nammatumakuru

    Subscribe to Updates

    Get the latest creative news from FooBar about art, design and business.

    What's Hot

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    • ಮಂಜುಗುಣಿ ಸೇತುವೆ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
    • ಕಾರವಾರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಜೆಟ್‌ ನಲ್ಲಿ ಘೋಷಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  
    ಲೇಖನ November 15, 2025

    ತೆಂಗು ಬೆಳೆ: ಕೆಂಪು ಮೂತಿ ಹುಳು, ಅಣಬೆ ರೋಗ ಹತೋಟಿ ಮಾಡುವುದು ಹೇಗೆ?: ರೈತರಿಗೆ ಮಾಹಿತಿ  

    By adminNovember 15, 2025No Comments3 Mins Read
    red snout beetle fungus disease

    ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ತೆಂಗು ಬೆಳೆಯಲ್ಲಿ ಕೆಂಪು ಮೂತಿ ಹುಳು ಮತ್ತು ಅಣಬೆ ರೋಗ ಬಾಧೆಯು ಹೆಚ್ಚಾಗುತ್ತಿರುವುದರಿಂದ ಸಮಗ್ರವಾಗಿ ಹತೋಟಿ ಮಾಡುವ ಕ್ರಮಗಳ ಕುರಿತು ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಲಹೆ ನೀಡಲಾಗಿದೆ.

    ಕೆಂಪು ಮೂತಿ ಹುಳು:


    Provided by
    Provided by

    ಕೀಟ ಬಾಧೆಯ ಲಕ್ಷಣ ಹಾಗೂ ನಿರ್ವಹಣೆ ಈ ಕೀಟವನ್ನು ವೈಜ್ಞಾನಿಕವಾಗಿ ರಿಂಕೋಫೋರಸ್ ಫೆರುಜೀನಿಯಸ್ ಎಂದು ಗುರುತಿಸಲಾಗಿದ್ದು, ಈ ಕೀಟವು ತನ್ನ ಜೀವನ ಚಿತ್ರವನ್ನು ಪೂರ್ಣಗೊಳಿಸಲು ತೆಂಗಿನ ಮರವನ್ನು ಅವಲಂಬಿಸುವುದರಿಂದ ಎಲ್ಲಾ ಹಂತದಲ್ಲೂ ತೆಂಗಿಗೆ ಹಾನಿ ಉಂಟು ಮಾಡುತ್ತದೆ.

    ಈ ಕೆಂಪು ಮೂತಿ ಹುಳುಗಳು ತೆಂಗಿನ ಮರದ ಕಾಂಡದೊಳಗೆ ಸೇರಿಕೊಂಡು ಮೃಧು ಭಾಗಗಳನ್ನು ಕೊರೆಯುವುದರಿಂದ ಪ್ರಾರಂಭದಲ್ಲಿ ಸಣ್ಣ–ಸಣ್ಣ ರಂಧ್ರಗಳು ಕಾಣಿಸಿಕೊಳ್ಳುತ್ತವೆ. ಕೀಟ ಬಾಧೆಗೆ ಒಳಗಾದ ರಂಧ್ರಗಳಿಂದ ಕಂದು ಬಣ್ಣದ ರಸ ಸೋರಿರುವುದು ಹಾಗೂ ಹುಳುಗಳು ತಿಂದು ಹಾಕಿದ ನಾರು ಹೊರಬಂದಿರುವುದನ್ನು ಕಾಣಬಹುದು. ಕೀಟ ಬಾಧೆಯು ತೀವ್ರವಾದಾಗ ಸುಳಿ ಗರಿಗಳು ಒಣಗಿ, ಹಾನಿಗೊಳಗಾದ ಭಾಗಗಳ ಹತ್ತಿರ ಎಲೆಯ ತೊಟ್ಟು ಎಡಮಟ್ಟೆಗಳು ಸೀಳುತ್ತವೆ. ಕೆಂಪು ಮೂತಿ ಹುಳುವಿನ ಬಾಧೆಯನ್ನು ಖಚಿತಪಡಿಸಿಕೊಳ್ಳಲು ನಿಶ್ಯಬ್ದ ಸಮಯದಲ್ಲಿ ತೆಂಗಿನ ಮರದ ಕಾಂಡಕ್ಕೆ ಕಿವಿಯನ್ನಿಟ್ಟು ಆಲಿಸಿದಾಗ ಹುಳುಗಳು ತಿನ್ನುತ್ತಿರುವ ಶಬ್ದವನ್ನು ಕೇಳಿಸಿಕೊಳ್ಳಬಹುದು. ಕೆಂಪು ಮೂತಿ ಹುಳುಗಳು ಎಳೆಯ ವಯಸ್ಸಿನ ತೆಂಗಿನ ಮರಗಳಿಗೆ ಹೆಚ್ಚು ಹಾನಿಕಾರಕ ಕೀಟವಾಗಿದ್ದು, ಸಾಮಾನ್ಯವಾಗಿ 5 ರಿಂದ 20 ವರ್ಷ ವಯಸ್ಸಿನ ಮರಗಳು ಇದರ ಹಾವಳಿಗೆ ತುತ್ತಾಗುತ್ತವೆ.

