ಸದ್ಯಕ್ಕೆ ಊಟ, ತಿಂಡಿ ದರ ಹೆಚ್ಚಿಸದಿರುವುದಕ್ಕೆ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ನಿರ್ಧರಿಸಿದ್ದು ಈ ಮೂಲಕ ಹೋಟೆಲ್ ಗ್ರಾಹಕರಿಗೆ ಗುಡ್ ನ್ಯೂಸ್ ನೀಡಿದೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಸಭೆ ನಡೆಸಿದ ಹೋಟೆಲ್ ಮಾಲೀಕರ ಸಂಘ, ಊಟ, ತಿಂಡಿ ದರ ಹೆಚ್ಚಳ ಮಾಡದಿರಲು ತೀರ್ಮಾನಿಸಿದೆ. ಈ ಕುರಿತು ಮಾತನಾಡಿದ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್, ಸದ್ಯಕ್ಕೆ ಹೋಟೆಲ್ ಊಟ, ತಿಂಡಿ ದರ ಏರಿಕೆ ಇಲ್ಲ. ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ, ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಚುನಾವಣೆ ಮುಗಿಯುವವರೆಗೆ ಬೆಲೆ ಏರಿಕೆ ಮಾಡದಂತೆ ತೀರ್ಮಾನ ಮಾಡಲಾಗಿದೆ. ಜತೆಗೆ, ಗ್ಯಾಸ್ ದರ ಇಳಿಕೆ ಮಾಡುವಂತೆ ಕೇಂದ್ರದ ಮೇಲೆ ಒತ್ತಡ ಹಾಕಲು ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಎಲ್ಪಿಜಿ ಸಿಲಿಂಡರ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹಲವು ಹೋಟೆಲ್ ಮಾಲೀಕರಿಗೆ ಭಾರೀ ಹೊಡೆತ ಬಿದ್ದಿದೆ. ಊಟ, ತಿಂಡಿ, ಕಾಫಿ, ಟೀ ದರ ತುಂಬಾ ಕಡಿಮೆ ಇದ್ದು ಅವರು ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ತೀರಾ ನಷ್ಟವಾಗುತ್ತಿದ್ದರೆ ಶೇ.10ರ ದರ ಏರಿಕೆ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಪಿಸಿ ರಾವ್ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


