ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿಯಿಂದ ದೀಪಾವಳಿ ಉಡುಗೋರೆಯಾಗಿ ಆಯ್ದ ಪತ್ರಕರ್ತರಿಗೆ ಸಿಹಿ ತಿಂಡಿ ಜೊತೆಗೆ ಹಣವನ್ನು ಇಟ್ಟು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಈ ಬಗ್ಗೆ ಟ್ವಿಟ್ ಮಾಡಿರುವಂತ ಕರ್ನಾಟಕ ಕಾಂಗ್ರೆಸ್,ಮುಖ್ಯಮಂತ್ರಿ ಕಚೇರಿ ನೀಡಿದ 2.5 ಲಕ್ಷ ರೂ. ಲಂಚವನ್ನು ವಾಪಸ್ ಮಾಡುವ ಮೂಲಕ ಪತ್ರಿಕಾಧರ್ಮವನ್ನು ಎತ್ತಿ ಹಿಡಿದಿದ್ದಾರೆ ಎಂಬುದು ತಿಳಿದುಬಂದಿದೆ.
ಕರ್ನಾಟಕದ ಪತ್ರಕರ್ತರು ಪತ್ರಿಕಾಧರ್ಮದ ಪಾವಿತ್ರ್ಯತೆಗೆ ದಕ್ಕೆ ತರುವುದಿಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಪತ್ರಕರ್ತರಿಗೆ ಲಂಚ ನೀಡಿದ್ದೇಕೆ ಎಂಬುದನ್ನು ಮುಖ್ಯಮಂತ್ರಿ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಲಂಚ ನೀಡಿದ ವರದಿಯ ಬಗ್ಗೆ ತನಿಖೆಯಾಗಬೇಕು. ಆ ಹಣ ಯಾರದ್ದು.. ಸರ್ಕಾರದ್ದೇ…ಬಿಜೆಪಿ ಪಕ್ಷದ್ದೇ..ಮುಖ್ಯಮಂತ್ರಿಗಳದ್ದೇ..40% ಕಮಿಷನ್ ಆ ಹಣದ ಮೂಲವೇ.. ಪಡೆದ ಲಂಚವು ಕೊಡುವ ಲಂಚವಾಗಿ ಮಾರ್ಪಟ್ಟಿದೆಯೇ.. ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಕಚೇರಿಯಲ್ಲಿ ನಡೆದದ್ದಕ್ಕೆ ನೀವೇ ಉತ್ತರದಾಯಿ, ತನಿಖೆಯಾಗಬೇಕಲ್ಲವೇ.. ಎಂದು ಟ್ವೀಟ್ ಮೂಲಕ ಕರ್ನಾಟಕ ಕಾಂಗ್ರೆಸ್ ಆಗ್ರಹಿಸಿದೆ.
ಮುಖ್ಯಮಂತ್ರಿ ಕಚೇರಿಯಿಂದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ 2.5 ಲಕ್ಷ ಉಡುಗೊರೆ ನೀಡಲಾಗಿದೆ ಎಂಬ ಸುದ್ದಿ ಹರಿದಾಡುತ್ತಿದೆ. 40% ಕಮಿಷನ್ ನಲ್ಲಿ ನೀಡಿದ ಹಣವೇ.. 40% ಕಮಿಷನ್ ಕರ್ಮಕಾಂಡಗಳನ್ನು ಮುಚ್ಚಿಡಲು ನೀಡಿದ ಲಂಚವೇ.. ಮಾಧ್ಯಮಗಳನ್ನು ಖರೀದಿಸುವ ವ್ಯವಹಾರವು.. ಬಸವರಾಜ ಬೊಮ್ಮಾಯಿ ಅವರೇ, ಆ ಲಂಚದ ಬಗ್ಗೆ ತಾವು ಜನತೆಗೆ ಉತ್ತರಿಸಬೇಕು ಎಂದು ಒತ್ತಾಯಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