    ಕೆಂಪು ಮೂತಿ ಹುಳುಗಳ ನಿರ್ವಹಣೆ:

    ತೆಂಗಿನ ಮರದ ಯಾವುದೇ ಗರಿಗಳನ್ನು ಕತ್ತರಿಸುವಾಗ ಕಾಂಡದಿಂದ 1 ಮೀ. ಉದ್ದ ಬಿಟ್ಟು ಉಳಿದ ಭಾಗ ಕತ್ತರಿಸಿ, ಮೃದುವಾದ ಅಂಗಾಂಶಗಳಿಗೆ ಗಾಯವಾಗದಂತೆ ನೋಡಿಕೊಳ್ಳಬೇಕು. ತೋಟದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಈ ಕೀಟ ಬಾಧೆಯು ಹೆಚ್ಚಿನ ಸಂಖ್ಯೆಯಲ್ಲಿ ಹರಡುವುದನ್ನು ನಿವಾರಿಸಲು ಬಾಧೆಗೊಳಗಾದ ಮರಗಳನ್ನು ಕತ್ತರಿಸಿ, ಅವುಗಳನ್ನು ಸುಟ್ಟು ಹಾಕಬೇಕು. ಕೆಂಪು ಮೂತಿ ಹುಳುಗಳನ್ನು ಆಕರ್ಷಿಸಲು ಎಕರೆಗೆ 1ರಂತೆ ಮೋಹಕ ಬಲೆಗಳನ್ನು ಅಳವಡಿಸಬೇಕು ಹಾಗೂ ಈ ಮೋಹಕ ಬಲೆಗಳನ್ನು ಯಾವುದೇ ಕಾರಣ- ಕ್ಕೂ ತೆಂಗಿನ ಮರಕ್ಕೆ ಕಟ್ಟಬಾರದು ಮತ್ತು ದೂರದ ಮೈದಾನದಲ್ಲಿ (ಭೂಮಿಯಿಂದ 1.2/2 ಮೀ. ಎತ್ತರದವರೆಗೆ)ಕಟ್ಟುವುದರಿಂದ ಹುಳುಗಳನ್ನು ಪರಿಣಾಮಕಾರಿಯಾಗಿ ಹತೋಟಿಯಲ್ಲಿಡಬಹುದು.

    ಸೈನೋಸ್ಯಾಡ್-2.5 ಎಸ್.ಸಿ.ಯನ್ನು ಪ್ರತಿ ಲೀಟರ್ ನೀರಿಗೆ 5 ಮಿ.ಲೀ.ನಂತೆ, ಇಮಿಡಾ ಕ್ಲೋರೊಫಿಡ್ 30.5 ಎಸ್.ಎಲ್.ಅನ್ನು ಪ್ರತಿ ಲೀಟರ್ ನೀರಿಗೆ 1 ಮಿ.ಲೀ.ನಂತೆ ಬಾಧಿತ ಮರದ ಕಾಂಡದ ಎತ್ತರದಲ್ಲಿರುವ ಮೊದಲ ರಂಧ್ರದಿಂದ ಸುರಿದು ಕಾಂಡದಲ್ಲಿ ಸೇರಿಸುವುದರಿಂದ ಕೀಟವನ್ನು ಹತೋಟಿಯಲ್ಲಿಡಬಹುದು. ತೆಂಗಿನ ತೋಟದಲ್ಲಿ ಅಂತರ ಬೆಳೆಗಳನ್ನು ಬೆಳೆಯುವುದರಿಂದ ಈ ಕೀಟದ ಹಾವಳಿಯನ್ನು ಕಡಿಮೆ ಮಾಡಬಹುದು.

