nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025
    Facebook Twitter Instagram
    ಟ್ರೆಂಡಿಂಗ್
    • ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
    • ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್
    • ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ
    • ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ
    • ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ
    • ಕಲ್ಪೋತ್ಸವ: ಗಮನ ಸೆಳೆದ ಜಂಬೂ ಸವಾರಿ,  ಕಲಾತಂಡಗಳ ಮೆರುಗು
    • ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ
    • ವಿಕಲಚೇತನ ಸಾಧಕರಿಂದ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!
    ತುಮಕೂರು November 22, 2025

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    By adminNovember 22, 2025No Comments2 Mins Read
    nahida jam jam
    ನಾಹಿದಾ ಜಮ್ ಜಮ್, ಉಪವಿಭಾಗಾಧಿಕಾರಿಗಳು ಹಾಗೂ ನ್ಯಾಯ ಮಂಡಳಿಯ ಅಧ್ಯಕ್ಷರು

    ವರದಿ: ಮಂಜುಸ್ವಾಮಿ ಎಂ.ಎನ್.

    ನಮ್ಮತುಮಕೂರು(Namma Tumakuru): ತಂದೆ—ತಾಯಿ ಆಸ್ತಿ ದಾನ ಮಾಡಿದ ನಂತರ, ಅವರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ ತಂದೆ ತಾಯಿ ತಕ್ಕ ಪಾಠ ಕಲಿಸಿದ್ದು, ತಾವು ದಾನವಾಗಿ ನೀಡಿದ ಆಸ್ತಿಯನ್ನು ವಾಪಾಸ್ ಪಡೆದುಕೊಳ್ಳುವ ಮೂಲಕ, ಮಕ್ಕಳಿಗೆ ಬುದ್ಧಿ ಕಳಿಸಿದ್ದಾರೆ.


    Provided by
    Provided by

    ವಯೋವೃದ್ಧೆಯಿಂದ ದೂರು:

    ಶಿರಾ ತಾಲ್ಲೂಕಿನ ಸಪ್ತಗಿರಿ ಬಡಾವಣೆಯ ರಂಗಮ್ಮ ಅವರು ಹಿರಿಯ ನಾಗರೀಕರ ಸಹಾಯವಾಣಿ ಕೇಂದ್ರ(Senior Citizens Helpline)ವನ್ನು ಸಂಪರ್ಕಿಸಿದ್ದರು. ಈ ಮೂಲಕ ದೂರು ನೀಡಿದ ಅವರು,  ಗುಬ್ಬಿ ತಾಲ್ಲೂಕಿನ ಹಾಗಲವಾಡಿ ಹೋಬಳಿಯ ಮಠ ಗ್ರಾಮದ ಸ.ನಂ. 37ರ 3-26 ಎ/ಗುಂಟೆ ಜಮೀನನ್ನು ದಿನಾಂಕ 23-12-2021 ರಂದು ತಮ್ಮ ಮೂವರು ಪುತ್ರರಾದ ಗುಜ್ಜಾರಪ್ಪ, ಶಿವಣ್ಣ ಮತ್ತು ಹನುಮಂತಯ್ಯ ಅವರಿಗೆ ದಾನಪತ್ರದ ಮೂಲಕ ನೀಡಿದ್ದಾಗಿ ತಿಳಿಸಿದ್ದಾರೆ.

    ಆದರೆ ದಾನಪತ್ರ ಪಡೆದ ನಂತರ ಮಕ್ಕಳು ತಾಯಿಯ ಹಾಗೂ ತಂದೆಯ ಆರೈಕೆ, ಆಹಾರ, ಚಿಕಿತ್ಸಾ ನೆರವು, ಮೂಲಭೂತ ಅಗತ್ಯಗಳನ್ನು ನಿರ್ಲಕ್ಷಿಸಿದ್ದು, ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಆದ್ದರಿಂದ ದಾನಪತ್ರವನ್ನು ರದ್ದುಪಡಿಸಬೇಕು ಎಂದು ಮನವಿ ಸಲ್ಲಿಸಿದ್ದರು.

    ಮಕ್ಕಳ ವಾದ ಏನು?

