nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026
    Facebook Twitter Instagram
    ಟ್ರೆಂಡಿಂಗ್
    • ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!
    • ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ
    • ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ
    • ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು
    • ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ
    • ಮತದಾರರ ಕರಡು ಪಟ್ಟಿ ಪ್ರಕಟ: 2.37 ಲಕ್ಷ ಮತದಾರರು ಕರಡಿನಿಂದ ಡಿಲೀಟ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ 23 ಕೊನೆಯ ದಿನ
    • “ನೀವು ಹೇಳಿದಂತೆ ಕೇಳದಿದ್ರೆ ದ್ವೇಷಿಸ್ತೀರಾ?”: ಶಾಸಕ ಎಚ್.ಡಿ. ರೇವಣ್ಣಗೆ ಹಾಸನ ಜಿಲ್ಲಾಧಿಕಾರಿ ತಿರುಗೇಟು
    • ಕರ್ನಾಟಕ ಸರ್ಕಾರಕ್ಕೆ ಅದಾನಿ ಕೇವಲ ಒಬ್ಬ ಗುತ್ತಿಗೆದಾರ ಅಷ್ಟೇ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮನುಷ್ಯತ್ವವಿಲ್ಲದ ಮಾನವರನ್ನು ತರಗತಿಗಳು ಸೃಷ್ಟಿಸುತ್ತಿವೆ: ಪ್ರೊ. ಬರಗೂರು ರಾಮಚಂದ್ರಪ್ಪ
    ತುಮಕೂರು August 1, 2024

    ಮನುಷ್ಯತ್ವವಿಲ್ಲದ ಮಾನವರನ್ನು ತರಗತಿಗಳು ಸೃಷ್ಟಿಸುತ್ತಿವೆ: ಪ್ರೊ. ಬರಗೂರು ರಾಮಚಂದ್ರಪ್ಪ

    By adminAugust 1, 2024No Comments2 Mins Read
    thumakur collage

    ತುಮಕೂರು: ತರಗತಿಗಳಲ್ಲಿ ತಂತ್ರಜ್ಞಾನದ ಮೇಲಿನ ಅವಲಂಬನೆ ಪುಸ್ತಕಕ್ಕಿಂತಲೂ ಹೆಚ್ಚಾಗಿರುವುದುವಿಪರ್ಯಾಸ. ವಿದ್ಯಾರ್ಥಿಗಳಲ್ಲಿಚರ್ಚಾ ವಲಯವನ್ನುವೃದ್ಧಿಸಿ, ಶಿಕ್ಷಣ ಸಮಾನತೆಯನ್ನು ಕಲಿಸಬೇಕಾದ ತರಗತಿಗಳು ಮನುಷ್ಯತ್ವವಿಲ್ಲದ ಮಾನವರನ್ನು ಸೃಷ್ಟಿಸುತ್ತಿರುವುದು ಈ ಯುಗದದುರಂತ ಎಂದುಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅಸಮಾಧಾನ ವ್ಯಕ್ತಪಡಿಸಿದರು.

    ವಿಶ್ವವಿದ್ಯಾನಿಲಯ ಕಲಾ ಕಾಲೇಜು ಗುರುವಾರ ಆಯೋಜಿಸಿದ್ದ ‘ಕಲಾಸಿರಿ–೨೦೨೪’ ಕಾಲೇಜು ವಾರ್ಷಿಕೋತ್ಸವ ಹಾಗೂ ಜಾನಪದ ಕಲಾಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ತಂತ್ರಜ್ಞಾನದ ಬಳಕೆ ಹೆಚ್ಚಾದಂತೆ ಮನುಷ್ಯ ಸಂಬಂಧ ಕುಸಿಯುತ್ತಿದೆ. ಮುಖ್ಯವಾಗಿಶಿಕ್ಷಕರು–ವಿದ್ಯಾರ್ಥಿಗಳ ನಡುವಿನ ಸಂಬಂಧ ಕುಸಿದಿದೆ. ಶಿಕ್ಷಣದ ಮಹತ್ವ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ತಿಳಿಯಬೇಕಾದ ಪರಿಸ್ಥಿತಿಯುಂಟಾಗಿದೆ. ಮಾನವಿಕ ಮುಖಗಳನ್ನು ತಿಳಿಯಬೇಕಾದ ಯುವಪೀಳಿಗೆ ಲಾಭಕೋರ ಮನಸ್ಥಿತಿಯಿಂದ ಮೌಲ್ಯಗಳನ್ನು ಪಲ್ಲಟಗೊಳಿಸಿ ವಿಕೃತಿ ಮೆರೆಯುತ್ತಿದ್ದಾರೆಎಂದರು.

