nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು
    • ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು
    • ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ
    • ಬೀದರ್ | ತಾಯಿ, ಮಗು ನಾಪತ್ತೆ: ಪತ್ತೆಗಾಗಿ ಮನವಿ
    • ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ: ಛಲ ಇದ್ದರೆ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
    • ತುರುವೇಕೆರೆ  | ಗಂಧದ ಮರ ಕಳ್ಳತನ: ಮಾಲು ಸಹಿತ ಕಳ್ಳರ ಬಂಧನ
    • ತುಮಕೂರು | ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
    • ಎಸಿ ಕೋರ್ಟ್ ಗಳಲ್ಲಿ ಬಾಕಿಯಿದ್ದ ಶೇ.80ರಷ್ಟು ಪ್ರಕರಣ ವಿಲೇವಾರಿ: ಸಚಿವ ಕೃಷ್ಣ ಬೈರೇಗೌಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ
    ಕೊರಟಗೆರೆ January 3, 2025

    ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ

    By adminJanuary 3, 2025No Comments2 Mins Read
    koratagere

    ಕೊರಟಗೆರೆ: ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದು, ಈ ವೇಳೆ ವಾಹನ ಪಲ್ಟಿಯಾದ ಪರಿಣಾಮ  15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ.

    ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ವಾಹನ ಮಗುಚಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಕ್ಕಳು ರಸ್ತೆಗೆಸೆಯಲ್ಪಟ್ಟಿದ್ದು, ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿಗಳು ನರಳಾಡಿದ್ದಾರೆ.


    Provided by
    Provided by

    ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸೈ ಯೋಗೀಶ್ ಮಕ್ಕಳನ್ನು ತಾವೇ ಎತ್ತಿ ತಮ್ಮ ಕಾರಿನಲ್ಲೇ ದೊಡ್ಡ ಸಾಗ್ಗೆರೆ ಹಾಗೂ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

    ಈ ಘಟನೆಯಲ್ಲಿ ಶಿಕ್ಷಣ ಇಲಾಖೆ ಬಿಇಓ ಮತ್ತು ಚಿಂಪುಗಾನಹಳ್ಳಿ ಶಾಲೆಯ ಮುಖ್ಯಶಿಕ್ಷಕರ ದಿವ್ಯ ನಿರ್ಲಕ್ಷ ಕಂಡು ಬಂದಿದೆ.  ಭದ್ರತೆಯೇ ಇಲ್ಲದ ಟಾಟಾ ಎಸಿ ವಾಹನದಲ್ಲಿ ಸರಕಾರಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗಲು ಬಿಇಓ ಅನುಮತಿ ನೀಡಿದ್ದಾದರೂ ಏಕೆ ಎಂಬುದೇ ಪ್ರಶ್ನೆ ಕೇಳಿ ಬಂದಿದೆ.

    ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ನೆರವು ಮಾಡಿದ್ದಾರೆ.

    ಕ್ರಮಕ್ಕೆ ಒತ್ತಾಯ:

    ಶಿವಕುಮಾರ್ ಮೇಷ್ಟ್ರು ಮನೆ

    ಘಟನೆ ಸಂಬಂಧ ನಮ್ಮತುಮಕೂರು ಜೊತೆಗೆ ಮಾತನಾಡಿದ ಕಾಳಜಿ ಫೌಂಡೇಶನ್ ತುಮಕೂರು ಇದರ ಕಾನೂನು ಸಲಹೆಗಾರರಾದ  ಶಿವಕುಮಾರ್ ಮೇಷ್ಟ್ರು ಮನೆ , ಲಗೇಜ್ ಕ್ಯಾರಿಯರ್ ವಾಹನದಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿಸಿಕೊಂಡು ಹೋಗಿರುವ  ಈ ಘಟನೆಯನ್ನು ನೋಡಿದ್ರೆ ನಾಚಿಕೆಯಾಗಬೇಕು,  ಶಿಕ್ಷಣ ಇಲಾಖೆ ಆಯುಕ್ತರ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.  ಸರ್ಕಾರಿ ವಾಹನದಲ್ಲೇ ಇಷ್ಟೇ ಮಿತಿಯಲ್ಲಿ ಮಕ್ಕಳನ್ನು ಕರೆದೊಯ್ಯಬೇಕು ಎನ್ನುವ ನಿಯಮವಿದೆ. ಈ ಎಲ್ಲ ಆದೇಶಗಳನ್ನು ಉಲ್ಲಂಘಿಸಿ, ಮಕ್ಕಳನ್ನು ಕರೆದೊಯ್ದು ಅವರ ಜೀವನದಲ್ಲಿ ಚೆಲ್ಲಾಟವಾಡಿದ್ದಾರೆ. ಇದಕ್ಕೆಲ್ಲ ನೇರ ಹೊಣೆ ಮುಖ್ಯಶಿಕ್ಷಕರು ಹಾಗೂ ಮಕ್ಕಳನ್ನು ಕರೆದೊಯ್ಯಲು ಅನುಮತಿ ನೀಡಿದ ಬಿಇಒ,  ಇವರಿಬ್ಬರ ವಿರುದ್ಧವೂ ಉಪ ನಿರ್ದೇಶಕರು ದೂರು ದಾಖಲಿಸಬೇಕು. ವಾಹನ ಮಾಲಿಕರು, ಡ್ರೈವರ್ ವಿರುದ್ಧವೂ ಕ್ರಮಕೈಗೊಳ್ಳಬೇಕು.  ಬಿಇಒ ಮತ್ತು ಮುಖ್ಯ ಶಿಕ್ಷಕರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಗ್ರಾಮೋದ್ಯೋಗ ವಿಕಾಸ್ ಯೋಜನೆಯಡಿ ಕುಂಬಾರ ಸಶಕ್ತಿಕರಣ ಅಡಿಯಲ್ಲಿ ಚಕ್ರ ಕುಂಬಾರಿಕೆ ತರಬೇತಿ

    December 18, 2025

    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರಹಗಾರರಿಂದ ಪ್ರತಿಭಟನೆ

    December 16, 2025

    26 ಪಂಗಡಗಳ ಬೇಡಿಕೆ ಈಡೇರಿಕೆಗೆ ಐತಿಹಾಸಿಕ ಪಾದಯಾತ್ರೆ: ಶ್ರೀಪ್ರಣವಾನಂದ ಸ್ವಾಮೀಜಿ

    December 15, 2025

    Comments are closed.

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ: ಹೋಟೆಲ್‌ ಗೆ ಊಟಕ್ಕೆ ತೆರಳಿದ್ದ ದಲಿತ ಯುವಕನ ಮೇಲೆ ಹಲ್ಲೆ: ಪ್ರಕರಣ ದಾಖಲು

    December 18, 2025

    ಗುಬ್ಬಿ: ತಾಲ್ಲೂಕಿನ ಎಂ.ಎಚ್. ಪಟ್ಟಣ ಗೇಟ್ ಬಳಿ ಇರುವ ಹೋಟೆಲ್‌ ವೊಂದರಲ್ಲಿ ಪರಿಶಿಷ್ಟ ಜಾತಿಯ ಯುವಕನ ಮೇಲೆ ಹಲ್ಲೆ ನಡೆಸಿರುವ…

    ಮಧುಗಿರಿ: ಕಿತ್ತಾಡುತ್ತಿದ್ದ ಜಾನುವಾರುಗಳನ್ನು ಬಿಡಿಸಲು ಹೋಗಿ ರೈತ ಸಾವು

    December 18, 2025

    ಕರ್ನಾಟಕ ದ್ವೇಷ ಅಪರಾಧಗಳ ತಡೆ ವಿಧೇಯಕ–2025ಕ್ಕೆ ಅನುಮೋದನೆ: ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಎಂದ ಬಿಜೆಪಿ

    December 18, 2025

    ಬೀದರ್ | ತಾಯಿ, ಮಗು ನಾಪತ್ತೆ: ಪತ್ತೆಗಾಗಿ ಮನವಿ

    December 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.