾಬ್ದಾರಿಯನ್ನು ಅರಿತು ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸವನ್ನು ಜವಾಬ್ದಾರಿಯಿಂದ ಮಾಡಬೇಕು ಎಂದು ಹೇಳಿದರು.

    ಇದೇ ವೇಳೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವರ್ಷ 4000 ತ್ವಿಚಕ್ರ ವಾಹನವನ್ನು ವಿಕಲಚೇತನರಿಗೆ ನೀಡಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

    ಜನಸ್ಪಂದನ:

    ಕಾರ್ಯಕ್ರಮದ ಕೊನೆಯ ಹಂತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹವಾಲು ನೀಡಲು ಸರದಿ ಸಾಲಿನಲ್ಲಿ ನಿಂತಿದ್ದ ಜನರ ಬಳಿಗೆ ತೆರಳಿ ಅರ್ಜಿಗಳನ್ನು ಖುದ್ದು ಪಡೆದು, ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನೀಡಿದರು. ಇದಕ್ಕೂ ಮುನ್ನ  ವಿಕಲಚೇತನರ ಬಳಿ ಹೋಗಿ ಅಹವಾಲು ಸ್ವೀಕರಿಸಿ, ತ್ವರಿತವಾಗಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಿದರು.

     

    ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಳ್, ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೇರಿದಂತೆ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

    admin
    • Website

    Related Posts

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಪ್ರಜ್ವಲ್ ರೇವಣ್ಣ ಜೈಲು ಸೇರಲು ಕುಮಾರಸ್ವಾಮಿಯೇ ಕಾರಣ: ಶಾಸಕ ಕದಲೂರು ಉದಯ್ ಸ್ಫೋಟಕ ಆರೋಪ

    March 3, 2026

    ವಿಶ್ವಶಾಂತಿಯ ಸಂದೇಶವನ್ನು ಜಗತ್ತಿಗೆ ನೀಡಿದ ಕೀರ್ತಿ ವೀರಶೈವ ಧರ್ಮಕ್ಕೆ ಸಲ್ಲುತ್ತದೆ: ಕೆ.ಇ.ಚಿದಾನಂದಪ್ಪ

    March 3, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ಏಕಕಾಲಕ್ಕೆ ಇಬ್ಬರೊಂದಿಗೆ ಡೇಟಿಂಗ್; ಒಂದೇ ಮಂಟಪದಲ್ಲಿ ಇಬ್ಬರನ್ನೂ ವರಿಸಿದ ಮಹಿಳೆ!

    March 3, 2026

    ಬ್ಯಾಂಕಾಕ್: ಪ್ರೀತಿ ಹಾಗೂ ಮದುವೆ ವಿಚಾರದಲ್ಲಿ ಜಗತ್ತಿನಲ್ಲಿ ಆಗಾಗ ವಿಚಿತ್ರ ಘಟನೆಗಳು ನಡೆಯುತ್ತಲೇ ಇರುತ್ತವೆ. ಇದೀಗ ಥೈಲ್ಯಾಂಡ್‌ ನ ಮಹಿಳೆಯೊಬ್ಬರು…

    ಖಾಲಿ ಹುದ್ದೆಗಳ ನೇಮಕಾತಿಗೂ ಮುನ್ನ ಒಳ ಮೀಸಲಾತಿ ಜಾರಿಗೆ ಎಲ್ಲರ ವಿಶ್ವಾಸ ತೆಗೆದುಕೊಳ್ಳಿ: ಬಸವರಾಜ ಬೊಮ್ಮಾಯಿ ಆಗ್ರಹ

    March 3, 2026

    ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ವಿಜಲ್ ಬ್ಲೋವರ್  ಪಾಲಿಸಿ ಜಾರಿ: ಭ್ರಷ್ಟಾಚಾರದ ವಿರುದ್ಧ ದೂರು ನೀಡಲು ಮುಕ್ತ ಅವಕಾಶ

    March 3, 2026

    ಕೊರಟಗೆರೆ: ಜೂನ್–ಜುಲೈ ವೇಳೆಗೆ ತಲುಪಲಿದೆ ಎತ್ತಿನಹೊಳೆ ನೀರು: ಸಚಿವ ಡಾ.ಜಿ.ಪರಮೇಶ್ವರ್ ಭರವಸೆ

    March 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.