    ಯಂತ್ರಕ್ಕೆ ಮನುಷ್ಯತ್ವವನ್ನುಕೊಡುವ ಶಿಕ್ಷಣ ನಮ್ಮದಾಗಬೇಕು. ಮಾನವನನ್ನು ಯಂತ್ರವಾಗಿ ಮಾಡುವ ಶಿಕ್ಷಣದಲ್ಲಿ ವಿದ್ಯಾರ್ಥಿಗಳ ಭವಿಷ್ಯ ನಾಶವಾಗುತ್ತಿದೆ.ಭಾರತದಲ್ಲಿ ಮಾನವಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳುವವರ ಸಂಖ್ಯೆ ಕೇವಲ ಶೇ.೫ ರಷ್ಟಿದೆ.ನಮ್ಮ ಶಿಕ್ಷಣ ಎಲ್ಲಿಯವರೆಗೆಜ್ಞಾನಮುಖಿ, ಉದ್ಯೋಗಮುಖಿಎಂಬುದನ್ನು ತಿಳಿಯಬೇಕು. ಶೈಕ್ಷಣಿಕ ವಿಭಾಗೀಕರಣವನ್ನು ವಿದ್ಯಾರ್ಥಿಗಳಲ್ಲಿ ಕಲಿಸಬೇಕು ಎಂದರು.

    ವಿವೇಕರಹಿತ ಶಿಕ್ಷಣ ಪ್ರಯೋಗಗಳಾದ ರಾಷ್ಟ್ರೀಯ ಶಿಕ್ಷಣ ನೀತಿ, ರಾಜ್ಯ ಶಿಕ್ಷಣ ನೀತಿಗಳು ವಿದ್ಯಾರ್ಥಿಗಳನ್ನು ಪ್ರಯೋಗದ ವಸ್ತುಗಳಾಗಿ ಬಳಸಿಕೊಳ್ಳುತ್ತಿವೆ. ಶೈಕ್ಷಣಿಕ ಅಸಮಾನತೆಯನ್ನು ನೀಗುವ ಶಿಕ್ಷಣ ನೀತಿತರಲುಯಾವ ಸರ್ಕಾರದಿಂದಲೂ ಸಾಧ್ಯವಾಗಲಿಲ್ಲ. ಕನ್ನಡ ಭಾಷೆಯನ್ನುಕಡ್ಡಾಯವಾಗಿ ಕಲಿಸಬೇಕೆಂಬ ನಿಯಮ ಮಾಡಿದರೆ ನ್ಯಾಯಾಲಯಗಳ ಮೆಟ್ಟಿಲೇರುವ ಶಾಲಾ ಕಾಲೇಜುಗಳಿಗೆ ಮನ್ನಣೆ ಕೊಡುವ ದುಷ್ಟ ಮನಸ್ಥಿತಿಯವರು ಸೃಷ್ಟಿಯಾಗಿದ್ದಾರೆ ಎಂದರು.
    ಜಾತಿ, ಧರ್ಮ, ಲಿಂಗ, ವರ್ಗ, ವರ್ಣಗಳ ತಾರತಮ್ಯವನ್ನು ಹೋಗಲಾಡಿಸಿ ಆತ್ಮಸ್ಥೈರ್ಯಕೊಡುವ, ಸೌಹಾರ್ದತೆಯನ್ನು ಸಾರುವ, ಶೈಕ್ಷಣಿಕ ಬಿಕ್ಕಟ್ಟುಗಳನ್ನು ಬಗೆಹರಿಸುವ ಶಿಕ್ಷಣ ವ್ಯವಸ್ಥೆ ನಮ್ಮದಾಗಬೇಕು. ವಿದ್ಯಾವಂತರು ಹೆಚ್ಚಾದಂತೆ ಜಾತಿವಾದಿಗಳು ಬೆಳೆಯುತ್ತಿದ್ದಾರೆ. ಸಮಾನತೆಯ ಮುಖವಾಡಗಳನ್ನು ಧರಿಸಿ ಅಸಮಾನತೆಯ ನೆರಳಡಿ ಬದುಕುತ್ತಿರುವ ಅವಿವೇಕಿಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು, ಶಿಸ್ತುಬದ್ಧ ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಗಳಿಂದ ಹೊರಬರಬೇಕು. ಸ್ಥಾನದಿಂದ ಬರುವ ಗೌರವ ಅಲ್ಪಾವಧಿ. ವ್ಯಕ್ತಿತ್ವದಿಂದ ಬರುವಗೌರವ, ಸಿಗುವ ಮನ್ನಣೆ ಶಾಶ್ವತ ಎಂದರು.

