ಸಿನೆಮಾ ಬಹಳ ಪ್ರಭಾವಿ ಮಾಧ್ಯಮ. ನೋಡುಗರ ಮನಸ್ಸು, ಆಲೋಚನೆಯ ಮೇಲೆ ಪ್ರಭಾವ ಬೀರುವ ಶಕ್ತಿ ಸಿನಿಮಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿನಿಮಾಗಳ ಮೂಲಕ ದೇಶದ ಒಳಗಿನ, ಇತರೆ ದೇಶಗಳ ಜನ ಸಂಸ್ಕೃತಿಯನ್ನು ಅರಿಯುವ ಮತ್ತು ಆ ಮೂಲಕ ನಮ್ಮ ಮಾನವೀಯ ಸಂಸ್ಕೃತಿಯನ್ನು ವಿಸ್ತರಿಸಿಕೊಳ್ಳಲು ನೆರವಾಗುತ್ತದೆ. ಇದಕ್ಕೆ ಅಂತಾರಾಷ್ಟ್ರೀಯ ಚಿತ್ರೋತ್ಸವ ವೇಗವರ್ದಕವಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು.
ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಿತ್ರೋತ್ಸವ ನೆರವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಡೀ ಜಗತ್ತು ಮಾನವೀಯ ಬೆಸುಗೆಯಲ್ಲಿ ಬೆರೆಯಲು, ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸಂಸ್ಕೃತಿಯನ್ನು ಪಾಲಿಸಿದಾಗ ಜಗತ್ತಲ್ಲಿ ಶಾಂತಿ ನೆಲೆಸುತ್ತದೆ ಎಂದು ಹೇಳಿದರು.
ಅಂಬೇಡ್ಕರ್ ಅವರು ರೂಪಿಸಿದ ಭಾರತೀಯ ಸಂವಿಧಾನದಲ್ಲಿ, ಇತರೆ ದೇಶಗಳ ಸಂವಿಧಾನದಲ್ಲಿ ಇಲ್ಲದ ಸಾಮಾಜಿಕ ನ್ಯಾಯದ ಮೌಲ್ಯಗಳಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಮತ್ತು ಅವರ ಮೌಲ್ಯಗಳ ಕುರಿತಾದ ಸಿನಿಮಾಗಳಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು ಎಂದರು. ಕುವೆಂಪು ಅವರ ವಿಶ್ವ ಮಾನವ ಸಂಸ್ಕೃತಿಯನ್ನು ವಿಶ್ವದಲ್ಲಿ ಹೆಚ್ಚೆಚ್ಚು ಪಾಲಿಸುವಂತಹ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ವಿಶ್ವ ಸಿನಿಮಾಗಳು ನೆರವಾಗುತ್ತವೆ ಎಂದರು.
ರಾಜ್ಯದಲ್ಲಿ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ನಾವು ಬಾಕಿ ಉಳಿದಿರುವ ಎಲ್ಲಾ ವರ್ಷಗಳ ಉತ್ತಮ ಸಿನಿಮಾಗಳ ಆಯ್ಕೆಗೆ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿ ವರದಿ ಕೊಟ್ಟ ತಕ್ಷಣ ಪ್ರಶಸ್ತಿಗಳನ್ನು ಘೋಷಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


