nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    January 20, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ
    • ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?
    • ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ
    • 8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!
    • ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ
    • ವಿದ್ಯಾರ್ಥಿನಿಯರಿಗೆ ಮುಟ್ಟಿನ ಕಪ್ ಬಳಕೆ: ಶಿಕ್ಷಕಿಯರು ಮತ್ತು ತಾಯಂದಿರಿಗೆ ಜಾಗೃತಿ ಮೂಡಿಸಲು ಆರೋಗ್ಯ ಇಲಾಖೆ ನಿರ್ಧಾರ
    • ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಅವಾಚ್ಯ ಹೇಳಿಕೆ: ಡಿ.ಕೆ.ಸುರೇಶ್ ವಿರುದ್ಧ ಜೆಡಿಎಸ್ ಮುಖಂಡರಿಂದ ಆಕ್ರೋಶ
    • ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಕ್ಕಳಿಗೆ ಬಾಲ್ಯ ಅನುಭವಿಸಲು ಅವಕಾಶ ಒದಗಿಸಬೇಕು: ನ್ಯಾ.ಮಾಯಣ್ಣ
    ರಾಜ್ಯ ಸುದ್ದಿ June 12, 2024

    ಮಕ್ಕಳಿಗೆ ಬಾಲ್ಯ ಅನುಭವಿಸಲು ಅವಕಾಶ ಒದಗಿಸಬೇಕು: ನ್ಯಾ.ಮಾಯಣ್ಣ

    By adminJune 12, 2024No Comments2 Mins Read
    karavara

    ಕಾರವಾರ: ಮಕ್ಕಳು ತಮ್ಮ ಶಿಕ್ಷಣದೊಂದಿಗೆ ಬಾಲ್ಯವನ್ನು ಆನಂದಿಸಲು ಅಗತ್ಯವಿರುವ ಎಲ್ಲಾ ಅವಕಾಶಗಳನ್ನು ಒದಗಿಸುವ ಮೂಲಕ, ಅವರು ಬಾಲ ಕಾರ್ಮಿಕ ಪದ್ದತಿಗೆ ಒಳಗಾಗದಂತೆ ಪೋಷಕರು ಹಾಗೂ ಸಮಾಜದ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಾಯಣ್ಣ ಹೇಳಿದರು.

    ಬುಧವಾರ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಪೊಲೀಸ್ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ(ರಿ), ಬಾಲಮಂದಿರ ಹೈಸ್ಕೂಲ್ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಮಂದಿರ ಹೈಸ್ಕೂಲ್ (ಹಿಂದೂ ಹೈಸ್ಕೂಲ್) ಸಭಾಂಗಣದಲ್ಲಿ ನಡೆದ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಬಾಲ ಕಾರ್ಮಿಕ ಪದ್ದತಿ ಒಂದು ಅನಿಷ್ಠ ಪದ್ದತಿಯಾಗಿದೆ. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ಯಮದಲ್ಲಿ ಬಳಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಬಗ್ಗೆ ಪೋಷಕರು ಹಾಗು ಎಲ್ಲಾ ಉದ್ದಿಮೆದಾರರು ಜಾಗೃತರಾಗುವುದು ಅತ್ಯಗತ್ಯ. ಬಾಲ ಕಾರ್ಮಿಕ ಪದ್ದತಿಗೆ ಪೋಷಕರ ಬಡತನ ಮತ್ತು ಅನಕ್ಷರತೆಯೇ ಮುಖ್ಯ ಕಾರಣವಾಗಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಶಾಲೆ ಬಿಟ್ಟ ಮಕ್ಕಳು ಮತ್ತು ಉದ್ದಿಮೆಗಳಲ್ಲಿ ದುಡಿಯುತ್ತಿರುವ ಮಕ್ಕಳು ಕಂಡು ಬಂದಲ್ಲಿ ತಕ್ಷಣ ಉಚಿತ ಸಹಾಯವಾಣಿ ಸಂಖ್ಯೆ 1098 ಅಥವಾ 112 ಗೆ ಮಾಹಿತಿ ನೀಡುವ ಮೂಲಕ ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಸಹಕರಿಸಬೇಕು ಎಂದರು.