    ಪ್ರಾಸ್ತಾವಿಕ ನುಡಿಗಳನ್ನಾಡಿ ಸ್ವಾಗತಿಸಿದ ವಿವಿ ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ. ಕರಿಯಣ್ಣ, ಪಠ್ಯಕ್ಕೆ ಪೂರಕವಾಗಿರುವ ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳ ಎದೆಯಲ್ಲಿ ತುಂಬುವ ಶಿಕ್ಷಣ ನಮ್ಮದಾಗಿದೆ. ಪಾಶ್ಚಿಮಾತ್ಯ ಸಂಸ್ಕೃತಿಯ ಹೊಡೆತದ ನಡುವೆ ಭಾರತದ ಸಂಸ್ಕೃತಿಯನ್ನುಎತ್ತಿಹಿಡಿಯುತ್ತಿರುವ ಕಲಾ ಕಾಲೇಜು ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆ ಮತ್ತು ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗಿದೆ ಎಂದರು.

    ಸಾಮಾಜಿಕ ಚಿಂತಕ ಹಾಗೂ ಜನಪರ ಹೋರಾಟಗಾರ ಕೆ.ದೊರೈರಾಜು ಹಾಗೂ ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್ ಅವರಿಗೆ ವಿವಿ ಕಲಾ ಕಾಲೇಜಿನ ವಾರ್ಷಿಕ ‘ಕಲಾಸಿರಿ-೨೦೨೪’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
    ಚಲನಚಿತ್ರ ನಟ ಕುಮಾರ್ ಗೋವಿಂದ್ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ವಿವಿ ಕುಲಸಚಿವೆ ನಾಹಿದಾ ಜಮ್ ಜಮ್ ‘ಕಲಾಸಿರಿ-೨೦೨೪’ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಮಾಡಿದರು. ಪರೀಕ್ಷಾಂಗ ಕುಲಸಚಿವ ಪ್ರೊ.ಪ್ರಸನ್ನಕುಮಾರ್ ಕೆ.ಕಲಾಸಿರಿ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