    ಅಣಬೆ ರೋಗದ ಲಕ್ಷಣಗಳು ಹಾಗೂ ನಿರ್ವಹಣೆ:

    ಅಣಬೆ ರೋಗವು ಗ್ಯಾನೋಡರ್ಮ ಲುಸಿಡಮ್ ಎಂಬ ಶಿಲೀಂಧ್ರದಿಂದ ಬರುತ್ತದೆ. ಈ ರೋಗವು ಹೆಚ್ಚಾಗಿ ನಿರ್ಲಕ್ಷಿತ ತೋಟಗಳಲ್ಲಿ ಹಾಗೂ ಸಮಗ್ರ ಪೋಷಕಾಂಶ ನಿರ್ವಹಣೆಯ ಕೊರತೆಯಿರುವ ಪ್ರದೇಶಗಳಲ್ಲಿ ಕಂಡು ಬರುತ್ತದೆ. ಮರದಿಂದ ಮರಕ್ಕೆ, ಮಣ್ಣು ಮತ್ತು ಹರಿಯುವ ನೀರಿನ ಮುಖಾಂತರ ಅಣಬೆ ರೋಗ ಹರಡುತ್ತದೆ. ಈ ಶಿಲೀಂಧ್ರದಿಂದ ಬೇರು ಕೊಳೆತು, ಕಾಂಡದ ಬುಡದಿಂದ 1 ಮೀ. ಎತ್ತರದವರೆಗೆ ಕೆಂಪು ಮಿಶ್ರಿತ ಕಂದು ಬಣ್ಣದ ರಸ ಹೊಡೆದು, ಹೊರಭಾಗದ ತೊಗಟೆ ಸತ್ತು ಹೋಗುತ್ತದೆ.

    ಮರದ ಕೆಳಭಾಗದ ಗರಿಗಳು ಮೊದಲು ಹಳದಿ ಬಣ್ಣಕ್ಕೆ ತಿರುಗಿ ನಂತರ ಒಂದೊಂದಾಗಿ ಒಣಗಿ ಜೋತು ಬೀಳುತ್ತವೆ. ರೋಗದ ತೀವ್ರತೆಯಿಂದ ಬಳಲುತ್ತಿರುವ ಮರದ ಕಾಯಿಗಳ ಗಾತ್ರ ಮತ್ತು ಗುಣಮಟ್ಟ ಕಡಿಮೆಯಾಗುತ್ತದೆ. ಸೋಂಕು ಮುಂದುವರೆದಂತೆ ಗರಿಗಳ ಗಾತ್ರ ಕಿರಿದಾಗಿ ಮರದ ಬುಡದಲ್ಲಿ ಚಿಕ್ಕ–ಚಿಕ್ಕ ಅಣಬೆಗಳು ಬೆಳೆದು ಮರ ಸತ್ತು ಹೋಗುತ್ತದೆ.

    ಅಣಬೆ ರೋಗದ ನಿರ್ವಹಣೆ:

    ಸೂಕ್ತ ಬಸಿಗಾಲುವೆ ನಿರ್ಮಾಣ ಮಾಡುವುದರ ಮೂಲಕ ತೋಟಗಳಲ್ಲಿ ನೀರು ನಿಲ್ಲದಂತೆ ಕ್ರಮವಹಿಸಬೇಕು. ಹರಿಯುವ ನೀರು ಹಾಯಿಸುವುದರ ಬದಲಾಗಿ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದರಿಂದ ರೋಗದ ಹರಡುವಿಕೆಯನ್ನು ಕಡಿಮೆ ಮಾಡಬಹುದು. ಈ ರೋಗವು ಮರದಿಂದ ಮರಕ್ಕೆ ಹರಡುವುದನ್ನು ತಪ್ಪಿಸಲು ಮರದ ಸುತ್ತ 1 ಅಡಿ ಅಗಲ ಮತ್ತು 1.5 ಅಡಿ ಆಳದ ಕಂದಕವನ್ನು ತೆಗೆದು ಪ್ರತಿ ಲೀ. ನೀರಿಗೆ 3 ಗ್ರಾಂ, ಕಾಪರ್ ಆಕ್ಸಿಕ್ಲೋರೈಡ್ ಬೆರೆಸಿದ 10 ಲೀ. ದ್ರಾವಣವನ್ನು ಅಥವಾ ಶೇ. 1ರಷ್ಟು ಬೋರ್ಡೋ ದ್ರಾವಣವನ್ನು (ತಯಾರು ಮಾಡಿಕೊಂಡು) ಕಂದಕದಲ್ಲಿ ಹಾಕಿ ಮಣ್ಣಿನಿಂದ ಮುಚ್ಚಬೇಕು. ಸಮಗ್ರ ಪೋಷಕಾಂಶ ನಿರ್ವಹಣೆಯ ಜೊತೆಗೆ ತೆಂಗಿನ ಮರದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಪ್ರತಿ ಮರಕ್ಕೆ 5 ಕೆ.ಜಿ. ಬೇವಿನ ಹಿಂಡಿಯನ್ನು ನೀಡಬೇಕು. ಜೈವಿಕ ಶಿಲೀಂದ್ರ ನಾಶಕವಾದ ಟ್ರೈಕೋಡರ್ಮಾವನ್ನು 50 ಕೆ.ಜಿ. ಕೊಟ್ಟಿಗೆ ಗೊಬ್ಬರಕ್ಕೆ 120 ಗ್ರಾಂನಷ್ಟು ಮಿಶ್ರಣ ಮಾಡಿ ಮರದ ಸುತ್ತಲೂ ಅಗೆದು ಮಣ್ಣಿಗೆ ಹಾಕಬೇಕು. ರೋಗ ಬಾಧಿತೆ ಪ್ರತಿ ಮರಕ್ಕೆ 2 ಮಿ.ಲೀ. ಹೆಕ್ಸಾಕೋನಜೋಲ್ ಶಿಲೀಂದ್ರ ನಾಶಕವನ್ನು 100 ಮಿ.ಲೀ. ನೀರಿನಲ್ಲಿ ಬೆರೆಸಿ ಬೇರಿನ ಮುಖಾಂತರ ಮೂರು ತಿಂಗಳಿಗೊಮ್ಮೆ ವರ್ಷಕ್ಕೆ 4 ಬಾರಿ ನೀಡುವುದರಿಂದ ಈ ರೋಗವನ್ನು ಹತೋಟಿಗೆ ತರಬಹುದು. (ಶೇ.0.2 ಹೆಕ್ಸಾಕೊನಜೋಲ್ ಶಿಲೀಂದ್ರ ನಾಶಕವನ್ನು ಬುಡಕ್ಕೆ 30–40 ಲೀ. ದ್ರಾವಣವನ್ನು ನೆನಸಬೇಕು).


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

    February 23, 2026

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಪೆರು ದೇಶದ ಈ ವಿಚಿತ್ರ ಮಾರುಕಟ್ಟೆ ನೋಡಿದ್ರೆ ನೀವು ಬೆಚ್ಚಿಬೀಳ್ತೀರಾ!

    February 17, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಮಂಗಳೂರು: ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಲೂಡೋ ಕಾಯಿನ್ (ದಾಳ) ನುಂಗಿದ ಪರಿಣಾಮ ಎಂಟು ವರ್ಷದ ಬಾಲಕಿಯೊಬ್ಬಳು ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯವಿದ್ರಾವಕ…

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.