nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ
    • ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್
    • ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ
    • ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ
    • ತುಮಕೂರು: ವಿವಿಧ ಸೌಲಭ್ಯಕ್ಕಾಗಿ ಆನ್ ಲೈನ್ ಅರ್ಜಿ
    • ಜೂ. 28ರಂದು ಪಲ್ಸ್ ಪೋಲಿಯೋ ಲಸಿಕೆ, ಜಿಲ್ಲೆಯಾದ್ಯಂತ 1,86,831 ಮಕ್ಕಳಿಗೆ ಲಸಿಕೆ ಗುರಿ: ಡಾ.ಚಂದ್ರಶೇಖರ್
    • ಬಿಜೆಪಿ ಶಾಸಕರ ವಿರುದ್ಧ ಅಡ್ಡಮತದಾನದ ಅಪಪ್ರಚಾರ: ಎಸ್ ಪಿ ಕಚೇರಿ ಬಳಿ ಪ್ರತಿಭಟನೆ: ಕ್ರಮಕ್ಕೆ ಆಗ್ರಹ
    • ಗ್ರಾಮೀಣ ಮೂಲಭೂತ ಸೌಕರ್ಯ ಕಲ್ಪಿಸುವುದೇ ನಮ್ಮ ಆದ್ಯತೆ, ಜು.1 ರಿಂದ ನರೇಗಾ ಬದಲು ವಿಬಿಜಿ ರಾಮ್‌ ಜಿ ಯೋಜನೆ ಜಾರಿ : ಜಿಪಂ ಸಿಇಒ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ
    ಕೊರಟಗೆರೆ January 3, 2025

    ಕುರಿಗಳಂತೆ ಟಾಟಾಏಸ್ ವಾಹನದಲ್ಲಿ ಮಕ್ಕಳ ಸಾಗಾಟ: ವಾಹನ ರಸ್ತೆಗೆ ಪಲ್ಟಿಯಾಗಿ ಮಕ್ಕಳು ವಿಲವಿಲನೇ ಒದ್ದಾಟ

    By adminJanuary 3, 2025No Comments2 Mins Read
    koratagere

    Provided by
    Provided by

    ಕೊರಟಗೆರೆ: ಮಿನಿ ಲಾಲ್‌ ಬಾಗ್‌ ಗೆ ವನಬೇಟಿ ಕಾರ್ಯಕ್ರಮಕ್ಕೆ ಸರ್ಕಾರಿ ಶಾಲೆ 35 ಮಕ್ಕಳನ್ನು  ಕುರಿಗಳಂತೆ ಟಾಟಾ ಎಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದು, ಈ ವೇಳೆ ವಾಹನ ಪಲ್ಟಿಯಾದ ಪರಿಣಾಮ  15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ದೊಡ್ಡಸಾಗ್ಗೆರೆ ಮತ್ತು ಮಾವತ್ತೂರು ಮುಖ್ಯರಸ್ತೆಯ ಗೌಡನಕುಂಟೆ ಬಳಿ ನಡೆದಿದೆ.

    ಚಿಂಪುಗಾನಹಳ್ಳಿ ಸರಕಾರಿ ಪ್ರಾಥಮಿಕ ಪಾಠಶಾಲೆಯಿಂದ ದೊಡ್ಡಸಾಗ್ಗೆರೆ ಬಳಿಯ ಮಿನಿ ಲಾಲ್‌ ಬಾಗ್ ವೀಕ್ಷಣೆಗೆ  ಶಾಲಾ ಆಡಳಿತ ಮಕ್ಕಳನ್ನು ಟಾಟಾ ಏಸ್ ವಾಹನದಲ್ಲಿ ತುಂಬಿಕೊಂಡು ಹೋಗಿದ್ದಾರೆ.  ಕಾರ್ಯಕ್ರಮಕ್ಕೆ ಹೋಗಿ ವಾಪಸ್ ಬರುತ್ತಿದ್ದ ವೇಳೆ ವಾಹನ ಮಗುಚಿ ಬಿದ್ದಿದೆ. ಪರಿಣಾಮವಾಗಿ ವಾಹನದಲ್ಲಿದ್ದ ಮಕ್ಕಳು ರಸ್ತೆಗೆಸೆಯಲ್ಪಟ್ಟಿದ್ದು, ಚೆಲ್ಲಾಪಿಲ್ಲಿಯಾಗಿ ರಸ್ತೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡು ವಿದ್ಯಾರ್ಥಿಗಳು ನರಳಾಡಿದ್ದಾರೆ.

    ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಕೋಳಾಲ ಪಿಎಸೈ ಯೋಗೀಶ್ ಮಕ್ಕಳನ್ನು ತಾವೇ ಎತ್ತಿ ತಮ್ಮ ಕಾರಿನಲ್ಲೇ ದೊಡ್ಡ ಸಾಗ್ಗೆರೆ ಹಾಗೂ ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.


