nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್
    • ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ
    • ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ
    • ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ
    • ಕಾರ್ಮಿಕ ಚಳುವಳಿಗಳು ಮತ್ತೆ ಪುಟ್ಟಿದೇಳಬೇಕಿದೆ: ಕಾರ್ಮಿಕ ದಿನಾಚರಣೆಯಲ್ಲಿ ಎಲ್. ಹನುಮಂತಯ್ಯ ಕರೆ
    • ಅಂಬೇಡ್ಕರ್ ಸ್ಮರಣೆ: ಪುಸ್ತಕ ವಿತರಣೆ ಕಾರ್ಯಕ್ರಮ
    • ಬಸವ ತತ್ವಗಳಿಂದ ಸಾಮಾಜಿಕ ಪಿಡುಗನ್ನು ತೊಲಗಿಸಿ: ಶಾಸಕ ಎಂ.ಟಿ.ಕೃಷ್ಣಪ್ಪ
    • ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ
    ಕೊರಟಗೆರೆ January 3, 2025

    ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ

    By adminJanuary 3, 2025No Comments2 Mins Read
    koratagere

    ಕೊರಟಗೆರೆ: ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದು, ಈ ವೇಳೆ ವಾಹನ ಪಲ್ಟಿಯಾದ ಪರಿಣಾಮ  15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ.

    ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ವಾಹನ ಮಗುಚಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಕ್ಕಳು ರಸ್ತೆಗೆಸೆಯಲ್ಪಟ್ಟಿದ್ದು, ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿಗಳು ನರಳಾಡಿದ್ದಾರೆ.


    Provided by
    Provided by

    ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸೈ ಯೋಗೀಶ್ ಮಕ್ಕಳನ್ನು ತಾವೇ ಎತ್ತಿ ತಮ್ಮ ಕಾರಿನಲ್ಲೇ ದೊಡ್ಡ ಸಾಗ್ಗೆರೆ ಹಾಗೂ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.

    ಈ ಘಟನೆಯಲ್ಲಿ ಶಿಕ್ಷಣ ಇಲಾಖೆ ಬಿಇಓ ಮತ್ತು ಚಿಂಪುಗಾನಹಳ್ಳಿ ಶಾಲೆಯ ಮುಖ್ಯಶಿಕ್ಷಕರ ದಿವ್ಯ ನಿರ್ಲಕ್ಷ ಕಂಡು ಬಂದಿದೆ.  ಭದ್ರತೆಯೇ ಇಲ್ಲದ ಟಾಟಾ ಎಸಿ ವಾಹನದಲ್ಲಿ ಸರಕಾರಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗಲು ಬಿಇಓ ಅನುಮತಿ ನೀಡಿದ್ದಾದರೂ ಏಕೆ ಎಂಬುದೇ ಪ್ರಶ್ನೆ ಕೇಳಿ ಬಂದಿದೆ.

    ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ನೆರವು ಮಾಡಿದ್ದಾರೆ.

    ಕ್ರಮಕ್ಕೆ ಒತ್ತಾಯ:

    ಶಿವಕುಮಾರ್ ಮೇಷ್ಟ್ರು ಮನೆ

    ಘಟನೆ ಸಂಬಂಧ ನಮ್ಮತುಮಕೂರು ಜೊತೆಗೆ ಮಾತನಾಡಿದ ಕಾಳಜಿ ಫೌಂಡೇಶನ್ ತುಮಕೂರು ಇದರ ಕಾನೂನು ಸಲಹೆಗಾರರಾದ  ಶಿವಕುಮಾರ್ ಮೇಷ್ಟ್ರು ಮನೆ , ಲಗೇಜ್ ಕ್ಯಾರಿಯರ್ ವಾಹನದಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿಸಿಕೊಂಡು ಹೋಗಿರುವ  ಈ ಘಟನೆಯನ್ನು ನೋಡಿದ್ರೆ ನಾಚಿಕೆಯಾಗಬೇಕು,  ಶಿಕ್ಷಣ ಇಲಾಖೆ ಆಯುಕ್ತರ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.  ಸರ್ಕಾರಿ ವಾಹನದಲ್ಲೇ ಇಷ್ಟೇ ಮಿತಿಯಲ್ಲಿ ಮಕ್ಕಳನ್ನು ಕರೆದೊಯ್ಯಬೇಕು ಎನ್ನುವ ನಿಯಮವಿದೆ. ಈ ಎಲ್ಲ ಆದೇಶಗಳನ್ನು ಉಲ್ಲಂಘಿಸಿ, ಮಕ್ಕಳನ್ನು ಕರೆದೊಯ್ದು ಅವರ ಜೀವನದಲ್ಲಿ ಚೆಲ್ಲಾಟವಾಡಿದ್ದಾರೆ. ಇದಕ್ಕೆಲ್ಲ ನೇರ ಹೊಣೆ ಮುಖ್ಯಶಿಕ್ಷಕರು ಹಾಗೂ ಮಕ್ಕಳನ್ನು ಕರೆದೊಯ್ಯಲು ಅನುಮತಿ ನೀಡಿದ ಬಿಇಒ,  ಇವರಿಬ್ಬರ ವಿರುದ್ಧವೂ ಉಪ ನಿರ್ದೇಶಕರು ದೂರು ದಾಖಲಿಸಬೇಕು. ವಾಹನ ಮಾಲಿಕರು, ಡ್ರೈವರ್ ವಿರುದ್ಧವೂ ಕ್ರಮಕೈಗೊಳ್ಳಬೇಕು.  ಬಿಇಒ ಮತ್ತು ಮುಖ್ಯ ಶಿಕ್ಷಕರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಪಟ್ಟಣ ಪಂಚಾಯತಿಯಿಂದ ಪುರಸಭೆಗೆ ಮೇಲ್ದರ್ಜೆ: ನಾಮಫಲಕ ಅನಾವರಣ, ಸೋಲಾರ್ ಪ್ಲಾಂಟ್ ಉದ್ಘಾಟನೆ

    May 1, 2026

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ಕೊರಟಗೆರೆಯ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

    April 24, 2026

    Comments are closed.

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತ: ಡಾ.ಜಿ.ಪರಮೇಶ್ವರ್

    May 2, 2026

    ತುಮಕೂರು: ಜೀವನದ ಸತ್ಯವನ್ನು ಅರ್ಥಪೂರ್ಣವಾಗಿ ಬಹಳ ಸರಳವಾಗಿ ತಿಳಿಸಿದ ಬುದ್ಧನ ತತ್ವಗಳು ಸೂರ್ಯ ಚಂದ್ರರು ಇರುವ ತನಕ ಪ್ರಸ್ತುತವಾಗಿರುತ್ತವೆ ಎಂದು…

    ತುಮಕೂರು: ಚುನಾವಣಾ ಆಯೋಗ ಕೈಗೊಂಡಿರುವ SIR ಪ್ರಕ್ರಿಯೆಗೆ ವಿರೋಧ: ಬಿಎಸ್‌ ಎನ್‌ ಎಲ್‌ ಕಚೇರಿ ಮುಂಭಾಗ ಸಿಪಿಎಂ ಪ್ರತಿಭಟನೆ

    May 2, 2026

    ತುಮಕೂರು: ರಾಷ್ಟ್ರೀಯ ಮಟ್ಟದ ತಾಂತ್ರಿಕ ವಿಚಾರ ಸಂಕಿರಣ

    May 2, 2026

    ನವಿಲುಗಳ ಸಾಮೂಹಿಕ ಸಾವಿನ ರಹಸ್ಯ ಬಯಲು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾಹಿತಿ

    May 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.