    ಕಾರ್ಯಕ್ರಮದಲ್ಲಿ ಬಾಲ ಕಾರ್ಮಿಕ ಪದ್ದತಿ ವಿರೋಧದ ಕುರಿತು ಪ್ರಮಾಣ ವಚನ ಬೋಧಿಸಿ ಮಾತನಾಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ದವಾಗಿದ್ದು, ಕಡ್ಡಾಯ ಶಿಕ್ಷಣ, ಉಚಿತ ಆರೋಗ್ಯ ಸೇವೆ ಒದಗಿಸುವುದು ಸೇರಿದಂತೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾದ ಹಲವು ಸೇವೆಗಳನ್ನು ನೀಡುತ್ತಿದೆ. ಬಾಲ ಕಾರ್ಮಿಕ ಪದ್ದತಿಗೆ ಬಡತನ ಮೂಲ ಕಾರಣವಾಗಿದ್ದು, ಕೂಲಿ ಕಾರ್ಮಿಕರು ಕಟ್ಟಡ ಕಾರ್ಮಿಕರಾಗಿ ನೊಂದಣಿ ಮಾಡಿಕೊಳ್ಳುವ ಮೂಲಕ ಸರ್ಕಾರದಿಂದ ಹಲವು ರೀತಿಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ. ತಮ್ಮ ಮಕ್ಕಳಿಗೆ ಉಚಿತ ವಿದ್ಯಾಭ್ಯಾಸ, ವಿದ್ಯಾಥಿವೇತನ, ಕೌಶಲ್ಯ ತರಬೇತಿಗಳು ಹಾಗೂ ಉದ್ಯೋಗವಕಾಶಗಳ ಸೌಲಭ್ಯ ಪಡೆಯಬಹುದಾಗಿದೆ. ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುವ ಉದ್ದಿಮೆದಾರರಿಗೆ ರೂ.50,000 ಗಳ ವರೆಗೆ ದಂಡ ಹಾಗೂ 2 ವರ್ಷಗಳ ವರೆಗೆ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದ್ದು, ಈ ಬಗ್ಗೆ ವ್ಯಾಪಕ ಜಾಗೃತಿ ಮತ್ತು ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಿರುವ ಪೂರಕ ವಾತಾವಾರಣ ನಿರ್ಮಿಸಿ, ಜಿಲ್ಲೆಯನ್ನು ಬಾಲ ಕಾಮಿಕ ಮುಕ್ತ ಜಿಲ್ಲೆಯನ್ನಾಗಿಸುವ ಮಹತ್ವದ ಜವಾಬ್ದಾರಿ ಎಲ್ಲಾ ಇಲಾಖೆಗಳ ಮೇಲಿದೆ ಎಂದರು.

    ಜಿಲ್ಲಾ ಕಾರ್ಮಿಕ ಅಧಿಕಾರಿ ಅಕ್ಬರ್ ಹಬೀಬಸಾಬ್ ಮುಲ್ಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಿವ್ಯಶ್ರೀ ಸಿ.ಎಂ, ಡಿ.ವೈ.ಎಸ್ಪಿ ಹಾಗೂ ಮಕ್ಕಳ ವಿಶೇಷ ಪೊಲೀಸ್ ಘಟಕದ ಹಿರಿಯ ಮಕ್ಕಳ ಕಲ್ಯಾಣಾಧಿಕಾರಿ ಗಿರೀಶ್, ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಉಪನಿರ್ದೇಶಕಿ ಹೆಚ್.ಹೆಚ್. ಕುಕನೂರು, ಡಿಡಿಪಿಐ ಲತಾ ನಾಯಕ್, ನಗರಸಭೆ ಪೌರಾಯುಕ್ತ ರವಿಕುಮಾರ್, ಬಾಲ ಮಂದಿರ ಹೈಸ್ಕೂಲ್ ನ ಪ್ರಾಂಶುಪಾಲೆ ಅಂಜಲಿ ಎಸ್ ಮಾನೆ ಉಪಸ್ಥಿತರಿದ್ದರು.

