ಹುಬ್ಬಳ್ಳಿ: ಕುದಿಯುವ ಸಾಂಬಾರ್ ಮೈಮೇಲೆ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿ ತಾಲೂಕಿನ ಚೆನ್ನಾಪುರ ಗ್ರಾಮದ ಎರಡೂವರೆ ವರ್ಷದ ರುಕ್ಸಾನಾ ಬಾನು ಶೇಖ್ ಸನದಿ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಕಳೆದ ಐದು ದಿನಗಳ ಹಿಂದೆ ಮನೆಯವರೊಂದಿಗೆ ಮದುವೆಗೆಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಕೊಣ್ಣೂರ ಗ್ರಾಮಕ್ಕೆ ತೆರಳಿದ್ದ ವೇಳೆ ಮಗುವಿನ ಮೈಮೇಲೆ ಕುದಿಯುವ ಸಾಂಬಾರ್ ಬಿದ್ದಿತ್ತು. ತಕ್ಷಣ ಮಗುವನ್ನು ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು.
ಬಳಿಕ ಎರಡು ದಿನದ ಹಿಂದಷ್ಟೇ ಮಗುವನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಮನೆಗೆ ಮರಳಿದ ನಂತರ ಮತ್ತೆ ಮಗುವಿನ ಮೈಮೇಲೆ ಮತ್ತೆ ಗುಳ್ಳೆಗಳು ಎದ್ದಿದ್ದವು. ಹೀಗಾಗಿ ಮತ್ತೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯವ ದಾರಿ ಮಧ್ಯೆಯೇ ಸಾವನ್ನಪ್ಪಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW