ಪಾವಗಡ: ವಿದ್ಯಾರ್ಥಿಗಳ ಕಲಿಕೆ ಹಾಗೂ ಹೊಸದಾದ ಜೀವನ ಕೌಶಲ್ಯವನ್ನು ಹೊಂದಲು ‘ಸಂತೋಷ ಕೂಟ ಸಮಾರಂಭ’ ಕಾರ್ಯಕ್ರಮಗಳನ್ನು ಶಾಲೆಯಲ್ಲಿ ಏರ್ಪಡಿಸಲಾಯಿತು,
ತಾಲ್ಲೂಕಿನ ಸಿ.ಕೆ.ಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಂಭಾಗದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಆವರಣದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಇಲಾಖೆಯ ವತಿಯಿಂದ ಏರ್ಪಡಿಸಿದ್ದ 2023- 24ನೇ ಸಾಲಿನ ಸಿ.ಕೆ.ಪುರ ಕ್ಲಸ್ಟರ್ ಮಟ್ಟದ ‘ಸಂತೋಷಕೂಟ ಸಮಾರಂಭ ಹಾಗೂ ಕಲೋತ್ಸವ’ ಬಹಳ ಅದ್ದೂರಿಯಾಗಿ ನಡೆಯಿತು.
ಸಿ.ಕೆ.ಪುರ ಕ್ಲಸ್ಟರ್ ಸಿ.ಆರ್.ಪಿಯಾದ ಮೂರ್ತಿ ಅವರು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಹಿಂದಿನ ಮಕ್ಕಳೇ, ನಾಳಿನ ಪ್ರಜೆಗಳು. ನಿಮ್ಮ ಮುಂದಿನ ಜೀವನವನ್ನು ರೂಪಿಸಲಿಕ್ಕೆ ಪ್ರಾಥಮಿಕ ಶಿಕ್ಷಣ ಒಂದು ಅಡಿಗಲ್ಲು. ಈ ಹಂತದಲ್ಲಿ ಉತ್ತಮ ಶಿಕ್ಷಣ ಪಡೆದರೆ, ಮುಂದಿನ ಹಂತದಲ್ಲಿ ನಿಮ್ಮ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗಲಿದೆ ಎಂದು ಸ್ಫೂರ್ತಿ ತುಂಬಿದರು.
ಇದೇ ವೇಳೆ ಶಾಲೆಯ ಶಿಕ್ಷಕರಾದ ಲಕ್ಷ್ಮೀನಾರಾಯಣ ಹಾಗೂ ಶ್ರೀನಿವಾಸ್ ಅವರನ್ನು ಬೀಳ್ಕೊಟ್ಟು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ, ಎಸ್ ಡಿ ಎಂ ಸಿ ಅಧ್ಯಕ್ಷ ನರಸಿಂಹಪ್ಪ, ಶಿಕ್ಷಕರಾದ ಪೃಥ್ವಿರಾಜ್, ಸರಸ್ವತಿ ಶಿಕ್ಷಕಿ, ರಾಮಪ್ಪ ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರು, ನಾಗರಾಜು ನಿವೃತ್ತ ಶಿಕ್ಷಕರು, ಹನುಮಂತರಾಯಪ್ಪ ಕಲಾವಿದ ಸಿ.ಕೆ.ಪುರ, ಮಹಾಲಿಂಗಪ್ಪ ಗ್ರಾಮ ಪಂಚಾಯತಿ ಸದಸ್ಯರು, ಊರಿನ ಗ್ರಾಮಸ್ಥರು ವಿದ್ಯಾರ್ಥಿಗಳು ಇದ್ದರು.
ವರದಿ: ರಾಮಪ್ಪ ಸಿ.ಕೆ.ಪುರ