    Provided by
    Provided by

    ಈ ಘಟನೆಯಲ್ಲಿ ಶಿಕ್ಷಣ ಇಲಾಖೆ ಬಿಇಓ ಮತ್ತು ಚಿಂಪುಗಾನಹಳ್ಳಿ ಶಾಲೆಯ ಮುಖ್ಯಶಿಕ್ಷಕರ ದಿವ್ಯ ನಿರ್ಲಕ್ಷ ಕಂಡು ಬಂದಿದೆ.  ಭದ್ರತೆಯೇ ಇಲ್ಲದ ಟಾಟಾ ಎಸಿ ವಾಹನದಲ್ಲಿ ಸರಕಾರಿ ಶಾಲೆಯ ಮಕ್ಕಳನ್ನು ಕರೆದುಕೊಂಡು ಹೋಗಲು ಬಿಇಓ ಅನುಮತಿ ನೀಡಿದ್ದಾದರೂ ಏಕೆ ಎಂಬುದೇ ಪ್ರಶ್ನೆ ಕೇಳಿ ಬಂದಿದೆ.

    ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಹೆಚ್ಚಿನ ಚಿಕಿತ್ಸೆಗೆ ನೆರವು ಮಾಡಿದ್ದಾರೆ.

    ಕ್ರಮಕ್ಕೆ ಒತ್ತಾಯ:

    ಶಿವಕುಮಾರ್ ಮೇಷ್ಟ್ರು ಮನೆ

    ಘಟನೆ ಸಂಬಂಧ ನಮ್ಮತುಮಕೂರು ಜೊತೆಗೆ ಮಾತನಾಡಿದ ಕಾಳಜಿ ಫೌಂಡೇಶನ್ ತುಮಕೂರು ಇದರ ಕಾನೂನು ಸಲಹೆಗಾರರಾದ  ಶಿವಕುಮಾರ್ ಮೇಷ್ಟ್ರು ಮನೆ , ಲಗೇಜ್ ಕ್ಯಾರಿಯರ್ ವಾಹನದಲ್ಲಿ ಮಕ್ಕಳನ್ನು ಕುರಿಗಳಂತೆ ತುಂಬಿಸಿಕೊಂಡು ಹೋಗಿರುವ  ಈ ಘಟನೆಯನ್ನು ನೋಡಿದ್ರೆ ನಾಚಿಕೆಯಾಗಬೇಕು,  ಶಿಕ್ಷಣ ಇಲಾಖೆ ಆಯುಕ್ತರ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ.  ಸರ್ಕಾರಿ ವಾಹನದಲ್ಲೇ ಇಷ್ಟೇ ಮಿತಿಯಲ್ಲಿ ಮಕ್ಕಳನ್ನು ಕರೆದೊಯ್ಯಬೇಕು ಎನ್ನುವ ನಿಯಮವಿದೆ. ಈ ಎಲ್ಲ ಆದೇಶಗಳನ್ನು ಉಲ್ಲಂಘಿಸಿ, ಮಕ್ಕಳನ್ನು ಕರೆದೊಯ್ದು ಅವರ ಜೀವನದಲ್ಲಿ ಚೆಲ್ಲಾಟವಾಡಿದ್ದಾರೆ. ಇದಕ್ಕೆಲ್ಲ ನೇರ ಹೊಣೆ ಮುಖ್ಯಶಿಕ್ಷಕರು ಹಾಗೂ ಮಕ್ಕಳನ್ನು ಕರೆದೊಯ್ಯಲು ಅನುಮತಿ ನೀಡಿದ ಬಿಇಒ,  ಇವರಿಬ್ಬರ ವಿರುದ್ಧವೂ ಉಪ ನಿರ್ದೇಶಕರು ದೂರು ದಾಖಲಿಸಬೇಕು. ವಾಹನ ಮಾಲಿಕರು, ಡ್ರೈವರ್ ವಿರುದ್ಧವೂ ಕ್ರಮಕೈಗೊಳ್ಳಬೇಕು.  ಬಿಇಒ ಮತ್ತು ಮುಖ್ಯ ಶಿಕ್ಷಕರನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಅವರು ಒತ್ತಾಯಿಸಿದರು.

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ

    June 24, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಜೂ.28 ರಿಂದ ಪೋಲಿಯೋ ಲಸಿಕೆ ಕಾರ್ಯಕ್ರಮ

    June 25, 2026

    ಕೊರಟಗೆರೆ: ತಾಲ್ಲೂಕಿನ 142 ಆರೋಗ್ಯ ಕೇಂದ್ರದಲ್ಲಿ ಜೂ.28ರಿಂದ ಜು.1ರ ತನಕ ಪೋಲಿಯೋ ಲಸಿಕೆ ಕಾರ್ಯಕ್ರಮ ನಡೆಯಲಿದೆ. ಪೋಷಕರು ತಪ್ಪದೇ ತಮ್ಮ…

    ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಪ್ರತಿಯೊಬ್ಬ ನಾಗರಿಕನ ಕರ್ತವ್ಯ: ಪಿಎಸ್‌ ಐ ತೀರ್ಥೇಶ್

    June 25, 2026

    ಬಿ.ಕೆ.ಶ್ರೀನಿವಾಸ್ (ಬೆಂಕೋಷ್ಣಿ) ಅವರ ‘ಜೀವನಯಾನ’ ಪುಸ್ತಕ ಬಿಡುಗಡೆ

    June 25, 2026

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.