    ತಂದೆ ತಾಯಿಯ ದೂರಿನ ಹಿನ್ನೆಲೆ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿದ ಮೂವರು ಪುತ್ರರು ಜಂಟಿಯಾಗಿ ಲಿಖಿತ ಹೇಳಿಕೆ ಸಲ್ಲಿಸಿದ್ದು,  ತಾಯಿ–ತಂದೆಗೆ ಆರೈಕೆ ಮಾಡುತ್ತಿದ್ದೇವೆ,  ದಾನಪತ್ರ ತಾಯಿಯ ಸ್ವಇಚ್ಛೆಯಿಂದ ಮಾಡಲಾಗಿದೆ,  ಭೂಮಿಯಲ್ಲಿ ಅಭಿವೃದ್ಧಿ ಮಾಡಿರುವುದರಿಂದ ಹಿಂದಿರುಗಿಸಲು ಸಮ್ಮತಿ ಇಲ್ಲ,  ತಾಯಿ–ತಂದೆ ತಮ್ಮ ಜತೆ ವಾಸಿಸಲು ಬಂದರೆ ನೋಡಿಕೊಳ್ಳಲು ಸಿದ್ಧ ಎಂದು ಹೇಳಿದರು.

    ದಾಖಲೆ ಸಲ್ಲಿಸದ ಮಕ್ಕಳು:

    ನಾವು ತಂದೆ ತಾಯಿಯ ಆರೈಕೆ ಮಾಡುತ್ತಿದ್ದೇವೆ ಎಂದು ಹೇಳಿರುವ ಪುತ್ರರು ಅದಕ್ಕೆ ಸಂಬಂಧಿಸಿದ ಯಾವುದೇ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿಲ್ಲ. ತಮ್ಮ ವಾದಕ್ಕೆ ಯಾವುದೇ ಬೆಂಬಲವಾದ ಸಾಕ್ಷಿಗಳು ಅವರಿಂದ ದೊರೆಯಲಿಲ್ಲ.

    ದಾನಪತ್ರ ರದ್ದು:

    ವಯೋವೃದ್ಧೆಯ ದೂರನ್ನು ವಿಚಾರಣೆ ನಡೆಸಿದ ತುಮಕೂರು ಉಪವಿಭಾಗಾಧಿಕಾರಿಗಳ ಮತ್ತು ನಿರ್ವಹಣಾ ನ್ಯಾಯ ಮಂಡಳಿಯ ನ್ಯಾಯಾಲಯವು ಹಿರಿಯ ನಾಗರಿಕರಾದ ರಂಗಮ್ಮ ಅವರು ತಮ್ಮ ಮೂವರು ಪುತ್ರರಿಗೆ ನೀಡಿದ್ದ ದಾನಪತ್ರವನ್ನು ರದ್ದುಪಡಿಸುವ ಮಹತ್ವದ ಆದೇಶವನ್ನು ಹೊರಡಿಸಿದೆ. ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರೀಕರ ರಕ್ಷಣಾ ಕಾಯ್ದೆ–2007ರ ಕಲಂ 23(1) ರಡಿ ಈ ನಿರ್ಧಾರ ಕೈಗೊಳ್ಳಲಾಗಿದೆ.

    ವೃದ್ಧರ ನಿರ್ಲಕ್ಷಿಸುವವರಿಗೆ ತಕ್ಕಪಾಠ:

    ತಂದೆ ತಾಯಿಯಿಂದ ಆಸ್ತಿಯನ್ನು ವರ್ಗಾಯಿಸಿಕೊಂಡ ನಂತರ ಅವರಿಗೆ ಮೂರು ಹೊತ್ತು ಆಹಾರ, ಮೂಲಭೂತ ಸೌಕರ್ಯಗಳನ್ನೂ ಒದಗಿಸದೇ ನಿರ್ಲಕ್ಷಿಸುವ, ಕಿರುಕುಳ ನೀಡುವ ಮಕ್ಕಳಿಗೆ ನ್ಯಾಯಾಲಯದ ಈ ಆದೇಶ ತಕ್ಕ ಪಾಠ ಕಲಿಸಿದಂತಾಗಿದೆ.