    ಸೋಲಿಗರ ಬಸವರಾಜು ಮತ್ತು ಸಂಗಡಿಗರಿಂದ ಸೋಲಿಗರ ಪುಷ್ಪಮಾಲೆ ಕಲಾ ತಂಡ–ಕಲಾ ಪ್ರದರ್ಶನ, ಪ್ರದೀಪ್‌ಎಸ್. ಮತ್ತು ಸಂಗಡಿಗರಿಂದ ಜಾನಪದ ಮೇಳ, ತಿಪ್ಪೇಸ್ವಾಮಿ ಮತ್ತು ಸಂಗಡಿಗರಿಂದ ಬೇಡರ ಪಡೆ ನೃತ್ಯ, ನಿಸರ್ಗಗೋವಿಂದರಾಜ್ ಅವರಿಂದ ಬಯಲು ಸೀಮೆಯ ಛಾಯಾಚಿತ್ರ ಪ್ರದರ್ಶನ, ದಿಬ್ಬೂರು ಮಂಜಣ್ಣ ಮತ್ತು ಸಂಗಡಿಗರಿಂದ ಡಾ.ರಾಜ್ ಕುಮಾರ್ ಗೀತಗಾಯನ, ವಿದ್ವಾನ್ ನಾಗರಾಜ್ ಕೆ. ಅವರಿಂದ ಭರಟನಾಟ್ಯ, ರುದ್ರೇಶ್ ಮತ್ತು ಸಂಗಡಿಗರಿಂದ ವೀರಗಾಸೆ, ಶಶಿಕುಮಾರ್ ಮತ್ತು ಸಂಗಡಿಗರಿಂದ ಕಂಸಾಳೆ ಪ್ರದರ್ಶನ ಹಬ್ಬದ ವಾತಾವರಣ ಸೃಷ್ಟಿಮಾಡಿದವು.

    ವಿವಿ ಕಲಾ ಕಾಲೇಜಿನಸಾಂಸ್ಕೃತಿಕ ಸಮಿತಿಯ ಸಂಯೋಜಕ ಡಾ.ರವಿ ಸಿ.ಎಂ., ಕಲಾಸಿರಿ ವಾರ್ಷಿಕೋತ್ಸವದ ಸಮಿತಿಯ ಡಾ.ಗುಂಡೇಗೌಡ, ಡಾ.ಶಿವಣ್ಣ ಬೆಳವಾಡಿ, ಡಾ.ಆರ್.ಸುದೀಪ್‌ಕುಮಾರ್ ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ತುಮಕೂರು: ಪೆಟ್ರೋಲ್ ಸುರಿದು ಮಹಿಳೆ ಕೊಲೆಗೈದಿದ್ದ ಆರೋಪಿ ಸೆರೆ

    August 25, 2026

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೊಳೆನರಸೀಪುರ ಪುರಸಭೆ: ಶಾಸಕರ ಅಸಮಾಧಾನಕ್ಕೆ ಬಲಿಯಾಯಿತೇ ಅಧಿಕಾರಿಯ ದಕ್ಷತೆ? ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ!

    August 25, 2026

    ​ಹೊಳೆನರಸೀಪುರ:  ಸ್ಥಳೀಯ ಪುರಸಭೆಯಲ್ಲಿ ಶಾಸಕರ ಅಣತಿಯಂತೆ ಕೆಲಸ ಕಾರ್ಯಗಳು ನಡೆಯುವುದು ಹಾಗೂ ಅವರೇ ಸಭೆಯ ಅಜೆಂಡಾಗಳನ್ನು ನಿರ್ಧರಿಸುವುದು ಹೊಳೆನರಸೀಪುರ ಸಾರ್ವಜನಿಕರಿಗೆ…

    ಕೊರಟಗೆರೆ: ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

    August 25, 2026

    ಕೊರಟಗೆರೆ: ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ; ಚುನಾವಣಾ ನೋಂದಣಾಧಿಕಾರಿ ಸೋಮಪ್ಪ ಕಡಕೋಳ ಸೂಚನೆ

    August 25, 2026

    ಹೊಳೆನರಸೀಪುರ: ತಾತನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ: ವೈದ್ಯರ ನೇಮಕಕ್ಕೆ ಗುರುವಾರದವರೆಗೆ ಗಡುವು ನೀಡಿದ ಗ್ರಾಮಸ್ಥರು

    August 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.