nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026
    Facebook Twitter Instagram
    ಟ್ರೆಂಡಿಂಗ್
    • ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!
    • ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್
    • ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ
    • ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ
    • ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
    • ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ
    • ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕಾಲೇಜು ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ, ಗುರಿ ಸಾಧನೆ ಮಾಡಿ: ಶಾಸಕ ಎಚ್.ಟಿ. ಮಂಜು ಕರೆ
    ಜಿಲ್ಲಾ ಸುದ್ದಿ February 9, 2024

    ಕಾಲೇಜು ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ, ಗುರಿ ಸಾಧನೆ ಮಾಡಿ: ಶಾಸಕ ಎಚ್.ಟಿ. ಮಂಜು ಕರೆ

    By adminFebruary 9, 2024No Comments1 Min Read
    krishnarajapete

    ದ್ವಿತೀಯ ಪಿಯುಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ನಿರ್ಣಾಯಕ ಘಟ್ಟವಾಗಿರುವುದರಿಂದ, ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿ ಸಾಧನೆ ಮಾಡಬೇಕು ಎಂದು ಶಾಸಕ ಹೆಚ್.ಟಿ. ಮಂಜು ಹೇಳಿದರು.

    ಅವರು ಕೃಷ್ಣರಾಜಪೇಟೆ ಪಟ್ಟಣದ ಶ್ರೀ ಕೃಷ್ಣರಾಜ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.


    Provided by
    Provided by

    ವಿದ್ಯಾರ್ಥಿಗಳ ಸಾಧನೆಗೆ ದ್ವಿತೀಯ ಪಿಯುಸಿ ಪರೀಕ್ಷೆಯು ನಿರ್ಣಾಯಕವಾದ ಘಟ್ಟವಾಗಿರುವುದರಿಂದ ಶ್ರದ್ಧಾ ಭಕ್ತಿಯಿಂದ ವ್ಯಾಸಂಗ ಮಾಡಿ ಗುರಿ ಸಾಧಿಸಲು ಸಂಕಲ್ಪ ಮಾಡಬೇಕು. ವಿದ್ಯೆಯ ಜ್ಞಾನದ ಬೆಳಕಿನ ಶಕ್ತಿಯು ಯಾರೂ ಕದಿಯಲಾಗದ ಆಸ್ತಿಯಾಗಿರುವುದರಿಂದ, ಸಾಮಾಜಿಕ ಅಸಮಾನತೆಗಳ ವಿರುದ್ಧ ಹೋರಾಟ ನಡೆಸಿ ಸಮ ಸಮಾಜವನ್ನು ನಿರ್ಮಿಸಲು ವಿದ್ಯೆಯ ಜ್ಞಾನದ ಶಕ್ತಿಯನ್ನು ಬಳಸಿಕೊಳ್ಳಬೇಕು. ಯುವಶಕ್ತಿಯು ಬಲಿಷ್ಠ ಶಕ್ತಿಯಾಗಿದ್ದು, ಸುಭದ್ರವಾದ ಸದೃಢ ರಾಷ್ಟ್ರದ ನಿರ್ಮಾಣಕ್ಕೆ ನಿರ್ಣಾಯಕವಾಗಿರುವುದರಿಂದ ಯುವಜನರು ದೇಶಪ್ರೇಮವನ್ನು ಬಳಸಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕು. ಸೇವಾ ಮನೋಭಾವನೆ ಹಾಗೂ ಪರೋಪಕಾರ ಗುಣಗಳು ಜೀವನದ ಉಸಿರಾಗಬೇಕು ಎಂದು ಮಂಜು ಕರೆ ನೀಡಿದರು.

    ಬಂಡಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಕ್ಷಣ ತಜ್ಞರಾದ ಗುಬ್ಬಿಯ ಡಾ. ಜಿ.ಬಿ. ಮಲ್ಲಪ್ಪ ಮಾತನಾಡಿ ಕೃಷ್ಣರಾಜಪೇಟೆ ತಾಲೂಕಿನಲ್ಲಿ 23 ಪದವಿ ಪೂರ್ವ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದರೂ ಕೃಷ್ಣರಾಜ ಗುಣಾತ್ಮಕ ಶಿಕ್ಷಣಕ್ಕೆ ಹಾಗೂ ಅತ್ಯುತ್ತಮವಾದ ಫಲಿತಾಂಶಕ್ಕೆ ತಾಲೂಕಿನಲ್ಲಿಯೇ ಹೆಸರುವಾಸಿಯಾಗಿದೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಪ್ರವೇಶದ ಸಂಖ್ಯೆಯು ಹೆಚ್ಚಾಗುತಿದೆಯಲ್ಲದೆ, ಕಾಲೇಜು ಅತ್ಯುತ್ತಮವಾದ ಫಲಿತಾಂಶವನ್ನು ಪಡೆದುಕೊಂಡು ಪ್ರಗತಿಯ ದಿಕ್ಕಿನತ್ತ ಸಾಗುತ್ತಿದೆ ಎಂದು ಹೇಳಿದರು.

    ಕಾಲೇಜಿನ ಆಡಳಿತಾಧಿಕಾರಿ ಎಸ್.ಬಿ. ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವ ಮುಖಂಡ ಶ್ರೀನಿವಾಸ್ ಕೇಸರಿ, ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಎಂ.ಕೆ. ಹರಿಚರಣತಿಲಕ್, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಮಂಡ್ಯ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿರುವ ಕಾಲೇಜಿನ ವಿಶ್ರಾಂತ ಕನ್ನಡ ಉಪನ್ಯಾಸಕ ಹರಿಚರಣತಿಲಕ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

     

    admin
    • Website

    Related Posts

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026

    ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ

    January 8, 2026

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!

    January 8, 2026

    ಚಿಕ್ಕಮಗಳೂರು: ಹಣದ ಆಸೆಗಾಗಿ ಸ್ವಂತ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ತಳ್ಳಿದ ಅಮಾನವೀಯ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನಲ್ಲಿ ನಡೆದಿದೆ.…

    ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್

    January 8, 2026

    ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ

    January 8, 2026

    ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ

    January 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.