    ನ್ಯಾಯಾಲಯದ ಮಹತ್ವದ ಆದೇಶ:

    ದಾನಪತ್ರದಲ್ಲಿ “ಮಕ್ಕಳು ನನ್ನ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿರುವುದರಿಂದ ನಿರಂತರ ಆರೈಕೆಯ ನಂಬಿಕೆಯಿಂದ ದಾನ” ಮಾಡಲಾಗಿದೆ ಎಂದು ಸ್ಪಷ್ಟವಾದ ಷರತ್ತು ಉಲ್ಲೇಖಿತವಾಗಿದೆ.  ಹಿರಿಯರು ಹೇಳಿದಂತೆ, ಮಕ್ಕಳು ಆ ಷರತ್ತನ್ನು ಪಾಲಿಸದಿರುವುದು ದೃಢಪಟ್ಟ ಕಾರಣ, ಕಲಂ 23(1)ರ ಪ್ರಕಾರ ದಾನಪತ್ರ ರದ್ದುಪಡಿಸಲು ಅಧಿಕಾರವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

    ನ್ಯಾಯಾಲಯದ ಆದೇಶ:

    ಉಪವಿಭಾಗಾಧಿಕಾರಿಗಳು ಹಾಗೂ ನ್ಯಾಯ ಮಂಡಳಿಯ ಅಧ್ಯಕ್ಷರಾದ ನಾಹಿದಾ ಜಮ್ ಜಮ್, ಕೆ.ಎ.ಎಸ್. ಅವರು ತಮ್ಮ ಆದೇಶದಲ್ಲಿ,  ಉಪನೋಂದಣಾಧಿಕಾರಿಗಳು, ಗುಬ್ಬಿ ಕಛೇರಿಯಲ್ಲಿ ದಾಖಲಾದ  ಜಿಬಿಬಿ—1–06849–2021–22, ದಿನಾಂಕ 23—12–2021ರ ದಾನಪತ್ರವನ್ನು  “ನಿರರ್ಥಕ” ಎಂದು ಘೋಷಿಸಿ ರದ್ದುಪಡಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ನವೆಂಬರ್ 22ರಂದು ಸಾಹೇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ: ಡಾ.ಕೆ.ಬಿ.ಲಿಂಗೇಗೌಡ

    November 21, 2025

    ಇ–ಸ್ವತ್ತು ದಾಖಲೆ ವಿಳಂಬ: ಮಹಾನಗರ ಪಾಲಿಕೆಗೆ ಡಿಸಿ ಶುಭ ಕಲ್ಯಾಣ್ ದಿಢೀರ್ ಭೇಟಿ

    November 21, 2025

    ಬಂಜಾರ ಸಂಸ್ಕೃತಿ ಉಳಿವಿಗೆ ತುಮಕೂರಿನಲ್ಲಿ ಅದ್ಧೂರಿ ಜಿಲ್ಲಾ ಮಟ್ಟದ ಕಲಾ ಮೇಳ

    November 20, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಆಸ್ತಿ ಪಡೆದ ನಂತರ ತಂದೆ—ತಾಯಿಯನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ತಕ್ಕಪಾಠ!

    November 22, 2025

    ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರು(Namma Tumakuru): ತಂದೆ—ತಾಯಿ ಆಸ್ತಿ ದಾನ ಮಾಡಿದ ನಂತರ, ಅವರನ್ನು ನಿರ್ಲಕ್ಷಿಸಿದ ಮಕ್ಕಳಿಗೆ ಕಾನೂನಿನ ಮೂಲಕ…

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    ವಿಜೃಂಭಣೆಯಿಂದ ನಡೆದ ದುಂಡಿ ಮಾರಮ್ಮ ದೇವಿ ಜಾತ್ರಾ ವಾರ್ಷಿಕೋತ್ಸವ

    November 21, 2025

    ರಾಜ್ಯದಲ್ಲಿ ಎನ್ ಡಿಎಗೆ 2028ನೇ ಚುನಾವಣೆಯಲ್ಲಿ ಬಿಹಾರ ಮಾದರಿಯ ಗೆಲುವು: ಕೆ.ಎಂ.ಕೃಷ್ಣನಾಯಕ

    November 21, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.