    ಬಾಲ ಮಂದಿರ ಹೈಸ್ಕೂಲ್ನ ಶಿಕ್ಷಕಿ ಕಾಂಚನಾ ನಾಯ್ಕ್ ಸ್ವಾಗತಿಸಿದರು. ಇದೇ ವೇಳೆ ವಿಶ್ವ ಬಾಲ ಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಚಿತ್ರಕಲೆ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಬಾಲಮಂದಿರ ಹೈಸ್ಕೂಲ್ ವರೆಗೆ ನಡೆದ ಜಾಥಾಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್ ಚಾಲನೆ ನೀಡಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಬಿಜೆಪಿಯಲ್ಲಿ ಅಸ್ತಿತ್ವ ಕಳೆದುಕೊಳ್ಳುತ್ತಿರುವವರಿಗೆ ನನ್ನ ಹೆಸರೇ ಆಸರೆ: ಪ್ರಿಯಾಂಕ್ ಖರ್ಗೆ ಕಿಡಿ

    January 20, 2026

    ಶಾಲಾ ಮಕ್ಕಳಿಗೆ ಶೂ ಬದಲು ‘ಚಪ್ಪಲಿ’? ವಿಳಂಬ ತಪ್ಪಿಸಲು ಈಗಲೇ ಮಾಹಿತಿ ಸಂಗ್ರಹಕ್ಕೆ ಮುಂದಾದ ಶಿಕ್ಷಣ ಇಲಾಖೆ

    January 20, 2026

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಇ–ಸ್ವತ್ತು ಸಾಫ್ಟ್‌ವೇರ್ ದೋಷ, 49,521 ಅರ್ಜಿಗಳು ಬಾಕಿ: ಸಾರ್ವಜನಿಕರ ಆಕ್ರೋಶ

    January 20, 2026

    ಕೊರಟಗೆರೆ: ರಾಜ್ಯ ಸರ್ಕಾರವು ಡಿಜಿಟಲ್ ಸೇವೆಯಡಿ ಜಾರಿಗೊಳಿಸಿದ ‘ಇ–ಸ್ವತ್ತು’ ಯೋಜನೆ ಕೊರಟಗೆರೆ ತಾಲ್ಲೂಕಿನಲ್ಲಿ ತಾಂತ್ರಿಕ ದೋಷಗಳಿಂದಾಗಿ ಹಳ್ಳ ಹಿಡಿದಿದೆ. ಸಾಫ್ಟ್‌ವೇರ್…

    ಶಾಲೆಗೆ ತೆರಳದೆ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿ 6 ತಿಂಗಳ ನಂತರ ವಿದ್ಯಾರ್ಥಿನಿ ಶಾಲೆಗೆ: ವಿದ್ಯಾರ್ಥಿನಿಯ ಬೇಡಿಕೆ ಏನು?

    January 20, 2026

    ಕೆಪಿಎಸ್ ಮ್ಯಾಗ್ನೆಟ್ ನೀತಿಯ ವಿರುದ್ಧ ಎಐಡಿಎಸ್ ಓ ನೇತೃತ್ವದಲ್ಲಿ ವಿದ್ಯಾರ್ಥಿ, ಪೋಷಕರ ಪ್ರತಿಭಟನೆ

    January 20, 2026

    8 ತಿಂಗಳಲ್ಲಿ 31 ಕೆಜಿ ತೂಕ ಇಳಿಸಿದ ಫಿಟ್‌ ನೆಸ್ ತಜ್ಞೆ; ತೂಕ ಇಳಿಸಲು ಇಲ್ಲಿವೆ 3 ಪ್ರಮುಖ ಸೂತ್ರಗಳು!

    January 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.